ರಕ್ಷಣ ಕ್ಷೇತ್ರ: ಭಾರತ ಶೀಘ್ರ ಸ್ವಾವಲಂಬಿ: ಡಾ| ಜಿ. ಸತೀಶ್‌ ರೆಡ್ಡಿ

ಮಾಹೆ ವಿ.ವಿ.ಯ ಘಟಿಕೋತ್ಸವ

Team Udayavani, Nov 20, 2022, 6:10 AM IST

ರಕ್ಷಣ ಕ್ಷೇತ್ರ: ಭಾರತ ಶೀಘ್ರ ಸ್ವಾವಲಂಬಿ: ಡಾ| ಜಿ. ಸತೀಶ್‌ ರೆಡ್ಡಿ

ಮಣಿಪಾಲ: ದೇಶದ ರಕ್ಷಣ ವಲಯಕ್ಕೆ ಅವಶ್ಯವಿರುವ ಸೇನಾ ತಂತ್ರಜ್ಞಾನದ ಅಭಿವೃದ್ಧಿ, ಅನುಷ್ಠಾನ, ವಿನ್ಯಾಸ, ಪ್ರಯೋಗ ಹಾಗೂ ಉತ್ಪಾದನೆ ಹೀಗೆ ಎಲ್ಲವೂ ಭವಿಷ್ಯದಲ್ಲಿ ಭಾರತದಲ್ಲೇ ನಡೆಯಲಿದೆ ಮತ್ತು ಆ ಮೂಲಕ ರಕ್ಷಣ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಲಿದ್ದೇವೆ ಎಂದು ಕೇಂದ್ರ ರಕ್ಷಣ ಸಚಿವರ ವೈಜ್ಞಾನಿಕ ಸಲಹೆಗಾರ ಡಾ| ಜಿ. ಸತೀಶ್‌ ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಹೆ ವಿ.ವಿ.ಯ 30ನೇ ಘಟಿಕೋ ತ್ಸವದ ಎರಡನೇ ದಿನ (ಶನಿವಾರ) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ವಿದ್ಯಾರ್ಥಿಗಳು ಜಾಗತಿಕ ಸಾಮರಸ್ಯ ಸಾಧಿಸುವ ಜತೆಗೆ ದೇಶದ ಅಭಿವೃದ್ಧಿ ಮತ್ತು ಗುರಿ ಸಾಧನೆಯಲ್ಲಿ ಶಕ್ತಿ ಮೀರಿ ಪ್ರಯತ್ನಿಸ ಬೇಕು ಎಂದು ಸಲಹೆ ನೀಡಿದರು.

ಸೇನೆಯಲ್ಲಿ ಸ್ವದೇಶಿ ನಿರ್ಮಿತ ಉತ್ಪನ್ನಗಳ ಬಳಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ರಕ್ಷಣ ಕ್ಷೇತ್ರಕ್ಕೆ ಬೇಕಾದ ಪರಿಕರಗಳನ್ನು ಅಭಿವೃದ್ಧಿ ಪಡಿ ಸಲು ಸ್ಟಾರ್ಟ್‌ಅಪ್‌ಗ್ಳಿಗೂ ಮುಕ್ತ ಅವಕಾಶವಿದೆ. ಸರಕಾರದ ತಂತ್ರಜ್ಞಾನ ಅಭಿವೃದ್ಧಿ ನಿಧಿ (ಟಿಡಿಎಫ್), ಡೇರ್‌ ಟು ಡೀಮ್‌ ಕಾರ್ಯಕ್ರಮಗಳು ಯುವ ಜನತೆ ಹೆಚ್ಚೆಚ್ಚು ಡಿಫೆನ್ಸ್‌ ಅಪ್ಲಿಕೇಶನ್‌ ವಿಭಾಗದಲ್ಲಿ ಸೇವೆ ಸಲ್ಲಿಸಲು ಪ್ರೋತ್ಸಾಹಿಸುತ್ತಿದೆ ಎಂದರು.

ಪ್ರಸ್ತುತ ಅಗತ್ಯವಿರುವ ನವೀನ ಅನ್ವೇಷಣೆಗಳ ಬಗ್ಗೆ ವಿವರಿಸಿ, ಶಿಕ್ಷಣ ಸಂಸ್ಥೆಗಳು ಅನ್ವೇಷಣೆ ಮತ್ತು ಉದ್ಯಮಶೀಲತೆಯ ಹಬ್‌ ನಿರ್ಮಾಣದ ಕೇಂದ್ರಗಳಾಗುವ ಮೂಲಕ ಸಂಶೋಧನೆಯ ಜತೆಗೆ ಜ್ಞಾನದ ವಿನಿಮಯಕ್ಕೂ ಸಹಕಾರಿ ಯಾಗಬೇಕು. ಕೃತಕ ಬುದ್ಧಿಮತ್ತೆ (ಆರ್ಟಿಫಿಸಿಯಲ್‌ ಇಂಟಲಿಜೆನ್ಸಿ) ಹಾಗೂ ಇಂಡಸ್ಟ್ರೀ 4.0 ಕೂಡ ತಂತ್ರಜ್ಞಾನ ಕ್ಷೇತ್ರಕ್ಕೆ ಬರುತ್ತಿವೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಗುರಿ ಸಾಧನೆಯ ಜತೆಗೆ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದರು.

ಶಕ್ತಿ ಮೀರಿ ಸೇವೆ
ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಮಾಹೆ ವಿ.ವಿ.ಯಿಂದ ವಿವಿಧ ಪದವಿ ಪಡೆದವರು ಭವಿಷ್ಯದಲ್ಲಿ ಉತ್ತಮ ವೈದ್ಯರು, ಎಂಜಿನಿಯರ್, ನಾಯಕರು, ಸಂಶೋಧಕರು, ಅನ್ವೇಷಣಕಾರರಾಗಿ ಶಕ್ತಿ ಮೀರಿ ಸೇವೆ ಸಲ್ಲಿಸಲಿದ್ದಾರೆ. ಈ ಮೂಲಕ ಸಮಾಜದಲ್ಲಿರುವ ಪ್ರತಿಭೆಯ ಅಂತರ ಸರಿಪಡಿಸುವ ಜತೆಗೆ ದೇಶಕ್ಕೆ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ಜಗತ್ತು ಸದಾ ಬದಲಾಗುತ್ತಿರುತ್ತದೆ ಮತ್ತು ಪ್ರತೀ ತಿರುವಿನಲ್ಲೂ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿರುತ್ತವೆ. ಶಿಕ್ಷಣದ ಜತೆಗೆ ಉತ್ತಮ ಕೌಶಲ ಹಾಗೂ ಜ್ಞಾನವನ್ನು ಪಡೆದಿರುವ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ ಎಂದರು.

ಮಾಹೆ ಟ್ರಸ್ಟ್‌ ಮುಖ್ಯಸ್ಥರೂ ಆದ ಎಂಇಎಂಜಿ ಅಧ್ಯಕ್ಷ ಡಾ| ರಂಜನ್‌ ಆರ್‌. ಪೈ, ಪ್ರೊ ವೈಸ್‌ ಚಾನ್ಸಲರ್‌ಗಳಾದ ಡಾ| ವೆಂಕಟ್ರಾಯ ಪ್ರಭು, ಡಾ| ದಿಲೀಪ್‌ ಜಿ. ನಾಯಕ್‌, ಡಾ| ಪ್ರಜ್ಞಾ ರಾವ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಕುಲಸಚಿವ (ಮೌಲ್ಯಮಾಪನ) ಡಾ| ವಿನೋದ್‌ ವಿ. ಥೋಮಸ್‌ ಉಪಸ್ಥಿತರಿದ್ದರು. ಕೆಎಂಸಿ ಮಂಗಳೂರು ಡೀನ್‌ ಡಾ| ಉಣ್ಣಿಕೃಷ್ಣನ್‌ ಬಿ. ವಂದಿಸಿ, ನಿರೂಪಿಸಿದರು.

ಚಿನ್ನದ ಪದಕ ವಿಜೇತರು
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಮಣಿಪಾಲ ಕೆಎಂಸಿಯ ಹಿಮಾಂಶು, ಮಣಿಪಾಲ್‌ ಕಾಲೇಜ್‌ ಆಫ್ ನರ್ಸಿಂಗ್‌ನ ವಿನಿತಾ ರೋಸ್‌ ಮೋನಿಸ್‌, ಮಣಿಪಾಲ ಸ್ಕೂಲ್‌ ಆಫ್ ಇನಾರ್ಮೆಶನ್‌ ಸೈನ್ಸಸ್‌ನ ಸತೀಶ್‌ ನಾಯಕ್‌, ಎಂಐಟಿಯ ಶಾಹ ದಿಯಾ ಹೇಮಂತ್‌ಕುಮಾರ್‌, ವಾಗಾÏದ ಆಹನ ಭಂಭನಿಗೆ ಶುಕ್ರವಾರ ಕೇಂದ್ರ ಸಚಿವ ರಾಜನಾಥ ಸಿಂಗ್‌ ಅವರು ಚಿನ್ನದ ಪದಕ ನೀಡಿ ಸಮ್ಮಾನಿಸಿದರು.

ಶನಿವಾರ ಡಾ| ಜಿ. ಸತೀಶ್‌ ರೆಡ್ಡಿ ಅವರು ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ವೆಸ್ತಾ ವೈಷ್ಣವಿ, ಮಣಿಪಾಲ್‌ ಕಾಲೇಜ್‌ ಆಫ್ ಫಾರ್ಮಸುಟಿಕಲ್‌ ಸೈನ್ಸಸ್‌ನ ಜೆನಿಲ್ಡಾ ಜಾಸ್ಮಿನ್‌ ಮಥಾಯಿಸ್‌, ಮಣಿಪಾಲ್‌ ಸ್ಕೂಲ್‌ ಆಫ್ ಆರ್ಕಿಟೆಕ್ಚರ್‌ ಆ್ಯಂಡ್‌ ಪ್ಲಾನಿಂಗ್‌ನ ಅರ್ಚನಾ ಶಿವಪ್ರಕಾಶ್‌, ಪ್ರಸನ್ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ನ ಜೊಸ್ಸಿಲ್‌ ಜೋಸ್ನಾ ಜೊಸೆಫ್ ನಝೆರೆತ್‌, ಮಂಗಳೂರಿನ ಮಣಿಪಾಲ ಕಾಲೇಜ್‌ ಆಫ್ ಡೆಂಟಲ್‌ ಸೈನ್ಸಸ್‌ನ ರುಪ್ಸಾ ತಾರಾಫೆರ್‌ಗೆ ಚಿನ್ನದ ಪದಕ ಪ್ರದಾನ ಮಾಡಿದರು. ಶನಿವಾರ 1,648 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.