ವೋಟರ್ ಗೇಟ್ ಕಿಂಗ್ ಪಿನ್ ಸಿಎಂ ಬೊಮ್ಮಾಯಿ ಎಂದ ಕಾಂಗ್ರೆಸ್; ರಾಜೀನಾಮೆಗೆ ಆಗ್ರಹ

ಬೊಮ್ಮಾಯಿ ಅವರು ತಮ್ಮ ಸುಳ್ಳಿನ ಬಲೆಯಲ್ಲಿ ತಾವೇ ಸಿಲುಕಿಕೊಂಡಿಲ್ಲವೇ?

Team Udayavani, Nov 19, 2022, 6:13 PM IST

congress

ಬೆಂಗಳೂರು: ‘ವೋಟರ್ ಗೇಟ್ ಪ್ರಕರಣದಲ್ಲಿ (ಮತದಾರರ ಮಾಹಿತಿ ಕಳವು) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಪ್ರಮುಖ ಕಿಂಗ್ ಪಿನ್ ಆಗಿದ್ದು, ಪ್ರಕರಣದ ನ್ಯಾಯಸಮ್ಮತ ತನಿಖೆಗೆ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಎಫ್ಐಆರ್ ದಾಖಲಾಗಿ ಅವರ ಬಂಧನವಾಗಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಎಐಸಿಸಿ ಪ್ರದಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರಕ್ಕೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಇದುವರೆಗೂ ಬೆಂಗಳೂರು ಉಸ್ತುವಾರಿಯಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ಯಾಕೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ? ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ಕಳ್ಳತನ ಮಾಡಿರುವ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರನ್ನು ವಿಚಾರಣೆ ನಡೆಸಬೇಕಾಗಿದ್ದು, ಕೆಳಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಒಂದಿಬ್ಬರು ಬಿಎಲ್ಒ ಗಳ ಮೇಲೆ ಎಫ್ಐಆರ್ ದಾಖಲಿಸಿರುವುದು ಏಕೆ? ಎಂದು ಪ್ರಶ್ನಿಸಿದರು.

ಬೊಮ್ಮಾಯಿ ಅವರು ತಮ್ಮ ಸುಳ್ಳಿನ ಬಲೆಯಲ್ಲಿ ತಾವೇ ಸಿಲುಕಿಕೊಂಡಿಲ್ಲವೇ? ಮೊನ್ನೆ ಕಾಂಗ್ರೆಸ್ ಪಕ್ಷ ಈ ವಿಚಾರವಾಗಿ ಆರೋಪ ಮಾಡಿದಾಗ ಮುಖ್ಯಮಂತ್ರಿ ಬೊಮ್ಮಾಯಿ ಅವರು ಇದೊಂದು ಆಧಾರರಹಿತ ಆರೋಪ ಎಂದಿದ್ದರು. ಆದರೆ ಮತ್ತೊಂದೆಡೆ ಕೆಲವರ ಮೇಲೆ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ್ದಾರೆ. ಯಾವ ಪ್ರಕರಣವನ್ನು ಮುಖ್ಯಮಂತ್ರಿಗಳೇ ತಿರಸ್ಕರಿಸಿದ್ದಾರೋ ಆ ಪ್ರಕರಣದಲ್ಲಿ ಯಾವ ಪೊಲೀಸ್ ಅಧಿಕಾರಿ ತಾನೇ ಎಫ್ಐಆರ್ ದಾಖಲಿಸಿ ತನಿಖೆ ಮಾಡುತ್ತಾರೆ? ಇಂತಹ ಸುಳ್ಳಿನ ತನಿಖೆಯ ಪ್ರಯೋಜನವೇನು? ಬೊಮ್ಮಾಯಿ ಅವರು ಉದ್ದೇಶಪೂರ್ವಕವಾಗಿ ಜನರ ದಾರಿತಪ್ಪಿಸುತ್ತಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದರು.

ಇದುವರೆಗೂ ಚಿಲುಮೆ ಎಜುಕೇಶನ್ ಅಂಡ್ ರೂರಲ್ ಡೆವಲಪ್ಮೆಂಟ್ ಸಂಸ್ಥೆ, ಚಿಲುಮೆ ಎಂಟರ್ ಪ್ರೈಸಸ್ ಪ್ರೈ.ಲಿ ಹಾಗೂ ಡಿಎಪಿ ಹೊಂಬಾಳೆ ಪ್ರೈ.ಲಿ ಸಂಸ್ಥೆಗಳ ನಿರ್ದೇಶಕರ ಕೃಷ್ಣಪ್ಪ ರವಿಕುಮಾರ್, ಭೈರಪ್ಪ ಶೃತಿ, ನರಸಿಂಹಮೂರ್ತಿ ಐಶ್ವರ್ಯ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ ಏಕೆ ಎಂದು ಪ್ರಶ್ನಿಸಿದರು.

ಬೆಂಗಳೂರಿನ ಸರಿ ಸುಮಾರು 1 ಕೋಟಿ ಮತದಾರರ ಕಳ್ಳತನವಾಗಿರುವ ಮಾಹಿತಿ ಎಲ್ಲಿದೆ ಎಂದು ಸಿಎಂ ಬೊಮ್ಮಾಯಿ ಅವರು ಉತ್ತರಿಸುತ್ತಿಲ್ಲ ಯಾಕೆ? ಸಿಎಂ ಬೊಮ್ಮಾಯಿ ಅವರು ಖಾಸಗಿ ಆಪ್ ಡಿಜಿಟಲ್ ಸಮೀಕ್ಷಾ ಅನ್ನು ಯಾಕೆ ಮುಟ್ಟುಗೋಲು ಹಾಕಿಕೊಂಡಿಲ್ಲ?ಬಿಬಿಎಂಪಿಗೆ ಚಿಲುಮೆ ಸಂಸ್ಥೆ ಉಚಿತ ಸೇವೆ ನೀಡುತ್ತಿದ್ದು, ಈ ಸಂಸ್ಥೆಗೆ ಆರ್ಥಿಕ ನೆರವು ನೀಡುತ್ತಿರುವವರು ಯಾರು ಎಂಬ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳುತ್ತಿಲ್ಲ ಏಕೆ? ಗುತ್ತಿಗೆ, ಅರೆ ಗುತ್ತಿಗೆ ಸಿಬ್ಬಂದಿಗಳಿಗೆ ವೇತನ ನೀಡಲು ಈ ಸಂಸ್ಥೆಗೆ ಕೋಟ್ಯಂತರ ರೂಪಾಯಿ ಎಲ್ಲಿಂದ ಬಂದಿದೆ? ಚಿಲುಮೆ ಸಂಸ್ಥೆ ಸಮೀಕ್ಷೆ ಮಾಡಲು ಸಿಬ್ಬಂದಿ ನೇಮಕಾತಿಗಾಗಿ ಜಾಹೀರಾತು ಪ್ರಟಿಸಿದ್ದು ನಿಜವಲ್ಲವೇ? ಆ ಮೂಲಕ ಸುಮಾರು 15 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದು ನಿಜವಲ್ಲವೇ?ಎಂದು ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ.

ಚಿಲುಮೆ ಸಂಸ್ಥೆ ಸಿಬ್ಬಂದಿ ನೇಮಕಕ್ಕೆ ಮಾಡಿಕೊಳ್ಳಲಾದ ಉಪ ಗುತ್ತಿಗೆಯ ಒಪ್ಪಂದದ ಪ್ರತಿ ನಮ್ಮ ಬಳಿ ಇದೆ. ಈ ಒಪ್ಪಂದದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆಗೆ ಪ್ರತಿ ಮತದಾರರ ಮಾಹಿತಿಗೆ 25 ರೂಪಾಯಿ ನೀಡುವುದಾಗಿ ತಿಳಿಸಿದೆ. ಇನ್ನು ಮಾಹಿತಿ ಸಂಗ್ರಹಣೆ ಮಾಡಿದ ಬಿಎಲ್ಒಗಳಿಗೆ ಪ್ರತಿ ಮತದಾರರ ಮಾಹಿತಿಗೆ 50 ರೂ. ನೀಡುವುದಾಗಿ ತಿಳಿಸಿತ್ತು. ಪ್ರತಿ ಹೊಸ ಮತದಾರರ ಗುರುತಿಸಿದಕ್ಕೆ 40 ರೂ., ಪ್ರತಿ ಫಾರ್ಮ್ 7ರ ಪರಿಶೀಲನೆಗೆ 23 ರೂ., ಮತದಾರರಲ್ಲದವರನ್ನು ಗುರುತಿಸಿದರೆ ಪ್ರತಿಯೊಬ್ಬರ ಗುರುತಿಸಲು 10 ರೂ. ನೀಡುವುದಾಗಿ ತಿಳಿಸಿದ್ದಾರೆ. ಇದೆಲ್ಲದಕ್ಕೂ ಕೋಟ್ಯಂತರ ರೂ. ಖರ್ಚಾಗಿದ್ದು ಈ ಹಣ ಎಲ್ಲಿಂದ ಬಂತು? ಇಡಿ, ಸಿಬಿಐ, ಆದಾಯ ತೆರಿಗೆ ಎಲ್ಲಿದೆ? ಎಂದು ಪ್ರಶ್ನಿಸಿದರು.

ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಬೊಮ್ಮಾಯಿ ಅವರು ಹಾಗೂ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಆಯುಕ್ತರು 2019ರಿಂದ 2022ರವರೆಗೂ ನಿರಂತರವಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಆದೇಶ ನೀಡುತ್ತಲೇ ಬಂದಿದ್ದಾರೆ. ಬಿಬಿಎಂಪಿ ಪ್ರಕಟಿಸಿರುವ ಪತ್ರದಲ್ಲಿ ಖಾಸಗಿ ಸಂಸ್ಥೆಗಳು ಪ್ರತಿ ಮತದಾರರ ಮಾಹಿತಿಗಳಾದ ಆಧಾರ್ ಸಂಖ್ಯೆ, ಕುಟುಂಬದ ಮಾಹಿತಿ ಕಲೆಹಾಕಲಿದೆ ಎಂದು ತಿಳಿಸಿದೆ. ಅಲ್ಲದೆ ಪ್ರತಿಯೊಬ್ಬ ಮತದಾರರು ತಮ್ಮ ಆಧಾರ್ ಕಾರ್ಡ್, ಕುಟುಂಬದ ಮಾಹಿತಿ, ಮತದಾರರ ಗುರುತಿನ ಚೀಟಿಯನ್ನು ಬಿಬಿಎಂಪಿ ಪ್ರತಿನಿಧಿಗಳಿಗೆ ನೀಡಬೇಕು ಎಂದು ತಿಳಿಸಿದೆ. ಈ ಬಿಬಿಎಂಪಿ ಪ್ರತಿನಿಧಿಗಳು ಎಂದರೆ ಚಿಲುಮೆ ಸಂಸ್ಥೆಯ ಸಿಬ್ಬಂದಿಯಲ್ಲದೆ ಮತ್ತಾರು? ಎಂದು ಪ್ರಶ್ನಿಸಿದ್ದಾರೆ.

ಒಂದುಕಡೆ ಈ ಆರೋಪಗಳನ್ನು ಮುಖ್ಯಮಂತ್ರಿಗಳು ನಿರಾಕರಿಸುತ್ತಿದ್ದಾರೆ. ಮತ್ತೊಂದೆಡೆ ಮತದಾರರ ಮಾಹಿತಿ ಕಲೆ ಹಾಕಿದ ಚಿಲುಮೆ ಸಂಸ್ಥೆಯ ನಿಯೋಜಿತ ಬಿಎಲ್ಒಗಳು ಮುಂದೆ ಬಂದು ಬಿಬಿಎಂಪಿ ಹೇಳಿದ ಕಾರಣಕ್ಕೆ ನಾವು ಮತದಾರರ ಮಾಹಿತಿ ಕಲೆಹಾಕಿದ್ದೇವೆ ಎಂದು ವಿಡಿಯೋ ಸಾಕ್ಷಿಗಳನ್ನು ನೀಡುತ್ತಿದ್ದಾರೆ. ಇದರಿಂದ ಬೊಮ್ಮಾಯಿ ಅವರೇ ಇದರ ಹಿಂದೆ ಇದ್ದಾರೆ ಎಂಬುದು ಸಾಬೀತಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಕೆ.ಆರ್ ಪುರಂನ ಬಿಜೆಪಿ ಮಾಜಿ ಶಾಸಕ ನಂದೀಶ್ ರೆಡ್ಡಿ ಅವರು ಚಿಲುಮೆ ಸಂಸ್ಥೆಗೆ 18 ಲಕ್ಷ ಹಣ ನೀಡಿರುವುದಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಮತದಾರರ ಮಾಹಿತಿ ಪಡೆದು ಹಣಕ್ಕೆ ಅದನ್ನು ಮಾರಾಟ ಮಾಡುವ ಸಂಸ್ಥೆಗೆ ಬೆಂಗಳೂರಿನ ಎಲ್ಲ 28 ಕ್ಷೇತ್ರಗಳ ಮತದಾರರ ಮಾಹಿತಿ ಕಲೆ ಹಾಕಲು ಜಾಹೀರಾತು ಇಲ್ಲದೆ ಅವಕಾಶ ನೀಡಿದ್ದು ಯಾಕೆ? ಇದು ಭ್ರಷ್ಟಾಚಾರವಲ್ಲವೇ? ಇದಕ್ಕೆ ಬೆಂಗಳೂರು ಉಸ್ತುವಾರಿ ಸಚಿವರು ಹೊಣೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ನಾಯಕರು ಇಂದು ಪ್ರತಿಭಟನೆ ನಡೆಸಿದ ನಂತರ ಮುಖ್ಯಮಂತ್ರಿಗಳು ಮುಂದೆ ಬಂದು ಮತದಾರರ ಮಾಹಿತಿ ಕಲೆ ಹಾಕಲು ಅವರು ಯಾರಿಗೂ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ. ಅತ್ತ ಮುಖ್ಯ ಚುನಾವಣಾಧಿಕಾರಿಗಳು ತಾವು ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ. ಆದರೆ ಬಿಬಿಎಂಪಿಯ ಪತ್ರದಲ್ಲಿ ಖಾಸಗಿ ಸಂಸ್ಥೆಗಳಿಗೆ ಮಾಹಿತಿ ನೀಡಿ ಎಂದು ಜನರಿಗೆ ಕರೆ ನೀಡಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ನ್ಯಾಯಸಮ್ಮತ ತನಿಖೆ ನಡೆಯಲು ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು. ಈ ಪ್ರಕರಣದಲ್ಲಿ ಬೊಮ್ಮಾಯಿ ಅವರ ವಿರುದ್ಧ ಎಫ್ಐಆರ್ ಯಾಕೆ ದಾಖಲಾಗಿಲ್ಲ, ಅವರ ಬಂಧನ ಯಾಕಾಗಿಲ್ಲ?ಎಂದು ಪ್ರಶ್ನಿಸಿದರು.

ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ನಮ್ಮ ಬಳಿ ಎಲ್ಲ 28 ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಕಲೆಹಾಕಲು ಅನುಮತಿ ನೀಡಿರುವ ದಾಖಲೆಗಳು ಇವೆ. ಬಿಬಿಎಂಪಿಯವರು ಚಿಲುಮೆ ಸಂಸ್ಥೆಗೆ ಅನುಮತಿ ಪತ್ರ ಬರೆದಿದ್ದಾರೆ.ಈ 28 ಕ್ಷೇತ್ರಗಳಲ್ಲಿ ಅನಧಿಕೃತವಾಗಿ ಬಿಎಲ್ಒಗಳನ್ನು ನೇಮಕ ಮಾಡಿದವರ ವಿರುದ್ಧ ಎಫ್ಐಆರ್ ಆಗಬೇಕು. ಈ ಎಲ್ಲ ಕ್ಷೇತ್ರ ಚುನಾವಣಾಧಿಕಾರಿಗಳನ್ನು ಕೂಡಲೇ ಬಂಧಿಸಬೇಕು. ನಿನ್ನೆ ಪೊಲೀಸ್ ಅಧಿಕಾರಿಗಳು ಚಿಲುಮೆ ಸಂಸ್ಥೆ ಕಚೇರಿ ಮೇಲೆ ದಾಳಿ ನಡೆಸಿದಾಗ ಸಿಕ್ಕಿರುವ ಸಾಕ್ಷಾಧಾರಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ವಿಡಿಯೋ ಮಾಡಿಸಬೇಕು. ಇದರಲ್ಲಿ ಚೆಕ್, ಲೆಟರ್ ಹೆಡ್, ನೋಟು ಏಣಿಕೆ ಯಂತ್ರಗಳಿವೆ. ನೋಟು ಎಣಿಕೆ ಯಂತ್ರ ಅಲ್ಯಾಕೆ ಬಂತು? ಎಷ್ಟು ದುಡ್ಡು ಏಣಿಸಲಾಯಿತು? ಇವೆಲ್ಲವೂ ಸಾರ್ವಜನಿಕ ವೇದಿಕೆಗೆ ಬರಬೇಕು.ಚುನಾವಣಾ ಆಯೋಗ ಯಾವುದೇ ಅಧಿಕಾರಿಗಳ ಹೆಗಲಿಗೆ ಇದರ ಜವಾಬ್ದಾರಿ ಹಾಕಿ ಸುಮ್ಮನಾಗಬಾರದು. ನಿಮ್ಮದು ಸ್ವಾಯತ್ತ ಸಂಸ್ಥೆಯಾಗಿದ್ದು, ನೀವು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಮೂರ್ತಿಗಳಿಂದ ತನಿಖೆಗೆ ನೀಡಬೇಕು. ನಿಮ್ಮ, ಮತದಾರರು ಹಾಗೂ ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಿ ಎಂದರು.

‘ಇದು ಮತದಾರರ ಮಾಹಿತಿ ಕಳ್ಳತನ ಪ್ರಕರಣವಾಗಿದ್ದು, ಇದು ನಂಬಿಕೆ ದ್ರೋಹ, ಸಾರ್ವಜನಿಕ ಅಧಿಕಾರಿಯ ವೇಷದಲ್ಲಿ ಮಾಡಲಾದ ಮೋಸ, ಮಾಹಿತಿ ಕಳ್ಳತನ ಪ್ರಕರಣವಾಗಿದೆ. ಇದು ಹಣಕಾಸಿನ ಅವ್ಯವಹಾರ, ಪಿತೂರಿ, ಖಾಸಗಿ ಹಕ್ಕಿನ ಚ್ಯುತಿ ಪ್ರಕರಣವಾಗಿದೆ. ಇದರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಬಿಬಿಎಂಪಿ ಅಧಿಕಾರಿಗಳವರೆಗೂ ಎಲ್ಲರೂ ತಪ್ಪಿತಸ್ಥರಾಗಿದ್ದಾರೆ. ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ’ ಎಂದು ಸುರ್ಜೆವಾಲ ಹೇಳಿದರು.

‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು.

‘ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ. ನಾವು ಇವರ ವಿರುದ್ಧ ಕ್ರಮಕ್ಕೆ ಯಾಕೆ ಆಗ್ರಹಿಸುತ್ತಿದ್ದೇವೆ ಎಂದರೆ, ಪ್ರತಿ ಕ್ಷೇತ್ರದಲ್ಲಿ 300-400 ಬೂತ್ ಗಳಿದ್ದು, ಎಲ್ಲ 28 ಕ್ಷೇತ್ರಗಳಲ್ಲಿನ ಎಲ್ಲ ಬೂತ್ ಗಳಿಗೆ ಈ ಸಂಸ್ಥೆ ಒಬ್ಬ ಬಿಎಲ್ಒ ನೇಮಿಸಿದೆ. ಅವರಿಗೆ ನಕಲಿ ಗುರುತಿನ ಚೀಟಿ ನೀಡಲಾಗಿದೆ. ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರೇ ಚುನಾವಣಾಧಿಕಾರಿಯಾಗಿದ್ದು, ಅವರ ಕೆಳಗೆ 28 ಕ್ಷೇತ್ರ ಚುನಾವಣಾಧಿಕಾರಿಗಳಿದ್ದಾರೆ. ಇವರಿಗೆ ನಾವು ಸರ್ಕಾರಿ ಸಿಬ್ಬಂದಿ ಹೊರತಾಗಿ ಬೇರೆಯವರನ್ನು ಬಿಎಲ್ಒ ಆಗಿ ನೇಮಕ ಮಾಡಲು ಸಾಧ್ಯವಿಲ್ಲ ಎಂದು ತಿಳಿದಿದೆ. ಆದರೂ ಅವರು ಖಾಸಗಿಯವರಿಗೆ ಬಿಎಲ್ಒ ಗುರುತಿನ ಚೀಟಿ ನೀಡಿದ್ದಾರೆ. ಬಿಜೆಪಿ ಸಚಿವರು, ಶಾಸಕರ ಕಚೇರಿಯಲ್ಲೇ ಈ ಬಿಎಲ್ಒಗಳಿಗೆ ತರಬೇತಿ ನೀಡಲಾಗಿದೆ. ಅವುಗಳ ಪೋಟೋಗಳು ನಮ್ಮ ಬಳಿ ಇವೆ. ಮಲ್ಲೇಶ್ವರದ ಚಿಲುಮೆ ಕಚೇರಿಯಿಂದ ಪೊಲೀಸರು ನೋಟು ಏಣಿಕೆ ಯಂತ್ರ ಜಪ್ತಿ ಮಾಡಿದ್ದಾರೆ. ಈ ದಾಖಲೆಗಳನ್ನು ಮರೆಮಾಚುವ ಮುನ್ನ ಇವುಗಳ ವಿಡಿಯೋ ದಾಖಲು ಮಾಡಬೇಕು. ನಾವು ಪೊಲೀಸ್ ಠಾಣೆಗಳ ಮೇಲೂ ಕಣ್ಣಿಟ್ಟಿದ್ದು, ನಮ್ಮವರನ್ನು ನಾವು ಅಲ್ಲಿ ಬಿಟ್ಟಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.