ಸಾವಿರ ಕೋಟಿ ರೂ.ವೆಚ್ಚದ ಕಾಂಟಿನೆಂಟಲ್ ಆರ್ & ಡಿ ಕೇಂದ್ರ ಉದ್ಘಾಟನೆ

ಇಂತಹ ಕಾರುಗಳು ಆಧುನಿಕ ಜೀವನ ಶೈಲಿಯಲ್ಲಿ ವರದಾನ : ಸಚಿವ ಡಾ.ಅಶ್ವತ್ಥನಾರಾಯಣ

Team Udayavani, Nov 23, 2022, 3:50 PM IST

1-asdsadad

ಬೆಂಗಳೂರು: ವಾಹನ ತಯಾರಿಕಾ ಕ್ಷೇತ್ರದಲ್ಲಿ ಅಗ್ರಗಣ್ಯವಾಗಿರುವ ಕಾಂಟಿನೆಂಟಲ್ ಕಂಪನಿಯು 1,000 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಚಾಲನೆ ನೀಡಿದರು.ಹೊಸೂರು ರಸ್ತೆಗೆ ಹೊಂದಿಕೊಂಡಿರುವ ಕಾಂಟಿನೆಂಟಲ್ ಟೆಕ್ನಿಕಲ್ ಸೆಂಟರ್ ನಲ್ಲಿ ಈ‌ ಕೇಂದ್ರ ಕೆಲಸ ಮಾಡಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಂಗಳೂರು ಸೇರಿದಂತೆ ನಮ್ಮ ನಗರಗಳಲ್ಲಿ ಇನ್ನು ಕೆಲವೇ ವರ್ಷಗಳವರೆಗೆ ಸಂಚಾರ ವ್ಯವಸ್ಥೆ ಬದಲಾಗಲಿದ್ದು, ಪರಿಸರಸ್ನೇಹಿ ವಾಹನಗಳು ರಸ್ತೆಗಿಳಿಯಲಿವೆ. ಈ ಪರಿವರ್ತನೆಯಲ್ಲಿ ಕಾಂಟಿನೆಂಟಲ್ ಕಂಪನಿಯು ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು.

ಕಾಂಟಿನೆಂಟಲ್ ಕಂಪನಿಯ ಈ ಸಂಶೋಧನಾ ಕೇಂದ್ರದಲ್ಲಿ 6,500 ಸಂಶೋಧಕರು ಮತ್ತು ತಂತ್ರಜ್ಞಾನ ಪರಿಣತರಿಗೆ ಅವಕಾಶವಿದೆ. ನಗರದಲ್ಲಿ ಈಗಾಗಲೇ 450 ಕಂಪನಿಗಳ ಆರ್ ಅಂಡ್ ಡಿ ಕೇಂದ್ರಗಳಿದ್ದು, ನಮ್ಮಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವಿದೆ ಎಂದರು.

ಪ್ರವರ್ಧಮಾನಕ್ಕೆ ಬರುತ್ತಿರುವ ಎಲ್ಲ ತಂತ್ರಜ್ಞಾನ ಆಧಾರಿತ ಉದ್ದಿಮೆಗಳೆಗೆ ಸಂಬಂಧ ಪಟ್ಟಂತೆಯೂ ರಾಜ್ಯದಲ್ಲಿ ಪಾರದರ್ಶಕ ಮತ್ತು ಸಮಕಾಲೀನ ನೀತಿಗಳನ್ನು ಹೊರತರಲಾಗಿದೆ. ಇಂತಹ ಉಪಕ್ರಮಗಳು ಬೇರೆ ರಾಜ್ಯಗಳಲ್ಲಿ ಇಲ್ಲ. ಕರ್ನಾಟಕವು ಹೂಡಿಕೆ ಸೇರಿದಂತೆ ಆರ್ ಅಂಡ್ ಡಿ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂದರು.

ಕಾಂಟಿನೆಂಟಲ್ ಇಂಡಿಯಾ ಕಂಪನಿಯು 2009ರಿಂದಲೂ ಬೆಂಗಳೂರಿನಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿದೆ. ಈಗ ಅಭಿವೃದ್ಧಿ ಪಡಿಸಿರುವ ಕೇಂದ್ರವು ವಾಹನ ತಯಾರಿಕಾ ಕಂಪನಿಗಳಿಗೆ ಮಹತ್ತ್ವದ ತಾಂತ್ರಿಕ ನೆರವನ್ನು ನೀಡಲಿದೆ. ಹಾಗೆಯೇ ರಾಜ್ಯದಲ್ಲಿ ಇರುವ ಗುಣಮಟ್ಟದ ಶಿಕ್ಷಣ ಮತ್ತು ಎಂಜಿನಿಯರುಗಳು ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಜರ್ಮನಿಯ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ಕಾಂಟಿನೆಂಟಲ್ ಕಂಪನಿಯ ಭಾರತ ಘಟಕದ ಅಧ್ಯಕ್ಷ ಹಾಗೂ ಸಿಇಒ ಪ್ರಶಾಂತ್ ದೊರೆಸ್ವಾಮಿ, ಕಂಪನಿಯ ತಾಂತ್ರಿಕ ಕೇಂದ್ರದ ಮುಖ್ಯಸ್ಥೆ ಲತಾ ಚೆಂಬ್ರಕಳಂ ಮುಂತಾದವರು ಉಪಸ್ಥಿತರಿದ್ದರು.

ಸೆನ್ಸರ್ ಕಾರಿನಲ್ಲಿ ಮುದ ಅನುಭವಿಸಿದ ಸಚಿವರು
ಸಚಿವ ಅಶ್ವತ್ಥ ನಾರಾಯಣ ಅವರು ಕಾಂಟಿನೆಂಟಲ್ ಇಂಡಿಯಾ ಕಂಪನಿಯ ಆವರಣದಲ್ಲಿ, ಸಂಪೂರ್ಣವಾಗಿ ಸೆನ್ಸರ್ ಆಧಾರದ ಮೇಲೆ ಕೆಲಸ ಮಾಡುವ ಕಾರಿನಲ್ಲಿ ಒಂದು ಸುತ್ತು ಹಾಕಿ, ಮುದ ಅನುಭವಿಸಿದರು.

ಸ್ಟಿಯರಿಂಗ್ ಅನ್ನು ಮುಟ್ಟಬೇಕಿಲ್ಲದ, ಎದುರುಗಡೆ ವಾಹನ ಬಂದರೆ ತಾನಾಗಿಯೇ ನಿಲ್ಲುವ, ಸಂಚಾರ ದಟ್ಟಣೆಗೆ ತಕ್ಕಂತೆ ತನ್ನ ವೇಗವನ್ನು ತಾನೇ ನಿರ್ಧರಿಸಿಕೊಳ್ಳುವ ಈ ಕಾರ್ ನಲ್ಲಿ ಅಳವಡಿಸಿರುವ ತಂತ್ರಜ್ಞಾನ ಕಂಡು ಅವರು ರೋಮಾಂಚಿತರಾದರು.

ಕಾಂಟಿನೆಂಟಲ್ ಕಂಪನಿಯ ಭಾರತದ ಅಧ್ಯಕ್ಷ ಹಾಗೂ ಸಿಇಒ ಪ್ರಶಾಂತ್ ದೊರೆಸ್ವಾಮಿ ಅವರು ಈ ವಿಶೇಷ ಕಾರನ್ನು ಚಾಲನೆ ಮಾಡಿದರು.

ಈ ಬಗ್ಗೆ ಮಾತನಾಡಿದ ಅವರು, “ಇಂತಹ ಕಾರುಗಳು ಆಧುನಿಕ ಜೀವನ ಶೈಲಿಯಲ್ಲಿ ವರದಾನವಾಗಲಿವೆ. ಇದರಿಂದ ಮಾಲಿನ್ಯ ಇತ್ಯಾದಿ ಸಮಸ್ಯೆಗಳು ಸಹ ಇಲ್ಲ. ಜತೆಗೆ ಮನುಷ್ಯನ ಸಮಯ ಇದರಿಂದ ಉಳಿಯುತ್ತದೆ” ಎಂದರು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.