ಚಿತ್ರ ವಿಮರ್ಶೆ: ‘ಖಾಸಗಿ ಪುಟ’ಗಳಲ್ಲಿ ಸೆರೆಯಾದ ಪ್ರೇಮಕಥೆ!


Team Udayavani, Nov 19, 2022, 4:22 PM IST

khasagi putagalu

ಕಾಲೇಜ್‌ ಕ್ಯಾಂಪಸ್‌, ಅಲ್ಲೊಂದು ತರ್ಲೆ ಗ್ಯಾಂಗ್‌, ಅದರಲ್ಲೊಬ್ಬ ಹೀರೋ, ಯಾವ ಹುಡುಗಿಯರಿಗೂ ಮನ ಸೋಲದ ಆತ ಒಬ್ಟಾಕೆಯ ಹಿಂದೆ ಸುತ್ತುವುದು, ನೋಡ ನೋಡುತ್ತಲೇ ಅವರಿಬ್ಬರ ಲವ್‌ಸ್ಟೋರಿ “ಉತ್ತುಂಗ’ಕ್ಕೆ ಹೋಗುವುದು… ಈ ತರಹದ ಲವ್‌ಸ್ಟೋರಿಗಳನ್ನಿಟ್ಟುಕೊಂಡು ಹಲವು ಸಿನಿಮಾಗಳು ಬಂದಿವೆ. ಈ ವಾರ ತೆರೆಕಂಡಿರುವ “ಖಾಸಗಿ ಪುಟಗಳು’ ಕೂಡಾ ಇದೇ ಹಾದಿಯಲ್ಲಿ ಆರಂಭವಾಗಿ ನೋಡ ನೋಡುತ್ತಲೇ ಹೊಸ ಹಾದಿ ಹಿಡಿಯುವ ಸಿನಿಮಾ. ಸದ್ಯ ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಹೊಸ ಪ್ರಯೋಗದ, ನೈಜತೆಗೆ ಹೆಚ್ಚು ಒತ್ತು ನೀಡುವ ಸಿನಿಮಾಗಳು ಬರುತ್ತಿವೆ. ಆ ಸಾಲಿಗೆ ಹೊಸ ಸೇರ್ಪಡೆ “ಖಾಸಗಿ ಪುಟಗಳು’.

ಒಂದು ಲವ್‌ಸ್ಟೋರಿಯನ್ನು ಎಷ್ಟು ನೈಜವಾಗಿ ಹಾಗೂ ಮನಸ್ಸಿಗೆ ಹತ್ತಿರವಾಗುವಂತೆ ಕಟ್ಟಿಕೊಡಲು ಸಾಧ್ಯವೋ, ಆ ತರಹದ ಒಂದು ಪ್ರಯತ್ನವನ್ನು ಚಿತ್ರತಂಡ ಇಲ್ಲಿ ಮಾಡಿದೆ. ಹಾಗಂತ ಚಿತ್ರದ ಕಥೆ ಈ ಹಿಂದೆ ಯಾರೂ ನೋಡಿರದ, ಕೇಳಿರದ ಕಥೆಯಲ್ಲ. ಆದರೆ, ಹೊಸಬರ ತಂಡ ನಿರೂಪಣೆಯಲ್ಲಿ ಹಾಗೂ ಅಲ್ಲಲ್ಲಿ ನೀಡುವ ಟ್ವಿಸ್ಟ್‌ಗಳ ಮೂಲಕ ಸಿನಿಮಾವನ್ನು ಹೆಚ್ಚು ಆಪ್ತವಾಗುವಂತೆ ಹಾಗೂ ಕೊಂಚ ಕಾಡುವಂತೆ ಮಾಡಿದೆ. ಆ ಮಟ್ಟಿಗೆ ಹೊಸಬರ ಪ್ರಯತ್ನವನ್ನು ಮೆಚ್ಚಬಹುದು.

ಕರಾವಳಿ ಪರಿಸರದಲ್ಲೇ ನಡೆಯುವ “ಖಾಸಗಿ ಪುಟಗಳು’ ಕೆಲವೇ ಕೆಲವು ಪಾತ್ರಗಳ ಸುತ್ತ ಸುತ್ತುವ ಸಿನಿಮಾ. ಈ ಸಿನಿಮಾದ ಪರಮ ಉದ್ದೇಶ ಲವ್‌ಸ್ಟೋರಿಯನ್ನು ಹೆಚ್ಚು ಆಪ್ತವಾಗುವಂತೆ ಕಟ್ಟಿಕೊಡುವುದು. ಅದೇ ಕಾರಣದಿಂದ ಚಿತ್ರದಲ್ಲಿ ಬರುವ ಇತರ ದೃಶ್ಯಗಳನ್ನು ಹೆಚ್ಚು ಎಳೆದಾಡದೇ, ಅಲ್ಲಲ್ಲೇ ಮುಗಿಸಿ, ಪ್ರೇಮಕಥೆಯನ್ನೇ ಮುಂದೆ ತಂದಿದೆ.

ಚಿತ್ರದ ಮೊದಲರ್ಧ ಕಾಲೇಜು, ಹುಡುಗಿ ಹಿಂದೆ ಬೀಳುವ ನಾಯಕ, ಕಣ್ಣಲ್ಲೇ ಕೊಲ್ಲೋ ನಾಯಕಿ, ತರ್ಲೆ ಫ್ರೆಂಡ್ಸ್‌ ಸುತ್ತ ಸಾಗಿದರೆ, ಸಿನಿಮಾದ ಜೀವಾಳ ದ್ವಿತೀಯಾರ್ಧ. ಇಡೀ ಸಿನಿಮಾದ ಕಥೆ ನಿಂತಿರೋದು ಇಲ್ಲೇ… ಇಲ್ಲಿ ಹಲವು ಟ್ವಿಸ್ಟ್‌ ಗಳು ಎದುರಾಗುವ ಜೊತೆಗೆ ಒಂದಷ್ಟು ಕುತೂಹಲವನ್ನು ಹುಟ್ಟಿಸುತ್ತಾ ಚಿತ್ರ ಸಾಗುತ್ತದೆ. ಪ್ರೇಕ್ಷಕನ ಊಹೆಗೆ ನಿಲುಕದೇ ಕಥೆ ಸಾಗುವುದು ಕೂಡಾ ಇಲ್ಲಿನ ಪ್ಲಸ್‌ ಎಂದೇ ಹೇಳಬಹುದು.

ಚಿತ್ರದಲ್ಲಿ ನಾಯಕ ವಿಶ್ವ ಪ್ರೇಮಿಯಾಗಿ ಇಷ್ಟವಾಗುತ್ತಾರೆ. ನಾಯಕಿ ಲಿಯೋನಿಲ್ಲ ಶ್ವೇತಾ ಡಿಸೋಜಾ ಮುಖಭಾವದಲ್ಲೇ ನಟಿಸಿ, ಭರವಸೆ ಮೂಡಿಸಿದ್ದಾರೆ. ಉಳಿದಂತೆ ಮೋಹನ್‌ ಜುನೇಜ, ಪ್ರಶಾಂತ್‌ ನಟನಾ, ಶ್ರೀಧರ್‌, ಚೇತನ್‌ ದುರ್ಗಾ, ನಂದಗೋಪಾಲ್‌, ನಿರೀಕ್ಷಾ ಶೆಟ್ಟಿ, ಮಂಗಳೂರು ದಿನೇಶ್‌ ಮುಂತಾದವರು “ಖಾಸಗಿ ಪುಟಗಳು’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಖಾಸಗಿ’ ಲವ್‌ಸ್ಟೋರಿಯನ್ನು ಒಮ್ಮೆ “ಬಹಿರಂಗ’ವಾಗಿ ನೋಡಲಡ್ಡಿಯಿಲ್ಲ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.