ಪುದುವೆಟ್ಟು ಗ್ರಾಮದಲ್ಲಿ ವಿಷ ಅಣಬೆ ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವು
Team Udayavani, Nov 22, 2022, 10:18 AM IST
ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು.
ತೀರ ಬಡ ಕುಟುಂಬದ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಇದರಿಂದ ಅನಾಹುತ ಸಂಭವಿಸಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಮತ್ತೊಂದು ಅವಘಡ ತಪ್ಪಿದೆ.
ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ : ಜೀವಕ್ಕೆ ಕುತ್ತು ತಂದ ಸೆಲ್ಫಿ: ಕುಡಿದ ಮತ್ತಿನಲ್ಲಿ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ