ಮಂಗಳೂರು ಸ್ಪೋಟದ ಹೊಣೆ ಹೊತ್ತ ಉಗ್ರ ಸಂಘಟನೆ ಐಆರ್ ಸಿ?:ಅರೇಬಿಕ್ ಭಾಷೆಯಲ್ಲಿ ಪೋಸ್ಟ್!
ಕದ್ರಿ ದೇವಾಲಯದ ಮೇಲೆ ದಾಳಿ ಮಾಡಲು ಮುಂದಾಗಿದ್ದನೇ ಶಾರಿಕ್?
Team Udayavani, Nov 24, 2022, 3:59 PM IST
ಮಂಗಳೂರು: ನಗರದ ನಾಗುರಿಯಲ್ಲಿ ನವೆಂಬರ್ 19 ರಂದು ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟದ ಜವಾಬ್ದಾರಿಯನ್ನು ಹೆಚ್ಚು ಪ್ರಚಲಿತವಿಲ್ಲದ ಉಗ್ರ ಸಂಘಟನೆಯಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (IRC) ವಹಿಸಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ವರದಿಯನ್ನು ಪೊಲೀಸರು ಇನ್ನಷ್ಟೇ ಖಚಿತಪಡಿಸಬೇಕಿದೆ
ಡಾರ್ಕ್ ವೆಬ್ ಮೂಲಕ ಸಾಮಾಜಿಕ ತಾಣದಲ್ಲಿ , ಅರೇಬಿಕ್ ಭಾಷೆಯಲ್ಲಿ ಐಆರ್ ಸಿ ತಾನೇ ಸ್ಫೋಟ ಮಾಡಿದ್ದು ಎಂದು ಹಾಕಲಾಗಿರುವ ಪೋಸ್ಟ್ನಲ್ಲಿ ಮೊಹಮ್ಮದ್ ಶಾರಿಕ್ ಕದ್ರಿಯಲ್ಲಿರುವ ಹಿಂದೂ ದೇವಾಲಯದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದ ಎಂದು ಹೇಳಿಕೊಳ್ಳಲಾಗಿದೆ. ಆದರೆ, ಉನ್ನತ ಪೊಲೀಸ್ ಅಧಿಕಾರಿಗಳು ಈ ಮಾಹಿತಿಯ ಮೂಲವನ್ನು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸಂದೇಶ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಾಗಿದೆ.
ನವೆಂಬರ್ 19 ರಂದು ಮಂಗಳೂರಿನಲ್ಲಿ ಮೊಹಮ್ಮದ್ ಶಾರಿಕ್ ಕುಕ್ಕರ್ನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸ್ಫೋಟ ನಡೆದಿತ್ತು. ತನಿಖೆ ನಡೆಸಿದ ಪೊಲೀಸರು ಸ್ಫೋಟವನ್ನು ಭಯೋತ್ಪಾದಕ ಕೃತ್ಯ ಎಂದು ಕರೆದು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ