ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ


Team Udayavani, Nov 20, 2022, 6:15 AM IST

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಬದುಕು ಎಂದರೆ ಬೇಕಾ ಬಿಟ್ಟಿಯಾಗಿ ಸಾಗುವುದಕ್ಕಲ್ಲ. ಅಂತರಂಗದ ಬೆಳಕು ಹೊರಜಗತ್ತಿಗೆ ತೆರೆದುಕೊಂಡಾಗ ಮಾತ್ರ ನಿಜದ ಅನಾವರಣವಾಗಲು ಸಾಧ್ಯವಾಗುತ್ತದೆ. ಬದುಕೆಂಬ ಈ ಬಂಗಾರ, ಕಷ್ಟಗಳೆಂಬ ಹೊಡೆತಕ್ಕೆ ಸಿಕ್ಕಿ ಆ ಬಳಿಕ ತಾಳ್ಮೆಯೊಂದಿಗೆ ಜಯಿಸಿ ಪರಿಶುದ್ಧವಾಗುತ್ತದೆ. ಕಷ್ಟಗಳೇ ಇಲ್ಲದೆ ಜೀವನ ನಡೆಸಲು ಸಾಧ್ಯವಿಲ್ಲ. ಬದುಕೆಂಬ ಮಹಾಸಾಗರದೊಳಗೆ ಹುದುಗಿದ ಆಗಾಧ ಸಂಪನ್ಮೂಲಗಳನ್ನು ವ್ಯವಸ್ಥಿತ ರೀತಿಯಲ್ಲಿ ಜೋಡಿಸಿಕೊಂಡು ದಾರಿಯನ್ನು ಪಯಣಿಸಬೇಕಿದೆ. ಹೆಜ್ಜೆ ತಪ್ಪದೇ ಪರಾಮರ್ಶಿಸಿ ನಡೆಯುವ ವ್ಯವಧಾನ ಇನ್ನಷ್ಟು ಬೆಳೆಸಿಕೊಳ್ಳಬೇಕಾಗಿದೆ. ಒಡಲಿನ ನ್ಯಾಯ, ನೀತಿ, ಧರ್ಮ, ನಂಬಿಕೆಗಳಿಗೆ ಚ್ಯುತಿ ಬರದಂತೆ ಜೀವನ ಸಾಗಿಸುವ ಛಾತಿ ಇನ್ನಷ್ಟು ಹೆಚ್ಚು ಬೇಕಾಗಿದೆ.

ಹೆದ್ದಾರಿ ತಲುಪಿ ಆಗಿದೆ, ಇನ್ನೇನೂ ತೊಂದರೆ ಯಿಲ್ಲ ಅಂತ ಅಂದುಕೊಂಡರೆ ಸಾಗಿದಷ್ಟು ಮುಗಿಯದ ದೂರ ಪ್ರಯಾಣ ನಿರಂತರ ಇದ್ದೇ ಇದೆ. ಸಾಗುವ ಗಮ್ಯದೆಡೆಗೆ ನೋಟ ಕೇಂದ್ರೀಕೃತ ವಾಗಿರಬೇಕು. ಅಷ್ಟರಲ್ಲೋ ಎಲ್ಲೋ ಮಳೆ ಬೀಳುವ ಅಲ್ಲಲ್ಲ, ಸುರಿಯುತ್ತಿರುವ ಸದ್ದು ಕೇಳಿಸುತ್ತಿ ರುವಂತೆಯೇ ಮನದೊಳಗೆ ಒಂದು ರೀತಿಯ ಅಳುಕು. ಇದೇನಪ್ಪ ಮಳೆಗೂ ಹೀಗೆ ಬೆಚ್ಚಿ ಬೀಳು ವುದುಂಟೇ? ಅಂತ ಅಂದುಕೊಂಡರೆ ಹೌದು ಎಂಬ ಉತ್ತರ ಬರಲೇ ಬೇಕು. ಅಷ್ಟಕ್ಕೂ ಮಳೆ ಎಂಬುದು ಒಂದು ನೆಪ ಅಷ್ಟೆ. ಅದು ಯಾವುದೇ ತರದ ತೊಂದರೆಗಳನ್ನು ನಿವಾರಿಸಲು ಸಾಧ್ಯ ವಾಗದೇ ಕೈ ಚೆಲ್ಲಿ ಕುಳಿತಾಗ ಒದಗುವ ದೀವಟಿಗೆಯೆಂದರೆ ತಪ್ಪಾಗದು. ದುಃಖ ಪಡುತ್ತಾ ಇರುವವನಿಗೆ ಬೇರೆಯವರ ಕಣ್ಣಿಗೆ ಆ ನೋವಿನ ಛಾಯೆ ಕಾಣದಿರಲೆಂದು ಬರುವ ಮಳೆ ಆ ಕಣ್ಣೀರನ್ನು ಮರೆಮಾಚಿ ಜೀವನದ ಹಲವು ಆಯಾಮಗಳನ್ನು ತಿಳಿಸಿಕೊಡುತ್ತದೆ. ಬದುಕು ಎಂದರೆ ಹೀಗೇ ಎಂದು ಹೇಳುವಂತಹ ಸರಳರೇಖೆಗಳಿಲ್ಲ. ಬಂದದ್ದನ್ನು ಎದುರಿಸಿಕೊಂಡು ಹೋಗುವ ನೈಪುಣ್ಯ ಹೊಂದಿರಬೇಕಾಗುತ್ತದೆ. ಅಷ್ಟಕ್ಕೂ ಮನಸ್ಸು ಎಂಬುದು ವಾಯು ವೇಗ ಕ್ಕಿಂತಲೂ ಹೆಚ್ಚು ಚಲನೆಯುಳ್ಳದ್ದು. ಅದರೊಂದಿಗೆ ಚಲಿಸಲು ಈ ದೇಹಕ್ಕೆ ಖಂಡಿತಾ ಸಾಧ್ಯ ವಾಗದು. ಮನಸ್ಸು, ಆತ್ಮನ ಜತೆಗಾರ. ಈ ದೇಹವೋ ಎಲ್ಲೆಂದರಲ್ಲಿ ಬಾಹ್ಯ ಜ್ಞಾನ, ದಾಹ ಪಿಪಾಸೆಗೆ ಒಳಗಾಗುವ ಒಂದು ರೀತಿಯ ಜಾದೂಗಾರನೇ ಹೌದು. ಸರಿಯಾದ ದಾರಿಯಲ್ಲಿ ಸಾಗುತ್ತಾ ಕರ್ಮ ಗಳನ್ನು ಲವಲೇಶವು ಅವಗಣಿಸದೆ ಮಾಡುತ್ತಾ ಸಾಗಿದಾಗ ಬದುಕಿನ ಒಳಾರ್ಥಗಳ ಮಾಗು ವಿಕೆ ಬೆಳಕಿಗೆ ಬರುತ್ತದೆ, ಹೊಳಪು ಪ್ರಜ್ವಲಿಸುತ್ತದೆ.

ಬೆಳಕು ಮೂಡುವ ಮೊದಲೇ ಕೇಳುವ ಹಕ್ಕಿಗಳ ಚಿಲಿಪಿಲಿ ಗಾಯನ ಮನಸ್ಸಿಗೆ ಮುದ ನೀಡುತ್ತವೆ. ಬಾಲ್ಯವನ್ನು ನೆನಪಿಸುತ್ತ ಅಂದಿನ ಜವಾಬ್ದಾರಿ ರಹಿತ ಸಂತೋಷದ ಕ್ಷಣಗಳನ್ನು ಅನುಭವಿಸುವಂತೆ ಪ್ರೇರೇಪಿಸುತ್ತವೆ. ಖುಷಿಯ ಮೂಟೆಗಳಂತೆ ಮೆದುಳೊಳಗೆ ಅವಿತು ನಿರಂತರ ಸ್ಫೂರ್ತಿಯನ್ನು ನೀಡುತ್ತಾ ಬಾಳಿಗೆ ದೀವಿಗೆ ಯಾಗುತ್ತವೆ. ಹಾಗಾಗಿ ಬಾಲ್ಯವೆಂಬುದು ದೇವರ ವರಪ್ರಸಾದವೆಂದರೂ ತಪ್ಪಾಗಲಾರದು. ಹೆತ್ತವರೊಡನೆ ಅಷ್ಟೊಂದು ಸರಸ, ಒಡನಾಟ ಇಲ್ಲದಿದ್ದರೂ ಅವರ ಜವಾಬ್ದಾರಿಯನ್ನು ಅರಿತು ಕೆಲಸ ಕಾರ್ಯಗಳೊಂದಿಗೆ ಜೋಡಿಸಿಕೊಳ್ಳುತ್ತಾ ಬದುಕಿನ ಹಾದಿಯನ್ನು ತುಳಿದು ತಿಳಿಯುವ ಅನಾವರಣ ಮಾಡಿ ಕೊಡುತ್ತಿದ್ದರು. “ಮಾಡಿ ಕಲಿ ನೋಡಿ ತಿಳಿ’ ಎಂಬ ನೀತಿಯನ್ನು ಶಿರಸಾವಹಿಸಿ ಮಾಡುವ ಕಲೆಯೆಂಬುದು ರಕ್ತಗತವಾದಂತೆ ಬಾಲ್ಯದಲ್ಲಿಯೇ ಬಂದು ಬಿಡುತ್ತಿತ್ತು. ಆಗಲೇ ಜವಾಬ್ದಾರಿ ಪೂ ರ್ವಾಲೋಚನೆಗಳೂ ಹಂಚಿಕೆಯಾಗುತ್ತಿತ್ತು.

ಜಗತ್ತು ವಿಶಾಲವಾಗಿದೆ. ಆದರೆ ಜಗದೊಳಗಿರುವ ಮನುಷ್ಯರ ಮನಸುಗಳು ಕುಬjವಾಗು ತ್ತಲಿವೆ. ಬದುಕಿನ ಹೊಂದಾಣಿಕೆಯ ಏಣಿಯನ್ನು ಎತ್ತರಿಸುವಲ್ಲಿ ವಿಫ‌ಲವಾಗುತ್ತಿವೆ. ನಾಲ್ಕು ಗೋಡೆಗಳ ನಡುವೆ ಮನವು ಬೀಗಿ ಬೇಯುತ್ತಿದೆ. ತನ್ನೊ ಳಗಿನ ಆಸೆಗಳ ಪರಿಧಿಯನ್ನು ವಿಸ್ತರಿಸಿ ಹತಾಶೆಯ ಪರಿಣಾಮವನ್ನು ಎದುರಿಸಲು ವಿಫ‌ಲ ವಾಗುತ್ತಿದೆ. ಕೊನೆಗೆ ದಾರಿ ಕಾಣದೇ ಮುಂದೆ ಕೈ ಚೆಲ್ಲಿ ಬಿಡುತ್ತೇವೆ. ಯಾವುದೇ ಫ‌ಲಿತಾಂಶ ಬರುವ ಮುನ್ನ ಅಥವಾ ಬಂದ ಅನಂತರ ಧನಾತ್ಮಕವಾಗಿ ಯೋಚಿಸುವುದು ಒಳ್ಳೆಯ ಗುಣ. ಆದರೆ ಅದನ್ನು ಋಣಾತ್ಮಕವಾಗಿ ಗಳಿಸಿಕೊಂಡು ಎಲ್ಲರ ಯೋಚನೆಗಳಿಗೂ ಷಡ್ರಸಗಳನ್ನು ಸೇರಿಸುತ್ತ ಕೊರತೆಯನ್ನು ಎತ್ತಿ ಹಿಡಿಯು ವವರು ಅನೇಕರಿದ್ದಾರೆ. ಯಾವುದೇ ವಸ್ತುವಾಗಲಿ ಅದಕ್ಕೊಂದು ಇತಿಮಿತಿ ಎಂಬುದಿ ರುತ್ತದೆ. ಹಿಗ್ಗಿಸುವಿಕೆ ಅಥವಾ ಕುಗ್ಗಿಸುವಿಕೆ ಆಯಾಯ ವಸ್ತು ವಿಷಯಗಳಿಗೆ ಮೀಸಲಾಗಿ ರುತ್ತದೆ. ಬಲವಂತ ಮಾಡಿದರೆ ವಿಧಿ ಬೇರೆಯೇ ಬರಹ ಬರೆದು ಬಿಡುವ ಸಾಧ್ಯತೆ ಇರುತ್ತದೆ.

ನಂಬಿಕೆಯೆಂಬ ಬತ್ತಿ ಸ್ವಚ್ಛ, ಶುಭ್ರವಾಗಿರಲಿ
ಯಾಂತ್ರಿಕ ಬದುಕು ಯಂತ್ರದಂತೆ ಸಾಗುತ್ತಿದೆ. ಪ್ರಚೋದನೆ ನೀಡುತ್ತಾ ಬದುಕಿಗೆ ಹೊಸ ಭಾವನೆಗಳನ್ನು ತುಂಬುತ್ತಾ ಬೆಳಕು ಬೆಳಗಿಸಲು ಸಣ್ಣ ಹಣತೆಯೂ ಸಾಕು. ಆದರೆ ಬೆಳಗಿಸುವ ಸುವಿಶಾಲ ಮನಸ್ಸು ಇರಬೇಕು. ಒಲವ ಹಾದಿಗೆ ಹೂವು ಹಾಸಿದಂತೆ ನಂಬಿಕೆಯೆಂಬ ಬತ್ತಿ ಸ್ವಚ್ಛ ಹಾಗೂ ಶುಭ್ರವಾಗಿರಬೇಕು. ಇತ್ತಿತ್ತಲಾಗಿ ಶುಭ್ರತೆ ಯೆಂಬುದು ಬರಿಯ ಹೇಳಿಕೆಯ ಪದವಾಗಿ ಸಂಗ್ರಹಯೋಗ್ಯವಾಗಿ ನಿಂತಿದೆ ಎಂದರೆ ತಪ್ಪಾಗಲಾರದು. ಮನಸ್ಸು ಹುಳುಕು ಆಗಿದೆ. ಸಿಹಿತಿಂಡಿ ತಿಂದ ಬಳಿಕ ಬಾಯಿಯನ್ನು ಸ್ವಚ್ಛಗೊಳಿಸಲು ಪುರುಸೊತ್ತು ಇಲ್ಲದ ಮೇಲೆ ಹುಳುಕು ಸಾಮಾನ್ಯವಾಗಿ ಹಲ್ಲುಗಳಿಗೆ ಬಂದು ಬಿಡುತ್ತವೆ. ಇದು ಉತ್ಪ್ರೇಕ್ಷೆಯ ಮಾತಲ್ಲ. ಹುಳುಕು ಹಲ್ಲುಗಳ ಹತ್ತಿರವೇ ಇರುವ ಒಬ್ಬಂಟಿ ನಾಲಗೆ ಹುಳುಕಿನ ಸಹವಾಸವನ್ನು ಮಾಡುವುದು ಸಹಜ. ಒಳ್ಳೆಯ ಮಾತುಗಳು ಬರಬೇಕಾದರೆ ಸಜ್ಜನರ ಸಂಗವಿರಬೇಕು ಅಥವಾ ಅನುಭವಿ ಹಿರಿಯರ ಆದರ್ಶ ನುಡಿಗಳಿರಬೇಕು. ಇವೆಲ್ಲವೂ ಈಗ ಪರದೆಯ ಹಿಂದೆ ಬೆಳಕು ಹಾಯಿಸಿ ದಾಗಲಷ್ಟೇ ಕಾಣುವ ಅಂಶಗಳಾಗಿವೆ. ಅಂತರಂಗದ ಬೆಳಕು ಹೊರಜಗತ್ತಿಗೆ ತೆರೆದು ಕೊಂಡಾಗ ಮಾತ್ರ ನಿಜದ ಅನಾವರಣವಾಗಲು ಸಾಧ್ಯವಾಗುತ್ತದೆ. ಬೆಂಕಿಯಲ್ಲಿ ಕಾಯಿಸಿದಾಗ ಹೇಗೆ ಚಿನ್ನವು ಕಪ್ಪಾಗಿರುವುದೋ ಬಳಿಕ ಸುತ್ತಿಗೆಯ ಮೃದು ಹೊಡೆತಕ್ಕೆ ಮರುಗಿ ಮಾರ್ಪಾಟು ಹೊಂದಿ ಪರಿಶುದ್ಧ ಚಿನ್ನ ದೊರಕು ವಂತೆ ಬದುಕೆಂಬ ಈ ಬಂಗಾರ, ಕಷ್ಟಗಳೆಂಬ ಹೊಡೆತಕ್ಕೆ ಸಿಕ್ಕಿ ಆ ಬಳಿಕ ತಾಳ್ಮೆಯೊಂದಿಗೆ ಜಯಿಸಿ ಪರಿಶುದ್ಧವಾಗುತ್ತದೆ. ಕಷ್ಟಗಳೇ ಇಲ್ಲದೆ ಜೀವನ ನಡೆಸಲು ಸಾಧ್ಯವಿಲ್ಲ.

ಬದುಕಿನ ಹಲವು ಘಟ್ಟಗಳು ಕೆಲವೊಮ್ಮೆ ತೀರಾ ಸರಳವಾಗಿ ಹರಿಯುವ ಸಲಿಲದಂತೆ ಸಾಗುತ್ತಿರುತ್ತವೆ. ಮತ್ತೆ ಕೆಲವೊಮ್ಮೆ ಭೋರ್ಗರೆದು ಪ್ರಪಾತಕ್ಕೆ ಸುರಿಯುವ ಜಲಪಾತದಂತೆ ರುದ್ರ ರಮಣೀಯವಾಗಿರುತ್ತದೆ. ಬದುಕು ಇವೆರಡ ರಂತೆ ಇರಲೇ ಬೇಕೆಂದೇನಿಲ್ಲ. ಭಿನ್ನವಾಗಿಯೂ ಇರಬಹುದು ಅಥವಾ ಕಾಕತಾಳಿಯವೆಂಬಂತೆ ಹೋಲಿಕೆ ಕಂಡು ಬರಬಹುದು. ಜಗತ್ತಲ್ಲಿ ಒಬ್ಬರಂತೆ ಇನ್ನೊಬ್ಬರು ಇಲ್ಲವೆಂದಾದರೂ ಕೆಲವೊಮ್ಮೆ ಅಲ್ಪ ಸ್ವಲ್ಪ ಹೋಲಿಕೆ ಕಂಡು ಬರುವು ದುಂಟು. ಹಾಗೆಯೇ ಮಾಡುವ ಕಾರ್ಯಗಳು, ಅನುಭವಿಸಿದ ಕಾಲಘಟ್ಟದ ಪರಿಣಾಮಗಳು ಏಕರೂಪವಾಗಿರಲು ಸಾಧ್ಯವಿಲ್ಲ.

ಹೋಲಿಕೆ ಇದ್ದರೂ ಅದು ಕ್ಷಣಿಕವೇ ಆಗಿರುವುದು. ಬದುಕೆಂಬ ಮಹಾಸಾಗರದೊಳಗೆ ಹುದುಗಿದ ಆಗಾಧ ಸಂಪನ್ಮೂಲಗಳನ್ನು ವ್ಯವಸ್ಥಿತ ರೀತಿಯಲ್ಲಿ ಜೋಡಿಸಿಕೊಂಡು ದಾರಿಯನ್ನು ಪಯಣಿ ಸಬೇಕಿದೆ. ಹೆಜ್ಜೆ ತಪ್ಪದೇ ಪರಾಮರ್ಶಿಸಿ ನಡೆಯುವ ವ್ಯವಧಾನ ಇನ್ನಷ್ಟು ಬೆಳೆಸಿಕೊಳ್ಳ ಬೇಕಾಗಿದೆ. ಒಡಲಿನ ನ್ಯಾಯ, ನೀತಿ, ಧರ್ಮ, ನಂಬಿಕೆಗಳಿಗೆ ಚ್ಯುತಿ ಬರದಂತೆ ಜೀವನ ಸಾಗಿಸುವ ಛಾತಿ ಇನ್ನಷ್ಟು ಹೆಚ್ಚು ಬೇಕಾಗಿದೆ. ಬದುಕು ಎಂದರೆ ಬೇಕಾಬಿಟ್ಟಿಯಾಗಿ ಸಾಗುವುದಕ್ಕಲ್ಲ. ಹಾದಿ ನಿರ್ಮಲವಾಗಿದ್ದಾಗ ಎಲ್ಲರೂ ಸಾಗುತ್ತಿರುತ್ತಾರೆ. ಆದೇ ಹಾದಿಯಲ್ಲಿ ಕೊಳಚೆ ನಿರ್ಮಿಸಿದಿರೋ ಮೂಗು ಮುಚ್ಚಿಕೊಂಡು ದೂರ ಹೋಗುತ್ತಾರೆ.

ಬರಿಯ ಕಾಂಕ್ರೀಟ್‌ ನಿರ್ಮಾಣದಿಂದ ಸ್ವಚ್ಛತೆ ಬರಲಾರದು ಅಥವಾ ಕಲ್ಮಶ ಮಾಯವಾಗದು. ಅಂಗೈಯಲ್ಲಿ ಮಣ್ಣೇ ಆಗಬಾರದು ಎಂದರೆ ಮಣ್ಣಿನ ಜತೆ ಆಟ ಹೇಗೆ ಆಡುವುದು? ಮಣ್ಣು ಬೆಳಕು ಕಾಣುವುದರಿಂದ ಹಿಡಿದು ಬೆಳಕು ಮರೆಯಾದ ಬಳಿಕವೂ ಅಗತ್ಯವಾಗಿ ಬೇಕಾಗು ವಂತದ್ದು. ಅಂತಹ ಮಣ್ಣು ಈಗ ಬಿಸಿಯಾಗಿ ಭೂಮಿ ತನ್ನ ಒಡಲ ಶಾಖ ಹೆಚ್ಚಿಸುವಂತಾ ಗುತ್ತಿರುವುದು ಮನುಷ್ಯನ ಅತಿಯಾಸೆಯಿಂದ. ಹಸುರು ಬೆಳೆದು ಹಸನು ಮಾಡಲು ಬಿಡದೇ ತಾಪ ಕಡಿಮೆಯಾಗುವುದೆಂತು?, ಕಾಲಿಗೆ ಮಣ್ಣಿನ ಸ್ಪರ್ಶ ಆಗದ ಹೊರತು ಮಣ್ಣನ್ನು ಹೃದಯದಲ್ಲಿಟ್ಟು ಪೂಜಿಸುವುದೆಂತು?, ಮಣ್ಣಿನ ಮಜ್ಜನ- ಸಕಲ ರೋಗಕ್ಕೂ ರಾಮ ಬಾಣ. ತಡವಾದರೂ ಅರಿತ ಮೇಲೆ ಇನ್ನಾದರೂ ಮಣ್ಣನ್ನು ಪೂಜಿಸುವ ಮನ ಹೆಚ್ಚಾಗಲಿ.

-ಮಲ್ಲಿಕಾ ಜೆ. ರೈ, ಪುತ್ತೂರು 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಎರಡು ಕೈಗಳಲ್ಲಿ ಎರಡು ವೈಕುಂಠ ಪತ್ರ!

ಎರಡು ಕೈಗಳಲ್ಲಿ ಎರಡು ವೈಕುಂಠ ಪತ್ರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.