ವಿಜಯ್ ಹಜಾರೆ ಟ್ರೋಫಿ: ಎನ್.ಜಗದೀಶನ್ ಇತಿಹಾಸ; ಕೊಹ್ಲಿ ದಾಖಲೆ ಪತನ

ಸತತ 5 ನೇ ಶತಕ, ಏಕದಿನ ಪಂದ್ಯದಲ್ಲಿ 277 ರನ್ ಚಚ್ಚಿದ ತಮಿಳುನಾಡಿನ ಬ್ಯಾಟ್ಸ್ ಮ್ಯಾನ್

Team Udayavani, Nov 21, 2022, 2:58 PM IST

1-asdsadad

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡಿನ ಆರಂಭಿಕ ಆಟಗಾರ ಎನ್.ಜಗದೀಶನ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಸ್ಪೋಟಕ ದ್ವಿಶತಕ ಗಳಿಸಿದ್ದು, ದಿಗ್ಗಜರ ಹಲವು ದಾಖಲೆಗಳು ಮುರಿಯಲ್ಪಟ್ಟಿವೆ. ತಮ್ಮ ಸತತ ಐದನೇ ಶತಕವನ್ನು ಗಳಿಸಿದ ಜಗದೀಶನ್ ಈಗ ಪ್ರಧಾನ ದೇಶೀಯ ಕ್ರಿಕೆಟ್ ನಲ್ಲಿ ಸತತ ಶತಕಗಳ ದಾಖಲೆ ಹೊಂದಿದ್ದ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಜಗದೀಶನ್ ನಿರ್ಗಮಿಸಿದಾಗ, ಅವರು ಬರೋಬ್ಬರಿ 277 ರನ್ ಗಳಿಸಿದ್ದರು. ತಮಿಳುನಾಡು 50 ಓವರ್‌ಗಳಲ್ಲಿ 506 ರನ್ ಗಳ ಹೊಸ ದಾಖಲೆಯ ಬೃಹತ್ ಮೊತ್ತ ಕಲೆ ಹಾಕಿತು.

ಜಗದೀಶನ್ ಸಿಡಿಲಬ್ಬರದ ಬ್ಯಾಟಿಂಗ್
ಟಾಸ್ ಗೆದ್ದ ನಂತರ ಅರುಣಾಚಲ ಪ್ರದೇಶ ಫೀಲ್ಡಿಂಗ್ ಆಯ್ದು ಕೊಂಡಿತು. ಈ ನಿರ್ಧಾರವು ಬೌಲರ್ ಗಳಿಗೆ ದೊಡ್ಡ ಸಂಕಟವನ್ನೇ ತಂದೊಡ್ಡಿತು. ಈ ಹಿಂದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ನಾಲ್ಕು ಶತಕಗಳನ್ನು ಗಳಿಸಿದ್ದ ಜಗದೀಶನ್ ಅವರು ಪ್ರಭಾವಶಾಲಿ ಫಾರ್ಮ್‌ನೊಂದಿಗೆ ಮುಂದುವರಿದು 141 ಎಸೆತಗಳಲ್ಲಿ 277 ರನ್ ಗಳಿಸಿದರು. ಅವರ ಅದ್ಭುತ ಇನ್ನಿಂಗ್ಸ್‌ನಲ್ಲಿ ಅತ್ಯಮೋಘ 15 ಸಿಕ್ಸರ್ ಮತ್ತು ಆಕರ್ಷಕ 25 ಬೌಂಡರಿಗಳು ಒಳಗೊಂಡಿದ್ದವು.

ರೋಹಿತ್ ಶರ್ಮಾ ದಾಖಲೆಯೂ ಪತನ
ನವೆಂಬರ್ 2014 ರಲ್ಲಿ ಐಸಿಸಿ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 264 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಜಗದೀಶನ್ ಮುರಿದರು. 277 ರನ್ ಏಕದಿನ ಕ್ರಿಕೆಟ್ ನ ಒಂದು ಇನ್ನಿಂಗ್ಸ್‌ನಲ್ಲಿ  ಗರಿಷ್ಠ ಸ್ಕೋರ್ ಆಗಿದೆ.

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ತಂಡವೊಂದು ಕಲೆ ಹಾಕಿದ ಅತ್ಯಧಿಕ ಮೊತ್ತ ಇದಾಗಿದೆ.
ಉಳಿದ ಅತ್ಯಧಿಕ ಮೊತ್ತಗಳು ಈ ಕೆಳಗಿನಂತೆ ಇವೆ
ಇಂಗ್ಲೆಂಡ್ 498/4 – ನೆದರ್ಲ್ಯಾಂಡ್ಸ್ ವಿರುದ್ಧ (2022)
ಸರ್ರೆ 496/4 – ಗ್ಲೌಸೆಸ್ಟರ್‌ಶೈರ್ ವಿರುದ್ಧ (2007)
ಇಂಗ್ಲೆಂಡ್ 481/6 – ಆಸ್ಟ್ರೇಲಿಯಾದ ವಿರುದ್ಧ (2018)
ಭಾರತ ಎ 458/4 – ಲೀಸೆಸ್ಟರ್‌ಶೈರ್  ವಿರುದ್ಧ (2018)

ಆರಂಭಿಕ ವಿಕೆಟ್‌ ದಾಖಲೆಯ ಜತೆಯಾಟ
ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸುಲಭವಾಗಿ ಮುರಿದ ಜಗದೀಶನ್ ಮತ್ತು ಸಾಯಿ ಸುದರ್ಶನ್ ಅವರು 38.3 ಓವರ್‌ಗಳಲ್ಲಿ 416 ರನ್‌ಗಳ ಆರಂಭಿಕ ಜತೆಯಾಟದೊಂದಿಗೆ ಮತ್ತೊಂದು ದಾಖಲೆಯನ್ನು ಮುರಿದರು. ಇದು ಲಿಸ್ಟ್-ಎ ಕ್ರಿಕೆಟ್‌ನ ಇತಿಹಾಸದಲ್ಲಿ ಮೊದಲ ವಿಕೆಟ್‌ ಗೆ ಕಲೆ ಹಾಕಿದ ಗರಿಷ್ಠ ಮೊತ್ತಗಳ ದಾಖಲೆಯಾಗಿದೆ. ಜಗದೀಶನ್ 277 ರನ್ ಗಳಿಸಿದರೆ, ಸಾಯಿ ಸುದರ್ಶನ್ 102 ಎಸೆತಗಳಲ್ಲಿ 154 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 19 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು ಒಳಗೊಂಡಿದ್ದು, ಆರಂಭಿಕ ಜತೆಯಾಟಕ್ಕೆ ಟೆಕಿ ಡೋರಿಯಾ ಬ್ರೇಕ್ ಹಾಕಿದರು.

ಜಗದೀಶನ್ 42ನೇ ಓವರ್‌ನಲ್ಲಿ ಔಟಾದ ನಂತರ ಬಾಬಾ ಅಪರಜಿತ್ ಮತ್ತು ಅವರ ಸಹೋದರ ಇಂದ್ರಜಿತ್ ಆಟ ಮುಂದುವರಿಸಿ ತಮಿಳುನಾಡು 50 ಓವರ್‌ಗಳಲ್ಲಿ ಒಟ್ಟು 506 ರನ್‌ ಗಳಿಸಲು ಕಾರಣರಾದರು. ಇಬ್ಬರೂ ಸಹೋದರರು ತಮ್ಮ ಇನ್ನಿಂಗ್ಸ್‌ನಲ್ಲಿ ತಲಾ 31 ರನ್ ಗಳಿಸಿ ಅಜೇಯರಾಗಿ ಉಳಿದರು. ಕುತೂಹಲಕಾರಿಯಾಗಿ, 416 ರನ್ ಜತೆಯಾಟದಲ್ಲಿ ಜಗದೀಶನ್ 251 ರನ್‌ಗಳನ್ನು ಕೊಡುಗೆಯಾಗಿ ನೀಡಿದರು.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.