ಶಿಸ್ತಿಲ್ಲದ ಪಾರ್ಕಿಂಗ್ ವ್ಯವಸ್ಥೆ: ಸವಾರರ ಪರದಾಟ
Team Udayavani, Nov 19, 2022, 4:16 PM IST
ಮಾಗಡಿ: ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆಯಾಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟದಲ್ಲಿ ಪುರಸಭೆ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳವೇ ಗುರುತಿಸಿಲ್ಲ ಪುರಜನರ ಪಾಡಂತೂ ದೇವರೇ ಬಲ್ಲ. ಜನಪ್ರತಿನಿಧಿಗಳು ಇದ್ದರೂ ಇಲ್ಲದಂತಾಗಿದೆ. ಪಟ್ಟಣದಲ್ಲಿ ವಾಹನ ಸಂಚಾರ ಹೆಚ್ಚಾದಂತೆಲ್ಲ ವಾಹನಗಳ ನಿಲುಗಡೆಯೇ ಚಾಲಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಪಟ್ಟಣದಲ್ಲಿ ಪುರಸಭೆ ಎಲ್ಲೂ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ವಾಹನ ಸವಾರರು ಎಲ್ಲಿ ಬೇಕೆಂದರಲ್ಲಿ ವಾಹನಗಳ ನಿಲುಗಡೆ ಮಾಡುತ್ತಿರುವುದು ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ವಾಹನಗಳಿಗೆ ಸೂಕ್ತ ಭದ್ರತೆಯೂ ಇಲ್ಲದಂತಾಗಿದೆ. ಇಲ್ಲಿನ ಜನ ಮತ್ತು ವಾಹನಗಳ ಸಂಖ್ಯೆಗೆ ಅನು ಗುಣವಾಗಿ ಸ್ಥಳಾವಕಾಶ ಇಲ್ಲದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣ. ಪಟ್ಟಣದ ಯಾವ ರಸ್ತೆಗಳಲ್ಲೂ ಅಧಿಕೃತ ಪಾರ್ಕಿಂಗ್ ವ್ಯವಸ್ಥೆ ಇಲ್ಲ, ವಾಹನಗಳನ್ನು ರಸ್ತೆಗಳಲ್ಲಿ, ಕೆಲವು ಕಡೆ ಪಾದಾಚಾರಿ ಮಾರ್ಗದ ಮೇಲೆಯೂ ನಿಲುಗಡೆ ಮಾಡುತ್ತಾರೆ. ಬೀದಿಬದಿ ವ್ಯಾಪಾರಿಗಳು, ತಳ್ಳುವ ಗಾಡಿಗಳ ವ್ಯಾಪಾರ ಒಂದೆಡೆ ಯಾದರೆ, ಮತ್ತೂಂದೆಡೆ ವಾಹನ ಪಾರ್ಕಿಂಗ್ ಕಾಟವಂತೂ ಹೇಳುತೀರದಾಗಿದೆ.
ಪಾದಚಾರಿಗಳ ಸಂಚಾರವೂ ಕಷ್ಟಕರವಾಗಿದೆ. ಸಂಚಾರ ವ್ಯವಸ್ಥೆಯನ್ನು ಕೇಳುವವರಿಲ್ಲ, ವೃದ್ಧರು, ಮಹಿಳೆಯರು ಮಕ್ಕಳು ರಸ್ತೆಗಳಲ್ಲಿ ನಡೆದಾಡಲು ಕಿರಿಕಿರಿಯಾಗುತ್ತಿದೆ. ಅಪಘಾತಗಳಿಗೆ ಈಡಾಗಿ ಗಾಯ ಗೊಂಡಿರುವ ಪ್ರಕರಣ ಸಾಕಷ್ಟಿವೆ. ಪಾದಾಚಾರಿ ಮಾರ್ಗದಲ್ಲೂ ಕೆಲವು ಕಡೆ ಮಳಿಗೆಗಳ ಮುಂದೆ ಎಲ್ಲೆಂದರಲ್ಲಿ ವಾಹನ ನಿಂತಿರುವುದು. ವಿಧಿ ಇಲ್ಲದೆ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಬೇಕಿದೆ. ಇನ್ನು ಮುಂದಾದರೂ ಟ್ರಾಫಿಕ್ ಸಮಸ್ಯೆಗೆ ಕಡಿ ವಾಣಕ್ಕೆ ಅಧಿಕಾರಿಗಳು ಮುಂದಾಗುತ್ತಾರಾ ಎಂದು ಕಾದು ನೋಡಬೇಕಾಗಿದೆ.
ನಗರದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ರಸ್ತೆಗಳೇ ವ್ಯಾಪಾರಿಗಳ ಮಾರುಕಟ್ಟೆಯಾಗಿದೆ. ಹೀಗಾಗಿ, ಪಟ್ಟಣ ಗಿಜಿಗಿಜಿಯಿಂದ ಕೂಡಿರುತ್ತದೆ. ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸಂಚಕಾರವಾಗಿದೆ. ಆದಷ್ಟು ಬೇಗ ಟ್ರಾμಕ್ ಸಮಸ್ಯೆ ಬಗೆಹರಿಸಲು ಪುರಸಭೆ ಮುಂದಾಗಬೇಕು ಎಂದು ಚಿಂತಕರಾದ ಜಯಣ್ಣ, ರಮೇಶ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ