ರೈತರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ: ವಿ. ಸುನೀಲ್‌ ಕುಮಾರ್‌


Team Udayavani, Nov 24, 2022, 7:19 PM IST

ರೈತರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ: ವಿ. ಸುನೀಲ್‌ ಕುಮಾರ್‌

ಸಾಗರ: ಯಾವುದೇ ಹಂತದಲ್ಲೂ ರೈತರಿಗೆ ತೊಂದರೆ ಆಗದಂತೆ ವಿದ್ಯುತ್‌ ಉತ್ಪಾದನೆ ಹಾಗೂ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಇಂಧನ ಇಲಾಖೆ ಮೂಲಕ ರಾಜ್ಯದ ರೈತರಿಗೆ ಉಚಿತ ವಿದ್ಯುತ್‌ ನೀಡುವ ನಿಟ್ಟಿನಲ್ಲಿ 16 ಸಾವಿರ ಕೋಟಿ ರೂ. ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್‌ ಹೇಳಿದರು.

ತ್ಯಾಗರ್ತಿಯಲ್ಲಿ ಗುರುವಾರ ಹನ್ನೆರಡು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ 110/11 ಕೆವಿ ವಿದ್ಯುತ್‌ ಉಪಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 46 ಉಪಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರೈತರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ ಮಾಡುವ ಸಲುವಾಗಿ ಇಂಧನ ಇಲಾಖೆ ತೆಗೆದುಕೊಂಡಿರುವ ಗಟ್ಟಿ ನಿಲುವಿನ ಪರಿಣಾಮ ಇಂತಹ ಯೋಜನೆ ರೂಪಿಸಲಾಗಿದೆ ಎಂದರು.

ಶಿವಮೊಗ್ಗ ಜಿಲ್ಲೆಯ ಏಳು ಕಡೆ ಉಪಕೇಂದ್ರ ಪ್ರಾರಂಭವಾಗುತ್ತಿದೆ.  ಬೆಳಕು’ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡಜನರ ಮನೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ.  ಅಮೃತ ಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಸಮುದಾಯದವರಿಗೆ 75 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ವರ್ಷಾನುಗಟ್ಟಲೆ ಹಿಡಿಯುತ್ತಿದ್ದ ಅಭಿವೃದ್ಧಿ ಕಾರ್ಯಗಳು ನಮ್ಮ ಸರ್ಕಾರ ಬಂದ ನಂತರ ತ್ವರಿತಗತಿಯಲ್ಲಿ ಆಗುತ್ತಿವೆ. ರೈತರಿಗೆ ಶಕ್ತಿ ನೀಡುವಂತಹ ಪುಣ್ಯದ ಕೆಲಸ ನಮ್ಮ ಸರ್ಕಾರದ ವತಿಯಿಂದ ಆಗುತ್ತಿದೆ. ಕಿಸಾನ್‌ ಸಮ್ಮಾನ್‌ ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ರೂಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಎಂದರು.

ಶಾಸಕ ಎಚ್‌.ಹಾಲಪ್ಪ ಹರತಾಳು ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಯಾವುದೇ ಭಾಗದ ಅಭಿವೃದ್ಧಿಯಲ್ಲಿ ಕಿಂಚಿತ್‌ ವ್ಯತ್ಯಯವಾಗುವುದನ್ನು ಸಹಿಸಿಲ್ಲ. ಅದರ ಪರಿಣಾಮವಾಗಿ ನಿರೀಕ್ಷಿಸಲಾಗದ ಪ್ರಭಾವ ನಮ್ಮಲ್ಲಾಗಿದೆ ಎಂದರು.

ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಹಿರಿಯ ಕಲಾವಿದರಾದ ಬಿ. ಟಾಕಪ್ಪ, ವಸುಧಾ ಶರ್ಮ ಸೇರಿದಂತೆ ವಿವಿಧ ಹಿರಿಯ ಕಲಾವಿದರಿಗೆ ಗುರುತಿನಪತ್ರ ನೀಡಲಾಯಿತು. ಕೆಪಿಟಿಸಿಎಲ್‌ ಮುಖ್ಯ ಇಂಜಿನಿಯರ್‌ ಎಂ.ಆರ್‌. ಶ್ಯಾನಭಾಗ್‌, ಅ ಧೀಕ್ಷಕ ಎಂಜಿನಿಯರ್‌ ಕೆ.ಸುರೇಶ್‌, ಬರೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಪುಟ್ಟಪ್ಪ, ತ್ಯಾಗರ್ತಿ ಗ್ರಾಪಂ ಅಧ್ಯಕ್ಷೆ ಚೈತ್ರಾ ಟಾಕಪ್ಪ, ಉಪಾಧ್ಯಕ್ಷ ಇಸಾಕ್‌, ಹಿರೇಬಿಲಗುಂಜಿ ಗ್ರಾಪಂ ಪ್ರಭಾರಿ ಅಧ್ಯಕ್ಷ ಸೋಮಶೇಖರ್‌ ಕುಣಿಕೆರಿ, ತಹಶೀಲ್ದಾರ್‌ ಮಲ್ಲೇಶ್‌ ಬಿ. ಪೂಜಾರ್‌, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್‌ ಮತ್ತಿತರರು ಇದ್ದರು.

ಡಬಲ್‌ ಎಂಜಿನ್‌ನಿಂದ ಕಾರ್ಯಸಿದ್ಧಿ:

ಕುಡಿಯುವ ನೀರಿನ ಯೋಜನೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಹೆಸರು ಹಾಕಬೇಕಿತ್ತು ಎಂಬ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಕಾಗೋಡು ಅವರ ಬಗ್ಗೆ ಯಾವತ್ತೂ ಗೌರವಕ್ಕೆ ಕೊರತೆಯಿಲ್ಲ. ಅಂಬ್ಲಿಗೊಳದಿಂದ ಕುಡಿಯುವ ನೀರು ಯೋಜನೆಗೆ ಕಾಗೋಡು ಅವರ ಪ್ರಯತ್ನ ನಡೆದಿರಬಹುದು, ಕೆಲಸ ಆಗಿರಲಿಲ್ಲ. ಈಗ ನಾನು, ಸಂಸದ ಬಿ.ವೈ.ರಾಘವೇಂದ್ರ ಅವರ ಡಬಲ್‌ ಇಂಜಿನ್‌ ಪ್ರಯತ್ನದಿಂದ ಸಾಕಾರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು.

ರಾಜಕೀಯ ಕಾರಣಕ್ಕಾಗಿ ನಮ್ಮ ಮೇಲೆ ಮುಳುಗಡೆ ರೈತರ ವಿಷಯ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ. 1962ರಲ್ಲಿ 24,567 ಎಕರೆ ಕೃಷಿಭೂಮಿ ವಿದ್ಯುತ್‌ ಉತ್ಪಾದನೆಗಾಗಿ ಮುಳುಗಡೆಯಾಗಿದೆ. ಆ ಕಾಲದಲ್ಲಿ ಮುಳುಗಡೆ ಪ್ರದೇಶದ ರೈತರನ್ನು ರಾತ್ರೋರಾತ್ರಿ ಲಾರಿಯಲ್ಲಿ ತಂದು ಬೇರೆ ಬೇರೆ ಕಡೆ ಬಿಡಲಾಗಿದೆ. ಆ ರೈತರು ಅಲ್ಲಿರುವ ಜಮೀನುಗಳನ್ನು ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್‌ ಮುಖಂಡರು ಕಾನೂನು ಪ್ರಕಾರ ಮಾಡಬೇಕಾಗಿದ್ದ ಪ್ರಕ್ರಿಯೆ ಮಾಡದೆ ಈಗ ರೈತರನ್ನು ಒಕ್ಕಲೆಬ್ಬಿಸುತ್ತಾರೆ ಎಂಬ ವದಂತಿ ಹರಿಬಿಟ್ಟು ಮುಳುಗಡೆ ರೈತರ ಸಮಸ್ಯೆಗೆ ಬಿಜೆಪಿ ಸರ್ಕಾರ ಕಾರಣ ಎಂದು ಆರೋಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಗೋಡು ತಿಮ್ಮಪ್ಪನವರು ವಿವಿಧ ಖಾತೆಗಳ ಸಚಿವರಾಗಿದ್ದವರು. ಕಂದಾಯ ಸಚಿವರಾಗಿದ್ದಾಗ ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯದೆ ಜಮೀನು ಡಿ- ನೋಟಿಫಿಕೇಶನ್‌ ಮಾಡಿದ್ದು ತಪ್ಪಾಗಿದೆ ಎಂದು ಕೋರ್ಟ್‌ ಹೇಳಿದೆ. ಅದನ್ನು ಸರಿಪಡಿಸುವ ಕೆಲಸಗಳನ್ನು ನಾವು  ಮಾಡುತ್ತೇವೆ. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಒಂದು ಗುಂಟೆ ಜಮೀನು ಕೈಬಿಡದಂತೆ ನೋಡಿಕೊಳ್ಳುತ್ತೇವೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

 

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.