ವಾವ್! ಏನು ರುಚಿ ಅಂತೀರಾ ಈ ಕಟ್ಲೆಟ್….ಸುಲಭ ವಿಧಾನ ಇಲ್ಲಿದೆ…
ಈ ರೀತಿ ಹಾಗಲಕಾಯಿ ಕಟ್ಲೆಟ್ ಮಾಡಿದ್ರೆ ಎಲ್ಲರೂ ಇಷ್ಟ ಪಟ್ಟು ತಿಂತಾರೆ....
ಶ್ರೀರಾಮ್ ನಾಯಕ್, Nov 25, 2022, 5:45 PM IST
ತರಕಾರಿಗಳಲ್ಲಿ ಅತ್ಯಂತ ಕಹಿಯಾದ ಒಂದು ತರಕಾರಿಯೆಂದರೆ ಅದು ಹಾಗಲಕಾಯಿ. ಆರೋಗ್ಯದ ದೃಷ್ಟಿಯಲ್ಲಿ ಈ ತರಕಾರಿ ಉತ್ತಮ ಯಾಕೆಂದರೆ ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಹಾಗೂ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದೆ. ಮಾತ್ರವಲ್ಲದೇ ಹಾಗಲಕಾಯಿ ಸೇವನೆಯಿಂದ ನಮ್ಮಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.ಹಾಗಲಕಾಯಿಯಿಂದ ಸಾಕಷ್ಟು ರುಚಿಯಾದ ಅಡುಗೆಯನ್ನು ಮಾಡುತ್ತಾರೆ. ಉದಾಃ ಪಲ್ಯ,ಗೊಜ್ಜು, ಸಾಂಬಾರ್,ಚಟ್ನಿ,ಕಿಸ್ಮುರಿ,ಚಿಪ್ಸ್.. ಹೀಗೆ ಪಟ್ಟಿ ಬಳೆಯುತ್ತ ಹೋಗುತ್ತದೆ.ಆದರೆ ನೀವು ಹಾಗಲಕಾಯಿಯ ಕಟ್ಲೆಟ್ ಮಾಡಿ ತಿಂದಿದ್ದೀರಾ..ಹಾಗಿದ್ದರೆ ಅತಿ ಕಡಿಮೆ ಸಮಯದಲ್ಲಿ ಈ ರೆಸಿಪಿಯನ್ನು ತಯಾರಿಸಬಹುದು.ಈ ರೆಸಿಪಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ….
ಬೇಕಾಗುವ ಸಾಮಗ್ರಿಗಳು
ಹಾಗಲಕಾಯಿ-1, ಬೇಯಿಸಿದ ಆಲೂಗಡ್ಡೆ (ಬಟಾಟೆ)-2 , ತುರಿದ ಕ್ಯಾರೆಟ್-ಅರ್ಧ ಕಪ್, ಬೇಯಿಸಿದ ಹಸಿ ಬಟಾಣಿ-5ಚಮಚ, ಅಮ್ಚೂರ್ ಪುಡಿ-1ಟೀ ಸ್ಪೂನ್, ಖಾರದ ಪುಡಿ-1ಚಮಚ, ಧನಿಯಾ ಪುಡಿ-ಅರ್ಧ ಚಮಚ, ಹಸಿಮೆಣಸು-2. ಬಾಂಬೆ ರವೆ-ಸ್ವಲ್ಪ, ಹೆಚ್ಚಿದ ಕೊತ್ತಂಬರಿ ಸೊಪ್ಪು-ಸ್ವಲ್ಪ, ಎಣ್ಣೆ, ಉಪ್ಪು-ರುಚಿಗೆ ತಕ್ಕಷ್ಟು.
ತಯಾರಿಸುವ ವಿಧಾನ
ಹಾಗಲಕಾಯಿ ತಿರುಳು ತೆಗೆದು ತುರಿದುಕೊಳ್ಳಿ. ತದನಂತರ ಒಂದು ಬೌಲ್ಗೆ ಹಾಗಲಕಾಯಿಯ ತುರಿ ಮತ್ತು ಉಪ್ಪು ಸೇರಿಸಿ ಸರಿಯಾಗಿ ಮಿಕ್ಸ್ ಮಾಡಿ. ಮತ್ತೊಂದು ಪಾತ್ರೆಗೆ ಬೇಯಿಸಿದ ಬಟಾಟೆ, ತುರಿದಿಟ್ಟ ಕ್ಯಾರೆಟ್, ಬೇಯಿಸಿದ ಹಸಿ ಬಟಾಣಿ ಸೇರಿಸಿ ಸರಿಯಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ತುರಿದಿಟ್ಟ ಹಾಗಲಕಾಯಿ, ಧನಿಯಾ ಪುಡಿ, ಅಮ್ಚೂರ್ ಪುಡಿ, ಖಾರದ ಪುಡಿ, ಹಸಿಮೆಣಸು ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಮಿಕ್ಸ್ ಮಾಡಿಕೊಳ್ಳಿ. ಆಮೇಲೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ ಎಲ್ಲವನ್ನು ಮಿಕ್ಸ್ ಮಾಡಿ. ಈ ಮಿಶ್ರಣದಿಂದ ಸಣ್ಣ ಸಣ್ಣ ಉಂಡೆ ಕಟ್ಟಿ, ತುಸು ಒತ್ತಿ ಚಪ್ಪಟೆ ಮಾಡಿ ರವೆಯಲ್ಲಿ ಹೊರಳಿಸಿ ತೆಗೆಯಿರಿ. ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಸವರಿ ಕಾದ ನಂತರ 4ರಿಂದ 5 ಕಟ್ಲೆಟ್ ಗಳನ್ನಿಟ್ಟು ಎರಡೂ ಬದಿ ಹುರಿಯಿರಿ ನೀವು ಇದನ್ನು ಎಣ್ಣೆಯಲ್ಲಿಯೂ ಸಹ ಕರಿದು ತೆಗೆಯಬಹುದು). ಟೊಮೆಟೋ ಸಾಸ್ ಜೊತೆಗೆ ಬಿಸಿ ಬಿಸಿಯಾದ ಹಾಗಲಕಾಯಿ ಕಟ್ಲೆಟ್ ಸವಿಯಿರಿ.
ಸೂಚನೆ: ಕಟ್ಲೆಟ್ ಕೋಟಿಂಗ್ ಗೆ ರವೆ ಬದಲಿಗೆ ಬ್ರೆಡ್ ಕ್ರಂಬ್ಸ್ ಸಹ ಬಳಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ
Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?
World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?
ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ