ತಡರಾತ್ರಿ ಪುಂಡರ ಹಾವಳಿ: ಕಾಲೇಜೊಂದರ ಆವರಣದಲ್ಲಿ ಸಿಸಿ ಕ್ಯಾಮೆರಾ, ನೋಟಿಸ್ ಬೋರ್ಡ್ ಗೆ ಹಾನಿ


Team Udayavani, Nov 18, 2022, 9:37 AM IST

3

ಬೆಂ.ಗ್ರಾಮಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಬೆಳಗ್ಗೆ ಸುಮಾರು 8:15 ಗೆ ಕಾಲೇಜಿನ ಬಳಿ ಬರುತ್ತಿದ್ದಂತೆ ಅಲ್ಲಿ ಕಟ್ಟಿದ್ದ ಬ್ಯಾನರ್ ಕಿತ್ತು ಹಾಕಿದ ದೃಶ್ಯ ಕಂಡು ಬಂದಿತು. ನಂತರ ಹೂವಿನ ಕುಂಡಗಳು ಚೆಲ್ಲಾ ಪಿಲ್ಲಿಯಾಗಿ ಬಿದ್ದಿದ್ದವು. ಕಾಲೇಜಿನ ಬಳಿ ಹೋದಾಗ ಅನೇಕ ವಸ್ತುಗಳು ಹಾನಿಯಾಗಿದ್ದು ಗಮನಕ್ಕೆ ಬಂದು ಕಾಲೇಜಿನ ಆವರಣದ ಪರಿಸ್ಥಿತಿ ನೋಡಿ ಒಂದು ರೀತಿಯ ಗಾಬರಿಯಾಯಿತು ಎಂದು ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಲ್. ಎನ್. ಶಶಿಕುಮಾರ್ ತಿಳಿಸಿದರು.

ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಡರಾತ್ರಿ ನಡೆದ ಘಟನೆ ಬಗ್ಗೆ ಪೊಲೀಸರ ಬಳಿ ವಿವರ ಹೇಳುವ ಸಂದರ್ಭದಲ್ಲಿ ಮಾತನಾಡಿ, ನಿನ್ನೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಾಲೇಜಿನ ಆವರಣದ ಮುಂದೆ ಇದ್ದ ಎರಡು ಸಿಸಿ ಕ್ಯಾಮೆರಾ ಗಳನ್ನು ಒಡೆದಿದ್ದಾರೆ. ನೋಟಿಸ್ ಬೋರ್ಡ್ ಗಾಜನ್ನು ಒಡೆದಿದ್ದಾರೆ. ಗೇಟ್ ಬಳಿ ಇದ್ದ ಹೂವಿನ ಕುಂಡಗಳನ್ನು ಛಿದ್ರಗೊಳಿಸಿದ್ದಾರೆ. ನೀರಿನ ಸಿಮೆಂಟ್ ತೊಟ್ಟಿ ಒಡೆದಿದ್ದಾರೆ. ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಹಾನಿಗೊಳಿಸಿದ್ದಾರೆ.

ಗೋಡೆಗಳಿಗೆ ಕಲ್ಲಿನಿಂದ ಹೊಡೆದಿದ್ದಾರೆ. ಗುಟ್ಕಾ ಅಗಿದು ಗೋಡೆಗಳಲ್ಲಿ ಉಗುಳಲಾಗಿದೆ. ಕಾಲೇಜು ಆವರಣದ ಕಟ್ಟೆಗೆ ರಕ್ತದ ಕಲೆ ಅಂಟಿದೆ.  ತುಳಸಿ ಕಟ್ಟೆಯನ್ನು ಹೊಡೆದು ಹಾಕಿದ್ದಾರೆ. ಈ ದುಷ್ಕೃತ್ಯ ಮಾಡಿದವರು ಯಾರು ಎಂದು ತಿಳಿದು ಬಂದಿಲ್ಲ. ಸಿಸಿ ಕ್ಯಾಮೆರಾ ವೀಕ್ಷಿಸಿದಾಗ ಸಿಸಿ ಕ್ಯಾಮೆರಾಗೆ ಫೋಮ್ ಸ್ಪ್ರೇ ಸಿಂಪಡಿಸಿ ಆದಷ್ಟು ಮಬ್ಬು ಮಾಡಿ ಕೋಲಿನಿಂದ ಕ್ಯಾಮೆರಾ ಒಡೆದಿರುವುದು ಕಂಡು ಬಂದಿದೆ ಎಂದು ತಿಳಿಸಿದರು.

ಈ ಬಗ್ಗೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಸಿಬಿಸಿ ಉಪಾಧ್ಯಕ್ಷರ ಗಮನಕ್ಕೂ ಈ ವಿಚಾರ ತಿಳಿಸಲಾಗಿದೆ. ಕಾಲೇಜಿನಲ್ಲಿ ಅನೇಕ ದಾಖಲೆಗಳು, ಕಡತಗಳು ಇರುವುದರಿಂದ ಕಾಲೇಜಿಗೆ ರಕ್ಷಣೆ ಬೇಕಿದೆ. ಭಯದ ವಾತಾವರಣ ಹೋಗಬೇಕಿದೆ ಎಂದು ತಿಳಿಸಿದರು.

ಮೇ ತಿಂಗಳಲ್ಲೂ ನಡೆದಿತ್ತು ಕಳ್ಳತನ: ಮೇ ತಿಂಗಳಲ್ಲಿಯೂ ಕೆಲವು ಕಿಡಿಗೇಡಿಗಳು ಸಂಪ್ ಮೋಟರ್ ಕಳವು ಮಾಡಿದ್ದರು. ಕಡಿಯುವಕಲ್ಲು ಮುರಿಯಲಾಗಿತ್ತು. ಪೈಪ್ ಲೈನ್ ಗಳನ್ನು ಕಿತ್ತು ಹಾಕಲಾಗಿತ್ತು. ಇದೆಲ್ಲಾ ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು. ಕೃತ್ಯ ಮಾಡಿದವರ ಚಹರೆಯು ಕಾಣುತ್ತಿತ್ತು. ಈ ಬಗ್ಗೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕಿಡಿಗೇಡಿಗಳು ಮತ್ತೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಿ, ಕಾಲೇಜಿಗೆ ಸಂಬಂಧಿಸಿದ ಅನೇಕ ವಸ್ತುಗಳನ್ನು ನಾಶಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪಿಎಸ್ ಐ ಈರಮ್ಮ, ಸಿಪಿಐ ವೀರೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.