ಮಕ್ಕಳ ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ನೀಡಿ


Team Udayavani, Nov 19, 2022, 4:05 PM IST

tdy-8

ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್‌ ಕ್ಲಬ್‌ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಲಯನ್ಸ್‌ ಮಕ್ಕಳ ಸ್ಪರ್ಧೆ(ಆರೋಗ್ಯವಂತ ಮಗು ಆಯ್ಕೆ)ಮತ್ತು ಡಯಾಲಿಸಿಸ್‌ ಮಾಸಾಚರಣೆ ಕಾರ್ಯಕ್ರಮ ನಗರದ ಎಪಿಎಂಸಿ ಸಮೀಪದ ಲಯನ್ಸ್‌ ಕಟ್ಟಡದಲ್ಲಿ ನಡೆಯಿತು.

ಈ ವೇಳೆ ಮಕ್ಕಳ ತಜ್ಞೆ ಡಾ.ಪದ್ಮ ಪ್ರಕಾಶ್‌ ಮಾತನಾಡಿ, ಮಕ್ಕಳು ದೈಹಿಕವಾಗಿಯಷ್ಟೇ ಅಲ್ಲದೇ ಮಾನಸಿಕವಾಗಿಯೂ ಸದೃಢರಾಗಿರಬೇಕಿದೆ. ಈ ದಿಸೆಯಲ್ಲಿ ಮಕ್ಕಳಿಗೆ‌ ಪೌಷ್ಟಿಕ ಆಹಾರ ನೀಡುವುದು, ಅವರ ಚಟುವಟಿಕೆಗಳನ್ನು ಗಮನಿಸಿ, ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ವೈದ್ಯರ ಬಳಿ ಸಲಹೆ ಪಡೆಯಬೇಕಿದೆ ಎಂದು ತಿಳಿಸಿದರು.

ಪೋಷಕರ ಕಾಳಜಿ ಮುಖ್ಯ: ಲಯನ್ಸ್‌ ಕ್ಲಬ್‌ ಅಧ್ಯಕ್ಷ ಎಸ್‌.ಪ್ರಕಾಶ್‌ ಮಾತನಾಡಿ, ಲಯನ್ಸ್‌ ಕ್ಲಬ್‌ ವತಿಯಿಂದ ಪ್ರತಿವರ್ಷ ಆರೋಗ್ಯಕರ ಮಕ್ಕಳ ಸ್ಪರ್ಧೆಗಳನ್ನು ಏರ್ಪಡಿಲಾಗುತ್ತಿದ್ದು, ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಎಲ್ಲಾ ಮಕ್ಕಳು ಸಹ ಚೂಟಿ ಉಳ್ಳವರೇ. ಆದರೆ ಅವರ ಚಟುವಟಿಕೆ, ಕ್ರಿಯಾಶೀಲತೆ, ಆರೋಗ್ಯದ ಬಗ್ಗೆ ಪೋಷಕರ ಕಾಳಜಿ ಮುಖ್ಯವಾಗಿದೆ. ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನ ನೀಡಲಾಗುತ್ತಿದೆ ಎಂದರು.

ಬಹುಮಾನ ಪಡೆದ ಮಕ್ಕಳು: ಒಂದು ವರ್ಷ, ಎರಡು ವರ್ಷ ಹಾಗೂ ಮೂರು ವರ್ಷ ಈ ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಿತು. ವೈದ್ಯರಾದ ಡಾ.ಪದ್ಮಪ್ರಕಾಶ್‌, ಡಾ.ಚರಣ್‌, ಡಾ. ಇಂದಿರಾ ಶ್ಯಾಮ ಪ್ರಸಾದ್‌ ತೀರ್ಪುಗಾರರಾಗಿದ್ದರು.

ಮೂರು ವಿಭಾಗಗಳಲ್ಲಿ 2022ನೇ ಲಯನ್ಸ್‌ ಅತ್ಯುತ್ತಮ ಮಗು ಪ್ರಶಸ್ತಿಯನ್ನು ಅವಳಿ ಮಕ್ಕಳಾದ ದೃತಿ.ಪಿ ಹಾಗೂ ದ್ವಿತಿ.ಪಿ ಪಡೆದರು. 1 ವರ್ಷದವರೆಗಿನ ಮಕ್ಕಳ ವಿಭಾಗದಲ್ಲಿ ರುತ್ವ.ಪಿ(ಪ್ರಥಮ), ಪೂರ್ವಿಕಾ(ದ್ವಿತೀಯ), ದಯಾಶಂಕರ್‌ (ತೃತೀಯ), 2ವರ್ಷದ ಮಕ್ಕಳ ವಿಭಾಗದಲ್ಲಿ ಹನ್ರಿತಾ.ಪಿ.ಗೌಡ (ಪ್ರಥಮ), ಅನುಷ್ಕಾ.ಡಿ. (ದ್ವಿತೀಯ), ಸುಘೋಷ್‌.ಎಂ.ಎಸ್‌ (ತೃತೀಯ), 3 ವರ್ಷದ ಮಕ್ಕಳ ವಿಭಾಗದಲ್ಲಿ ಸಾಯಿಸತ್ಯ (ಪ್ರಥಮ), ಸಾಯಿಶ್ರೀ (ದ್ವಿತೀಯ), ರಾಜೇಶ್ವರಿ (ತೃತೀಯ)ಬಹುಮಾನಗಳನ್ನು ಪಡೆದರು.

ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್‌ ಅಧ್ಯಕ್ಷ ಹುಲಿಕಲ್‌ ನಟರಾಜ್‌, ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಡಿ.ಕೆ.ಸೋಮಶೇಖರ್‌ ಖಜಾಂಚಿ ಆರ್‌.ಎಸ್‌. ಮಂಜುನಾಥ್‌, ಸಹ ಕಾರ್ಯದರ್ಶಿ ರೇಖಾ ವೆಂಕಟೇಶ್‌, ಲಯನ್ಸ್‌ ಚಾರಿಟೀಸ್‌ ಟ್ರಸ್ಟ್‌ ಸಹ ಕಾರ್ಯದರ್ಶಿ ಪಿ.ಸಿ.ವೆಂಕಟೇಶ್‌, ಖಜಾಂಚಿ ಡಿ.ಎಸ್‌.ಸಿದ್ದಣ್ಣ, ಲಯನ್‌ ಎಸ್‌.ನಟರಾಜ್‌, ಲಯನ್‌ ಮೋಹನ್‌ ಕುಮಾರ್‌, ಲಯನ್‌ ರಾಜಶೇಖರ್‌, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ. ಶ್ರೀಕಾಂತ ಹಾಗೂಮತ್ತಿತರರು ಇದ್ದರು.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.