ಡಿ. 1ರಿಂದ ಹೆಜಮಾಡಿ ಟೋಲ್‌ ದುಬಾರಿ


Team Udayavani, Nov 25, 2022, 7:10 AM IST

ಡಿ. 1ರಿಂದ ಹೆಜಮಾಡಿ ಟೋಲ್‌ ದುಬಾರಿ

ಮಂಗಳೂರು: ಕೊನೆಗೂ ಡಿ. 1ರಿಂದ ಅನ್ವಯವಾಗುವಂತೆ ಸುರತ್ಕಲ್‌ ಎನ್‌ಐಟಿಕೆ ಬಳಿಯ ಸುಂಕ ಸಂಗ್ರಹ ಕೇಂದ್ರವು ಹೆಜಮಾಡಿ ಟೋಲ್‌ಗೇಟ್‌ ನೊಂದಿಗೆ ವಿಲೀನಗೊಳ್ಳಲಿದೆ. ಇದರ ಪರಿಣಾಮವಾಗಿ ನಿರೀಕ್ಷೆ ಯಂತೆಯೇ ಹೆಜಮಾಡಿಯಲ್ಲಿ ಸುಂಕ ದುಬಾರಿಯಾಗಲಿದೆ. ಈ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಉಡುಪಿ ಜಿಲ್ಲಾಡಳಿತಕ್ಕೆ ಬರೆದಿರುವ ಪತ್ರದಲ್ಲಿ ವಿವರಿಸಿದೆ.

ಇದುವರೆಗೆ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಕೆಎ 19 ನೋಂದಣಿಯ ಕಾರುಗಳಿಗೆ ಇದ್ದ ರಿಯಾಯಿತಿ ರದ್ದಾಗಲಿದೆ. ಇನ್ನು ಮುಂದೆ ಹೆದ್ದಾರಿಯಲ್ಲಿ ಉಡುಪಿ-ಮಂಗಳೂರು ಮಧ್ಯೆ ಸಂಚರಿಸುವವರು ಹೆಜಮಾಡಿಯ 40 ರೂ. ಹಾಗೂ ಸುರತ್ಕಲ್‌ನ 60 ರೂ. ಸೇರಿದಂತೆ 100 ರೂ. ಪಾವತಿ ಮಾಡಲೇಬೇಕು. ಆದರೆ ಹೆಜಮಾಡಿ ಟೋಲ್‌ಗೇಟ್‌ ಒಳಗೆ ಮಂಗಳೂರು ಮಧ್ಯೆ ಸಂಚರಿಸುವ ಬಸ್‌, ಟೂರಿಸ್ಟ್‌ ವಾಹನ, ಲಾರಿ ಮತ್ತಿತರ ವಾಹನಗಳಿಗೆ ಟೋಲ್‌ ಪಾವತಿಸಬೇಕಾದ ಪ್ರಮೇಯವಿರುವುದಿಲ್ಲ.

ಎನ್‌ಎಂಪಿ ರೋಡ್‌ ಕನೆಕ್ಟಿವಿಟಿ ರಸ್ತೆಯ ಸುರತ್ಕಲ್‌ನ ಟೋಲ್‌ಗೇಟ್‌ ಜತೆಗೆ ನವಯುಗದವರ ಹೆಜಮಾಡಿ ಟೋಲ್‌ಗೇಟ್‌ ವಿಲೀನ ಗೊಳಿಸಲಾಗಿದೆ. ಇದರಂತೆಯೇ ಸುರತ್ಕಲ್‌ನ ಸುಂಕದರಗಳನ್ನೂ ಹೆಜಮಾಡಿ ಜತೆ ಸೇರ್ಪಡೆ ಮಾಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮುಂದೆ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ತೊಡಕು ಉಂಟಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಹೆಜಮಾಡಿಯಲ್ಲಿ ವಿಲೀನದ ಬಳಿಕ ಏರಿಕೆಯಾದ ಸುಂಕದ ಬಳಿಕ ಯಾವುದೇ ಸಮಸ್ಯೆಯಾಗಿ ಟೋಲ್‌ ಸಂಗ್ರಹದಲ್ಲಿ ವ್ಯತ್ಯಯ ಉಂಟಾದರೆ ಎನ್‌ಎಚ್‌ಎಐ ಜತೆಗಿನ ರಾಜ್ಯ ಸಹಕಾರ ಒಪ್ಪಂದದಂತೆ ನಷ್ಟವನ್ನು ರಾಜ್ಯವೇ ಭರಿಸಬೇಕು ಎಂದು ತಿಳಿಸಲಾಗಿದೆ.

ಈ ಕುರಿತಂತೆ ಉಡುಪಿ ಜಿಲ್ಲಾಡಳಿತದ ಕಡೆಯಿಂದ ಯಾವುದೇ ರೀತಿಯ ಸಹಾಯ, ನೆರವನ್ನು ಪೊಲೀಸ್‌ ಭದ್ರತೆಯನ್ನು ಕಲ್ಪಿಸಬೇಕು, ಇದು ಡಿ. 1ರಿಂದಲೇ ಚಾಲ್ತಿಗೆ ಬರಲಿದೆ ಎಂದೂ ಉಡುಪಿ ಜಿಲ್ಲಾಡಳಿತಕ್ಕೆ ಎನ್‌ಎಚ್‌ಎಐ ಡಿಜಿಎಂ ಮತ್ತು ಯೋಜನ ನಿರ್ದೇಶಕ ಎಚ್‌.ಎಸ್‌.ಲಿಂಗೇಗೌಡ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

ಹೋರಾಟ ಸಮಿತಿ ಆಕ್ರೋಶ:

ಅತ್ಯಂತ ಜನವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್‌ ಟೋಲ್‌ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿ ಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದು ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್‌ ಟೋಲ್‌ ಗೇಟ್‌ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲವಾಗಿದೆ ಎಂದು ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ತಿಳಿಸಿದೆ.

ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್‌ ಟೋಲ್‌ ಕಂಪೆನಿಯ ಹಿತ ಮಾತ್ರ ಅವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು ಎಂದು ಸಂಚಾಲಕ ಮುನೀರ್‌ ಕಾಟಿಪಳ್ಳ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.