ದೋಣಿಯಲ್ಲೇ ಸಾಗುತ್ತಿದೆ “ಕುರು ಕುದ್ರು’ ವಾಸಿಗಳ ಬದುಕು… ನದಿ ದಾಟಲು ದೋಣಿಯೇ ಆಸರೆ

ತೂಗು ಸೇತುವೆಗಾಗಿ 2 ದಶಕಗಳಿಗೂ ಹೆಚ್ಚು ಕಾಲದ ಬೇಡಿಕೆ

Team Udayavani, Nov 19, 2022, 9:37 AM IST

ದೋಣಿಯಲ್ಲೇ ಸಾಗುತ್ತಿದೆ “ಕುರು ಕುದ್ರು’ ವಾಸಿಗಳ ಬದುಕು

ಕುಂದಾಪುರ : ಮಳೆಗಾಲ ಮಾತ್ರವಲ್ಲ ವರ್ಷದ 365 ದಿನಗಳು ಸಹ ಇಲ್ಲಿನ ಜನರಿಗೆ ದೋಣಿ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡೇ ನದಿ ದಾಟಿ, ಬದುಕು ಕಟ್ಟಿ ಕೊಳ್ಳಬೇಕಾದ ಅನಿವಾರ್ಯ. ಶಾಲೆ, ಪೇಟೆ, ಅಗತ್ಯ ವಸ್ತುಗಳ ಖರೀದಿ, ಕಚೇರಿ ಕೆಲಸ, ಇನ್ನಿತರ ದೈನಂದಿನ ಕಾರ್ಯಗಳಿಗೆ ಈ ದ್ವೀಪವಾಸಿಗಳಿಗೆ ದೋಣಿಯೊಂದೇ ಆಸರೆ.

ಇದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಡ ಗ್ರಾ.ಪಂ. ವ್ಯಾಪ್ತಿಯ ಪಡುಕೋಣೆ ಸಮೀಪದ “ಕುರು ಕುದ್ರು’ ದ್ವೀಪವಾಸಿಗಳ ನಿತ್ಯ ಅನುಭವಿಸುತ್ತಿರುವ ಸಾಹಸಮಯ ಚಿತ್ರಣ.
ಕುರು ಕುದ್ರುವಿನ ಸುತ್ತ ಸೌಪರ್ಣಿಕಾ ನದಿಯಿದೆ. ಮರವಂತೆ, ಪಡುಕೋಣೆ, ನಾವುಂದ ಗ್ರಾಮಗಳು 3 ಸುತ್ತಲೂ ಈ ಕುರುವನ್ನು ಆವರಿಸಿಕೊಂಡಿವೆ. ಆದರೆ ಮಧ್ಯೆ ನದಿಯೊಂದು ಮಾತ್ರ ಇವುಗಳನ್ನು ಬೇರ್ಪಡಿಸಿದೆ. ಮರವಂತೆಯಿಂದ ದೋಣಿ ಮೂಲಕ, ಮತ್ತೂಂದು ಕಡೆಯಿಂದ ನಾಡದ ಪಡು ಕೋಣೆಯಿಂದ ದೋಣಿ ಮೂಲಕ ಈನ ಕುರು ಕುದ್ರು ವಿಗೆ ಬರಬಹುದು. ಇಲ್ಲಿನ ಜನರಿಗೆ ತೂಗು ಸೇತುವೆಯೊಂದು ಆದರೆ ಮತ್ತೆಲ್ಲ ಸಮಸ್ಯೆಗಳು ಈಡೇರಿದಂತೆಯೇ. 2 ದಶಕಗಳಿಗೂ ಹೆಚ್ಚು ಕಾಲದಿಂದ ಬೇಡಿಕೆ ಇಡುತ್ತಿದ್ದು, ಇನ್ನೂ ಈಡೇರಿಲ್ಲ. ದ್ವೀಪವಾಸಿಗಳ ಬದುಕು ಮಾತ್ರ ದೋಣಿಯಲ್ಲೇ ಕಳೆದು ಹೋಗುತ್ತಿದೆ.

20 ಮಕ್ಕಳು ಶಾಲೆಗೆ
ಕುರು ಕುದ್ರು 40 ಎಕರೆ ವಿಸ್ತೀರ್ಣ ಹೊಂದಿದ್ದು, ಒಟ್ಟು 8 ಕುಟುಂಬಗಳು ನೆಲೆಸಿದ್ದು, 75 – 80 ಮಂದಿ ಇಲ್ಲಿದ್ದಾರೆ. ಹಿಂದೆ ಇನ್ನು 8-10 ಮನೆಗಳಿದ್ದು, ಅವರೆಲ್ಲ ಈ ಸಂಕಷ್ಟದ ಬದುಕಿನಿಂದಾಗಿ ದ್ವೀಪ ಬಿಟ್ಟು, ಬೇರೆಡೆಗೆ ತೆರಳಿದ್ದಾರೆ. 1ನೇ ತರಗತಿಯಿಂದ ಕಾಲೇಜು ವರೆಗಿನ 20 ಮಕ್ಕಳು ಪ್ರತೀ ನಿತ್ಯ ಈ ನದಿಯನ್ನು ದೋಣಿ ಮೂಲಕ ದಾಟಿ ಹೋಗಿ ಬರುತ್ತಿದ್ದಾರೆ. ಭತ್ತ ಹಾಗೂ ತೆಂಗು ಕೃಷಿಯೇ ಇಲ್ಲಿನ ಜನರ ಬದುಕಿಗೆ ಆಸರೆಯಾಗಿದೆ. ಇಲ್ಲೊಂದು ಕಿ.ಪ್ರಾ. ಶಾಲೆ ಇತ್ತು. ಶಿಕ್ಷಕರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದ ಕಾರಣ ಸುಮಾರು 20 ವರ್ಷಗಳ ಹಿಂದೆ ಆ ಶಾಲೆ ಮುಚ್ಚಿದೆ. ಈಗದರ ಕುರುಹು ಮಾತ್ರವಿದೆ.

ದೋಣಿಯೇ ಆಧಾರ
ಮಳೆಗಾಲವಿರಲಿ, ಬೇಸಗೆಯೇ ಇರಲಿ. ದೋಣಿಯೊಂದೇ ಇಲ್ಲಿನ ವಾಸಿಗಳಿಗೆ ನದಿ ದಾಟಲು ಊರುಗೋಲು. ಮಳೆಗಾಲದಲ್ಲೂ ತುಂಬಿ ಹರಿಯುವ ಸೌಪರ್ಣಿಕಾ ನದಿ ದಾಟಿ ಶಾಲೆಗೆ ಬರಬೇಕಾದ ಅನಿವಾರ್ಯತೆ ಮಕ್ಕಳದು. ಯಾರಿಗಾದರೂ ಅನಾರೋಗ್ಯ ಉಂಟಾದರೆ, ಗರ್ಭಿಣಿಯರ ಪಾಡಂತೂ ಹೇಳತೀರದು.

20 ವರ್ಷಗಳಿಂದಲೂ ಬೇಡಿಕೆ
ಕುರು-ಪಡುಕೋಣೆ ನಡುವೆ ತೂಗು ಸೇತುವೆ ನಿರ್ಮಿಸಿಕೊಡಿ ಎಂಬುದು ಸುಮಾರು 2 ದಶಕಗಳಿಂದಲೂ ನಾವು ಬೇಡಿಕೆ ಇಡುತ್ತಿದ್ದೇವೆ. ಐ.ಎಂ. ಜಯರಾಮ ಶೆಟ್ಟರ ಕಾಲದಿಂದಲೂ ಒತ್ತಾಯಿಸುತ್ತಿದ್ದೇವೆ. ಆ ಬಳಿಕದ ಎಲ್ಲ ಶಾಸಕರು, ಸಂಸದರು, ಸರಕಾರಕ್ಕೆ, ಅಧಿಕಾರಿಗಳಿಗೆ ಮನವಿ ಕೊಡುತ್ತಿದ್ದೇವೆ. ಆದರೆ ಈವರೆಗೆ ನಮ್ಮ ಬೇಡಿಕೆ ಮಾತ್ರ ಈಡೇರಿಲ್ಲ.
– ರಾಮಚಂದ್ರ ಹೆಬ್ಟಾರ್‌ ಕುರು ಕುದ್ರು, ಊರ ಹಿರಿಯರು

ತೂಗು ಸೇತುವೆಗೆ ಪ್ರಯತ್ನ
ಕುರುಕುದ್ರುವಿಗೆ ಸ್ವತಃ ದೋಣಿಯಲ್ಲಿ ಹೋಗಿ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಿದ್ದೇನೆ. ತೂಗು ಸೇತುವೆಗಾಗಿ ಈಗಾಗಲೇ ಸಂಬಂಧಪಟ್ಟವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕುರು ಕುದ್ರು ನಿವಾಸಿಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಆದ್ಯತೆ ನೆಲೆಯಲ್ಲಿ ತೂಗು ಸೇತುವೆಗಾಗಿ ಪ್ರಯತ್ನಿಸಲಾಗುವುದು.
– ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕರು

ಪ್ರಶಾಂತ್ ಪಾದೆ

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.