ಬೆಳಗಾವಿ: ಬಾರ್ ಗೆ ನುಗ್ಗಿ ಬಾಗಿಲು ಬಂದ್ ಮಾಡಿಸಿದ ಜಿಲ್ಲಾಧಿಕಾರಿ
Team Udayavani, Nov 19, 2022, 3:51 PM IST
ಬೆಳಗಾವಿ : ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬೆಳಗ್ಗೆ ಕಾರಿನಿಂದಿಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲರು ನೇರವಾಗಿ ಪಕ್ಕದಲ್ಲೇ ಇರುವ ಆನಂದ ಬ್ರ್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ಕೈಗೊಂಡರು.
ಆನಂದ ಬ್ರ್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡ ಜಿಲ್ಲಾಧಿಕಾರಿ ಗಳು ಖುದ್ದಾಗಿ ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಆಗಮಿಸಿದ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾಮದಲ್ಲಿರುವ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ನಿಯಮಗಳ ಉಲ್ಲಂಘನೆಯ ಕುರಿತು ಕೂಲಂಕಶವಾಗಿ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಜಿಪಂ ಸಿಇಓ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ