ಸ್ಯಾಮ್‌ಸಂಗ್ E.D.G.E. ಕ್ಯಾಂಪಸ್‌ ಪ್ರೋಗ್ರಾಮ್‌ :ಐಐಎಂ ಬೆಂಗಳೂರಿಗೆ ಪ್ರಥಮ ಸ್ಥಾನ

ಎನ್‌ಐಡಿ ಬೆಂಗಳೂರು ಮತ್ತು ಐಐಎಫ್‌ಟಿ ರನ್ನರ್ ಅಪ್

Team Udayavani, Nov 25, 2022, 9:17 PM IST

ಸ್ಯಾಮ್‌ಸಂಗ್ E.D.G.E. ಕ್ಯಾಂಪಸ್‌ ಪ್ರೋಗ್ರಾಮ್‌ :ಐಐಎಂ ಬೆಂಗಳೂರಿಗೆ ಪ್ರಥಮ ಸ್ಥಾನ

ಬೆಂಗಳೂರು: ಎಲೆಕ್ಟ್ರಾನಿಕ್ಸ್‌ ಬ್ರ್ಯಾಂಡ್‌ ಸ್ಯಾಮ್‌ಸಂಗ್‌ ತನ್ನ ಕ್ಯಾಂಪಸ್ ಪ್ರೋಗ್ರಾಮ್ ಸ್ಯಾಮ್‌ಸಂಗ್‌ E.D.G.E.ನ ಏಳನೇ ಆವೃತ್ತಿಯನ್ನು ಪೂರ್ತಿಗೊಳಿಸಿದ್ದು, 27 ಅಗ್ರ ಸಂಸ್ಥೆಗಳಿಂದ 9,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಐಐಎಂ ಬೆಂಗಳೂರಿನ ಟೀಮ್‌ ಟ್ರಾನ್ಸೆಂಡೆನ್ಸ್‌ನ ಶ್ರೇಯಸ್ ಎಸ್‌, ಅಮೃತಾ ಸಿಂಗ್‌ ಮತ್ತು ಶಿಂಧೆ ಚೈತನ್ಯ ಶರದ್‌ ಮೊದಲ ಬಹುಮಾನವನ್ನು ಗಳಿಸಿದ್ದಾರೆ. ಭಾರತದಲ್ಲಿ ಐಒಟಿ ಸಾಧನಗಳನ್ನು ಗ್ರಾಹಕರು ಅಳವಡಿಸಿಕೊಳ್ಳಲು ನೆರವಾಗುವ ಪರಿಹಾರೋಪಾಯಗಳನ್ನು ಈ ವಿಜೇತರು ಪ್ರಸ್ತುತಪಡಿಸಿದ್ದಾರೆ. ಇದು ಜ್ಯೂರಿಗೆ ಹೆಚ್ಚು ಮೆಚ್ಚುಗೆಯಾಗಿದ್ದು, 4.5 ಲಕ್ಷ ರೂ. ನಗದು ಬಹುಮಾನವನ್ನು ಗೆದ್ದುಕೊಂಡಿದೆ. ಸ್ಯಾಮ್‌ಸಂಗ್‌ನ ಫ್ಲಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳು ಇದರಲ್ಲಿವೆ.

ಸ್ಯಾಮ್‌ಸಂಗ್ E.D.G.E. ಎಂಬುದು ರಾಷ್ಟ್ರಾದ್ಯಂತ ನಡೆಯುವ ಕ್ಯಾಂಪಸ್ ಪ್ಲಾಟ್‌ಫಾರಂ ಆಗಿದ್ದು, ವಿದ್ಯಾರ್ಥಿಗಳಿಗೆ ತಮ್ಮೊಳಗಿನ ಉದ್ಯಮಶೀಲತೆ, ನಾಯಕತ್ವ ಕೌಶಲಗಳನ್ನು ಪ್ರದರ್ಶಿಸುವುದಕ್ಕೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು, ತಮ್ಮ ವೃತ್ತಿ ಜೀವನವನ್ನು ಆರಂಭಿಸಲು ಒಂದು ಅವಕಾಶವನ್ನು ಈ ಕಾರ್ಯಕ್ರಮವು ಒದಗಿಸುತ್ತದೆ.

ಸಂಪೂರ್ಣ ಮೋಶನ್ ವೀಡಿಯೋ ಮೂಲಕ ಗೇಮಿಫಿಕೇಶನ್ ಬಳಸಿಕೊಂಡು ಗ್ರಾಹಕರ ಜೊತೆಗೆ ನೇರ ಸಂವಹನ ನಡೆಸುವ ಆಧುನಿಕ ವಿನ್ಯಾಸ ಪರಿಹಾರವನ್ನು ರೂಪಿಸಿದ ಎನ್‌ಐಡಿ ಬೆಂಗಳೂರಿನ ಟೀಮ್ ಸೃಜನ್‌ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು ರೂ. 3 ಲಕ್ಷರೂ. ನಗದು ಬಹುಮಾನವನ್ನು ಗೆದ್ದಿದ್ದಾರೆ

ಐಐಎಫ್‌ಟಿಯ ಟೀಮ್‌ ಜಿ.ಯು.ಜಿ ಮೂರನೇ ಸ್ಥಾನವನ್ನು ಪಡೆದಿದ್ದು, ಇನ್‌ ಸ್ಟೋರ್ ಸ್ಮಾರ್ಟ್ ಹೋಮ್ ಮಾಡೆಲ್ ಮತ್ತು ಮೆಟಾವರ್ಸ್‌ ಎಕ್ಸ್‌ಪೀರಿಯನ್ಸ್‌ ಸ್ಟೋರ್‌ ಮೂಲಕ ಕನೆಕ್ಟೆಡ್‌ ಸಾಧನಗಳ ಪರಿಸರವನ್ನು ಅನುಭವಿಸಲು ಗ್ರಾಹಕರಿಗೆ ಅನುವು ಮಾಡುವ ಸೌಲಭ್ಯವನ್ನು ಇದು ಅಭಿವೃದ್ಧಿಪಡಿಸಿದೆ. ತಂಡವು 1.5 ಲಕ್ಷ ರೂ. ಬಹುಮಾನವನ್ನು ಗಳಿಸಿದೆ.

ಕಳೆದ ಎರಡು ವರ್ಷಗಳಿಂದ ಕಾರ್ಯಕ್ರಮವನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿತ್ತು. ಆದರೆ, 2022 ಆವೃತ್ತಿಯ ಸ್ಯಾಮ್‌ಸಂಗ್‌ E.D.G.E. ಅನ್ನು ಭೌತಿಕವಾಗಿ ನಡೆಸಲಾಯಿತು. ಗುರುಗ್ರಾಮದಲ್ಲಿ ನಡೆದ ಫಿನಾಲೆಯಲ್ಲಿ ಸ್ಯಾಮ್‌ಸಂಗ್‌ ಸೌತ್‌ವೆಸ್ಟ್ ಏಷ್ಯಾದ ಅಧ್ಯಕ್ಷರು ಮತ್ತು ಸಿಇಒ ಕೆನ್‌ ಕಾಂಗ್‌ ಭಾಗವಹಿಸಿದ್ದರು ಮತ್ತು ಸ್ಯಾಮ್‌ಸಂಗ್‌ ಇಂಡಿಯಾದ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

2 ತಿಂಗಳ ಕಾರ್ಯಕ್ರಮವನ್ನು ಮೂರು ಸುತ್ತಿನ ಕಟ್ಟುನಿಟ್ಟಿನ ಮೌಲ್ಯಮಾಪನದ ಮೂಲಕ ನಡೆಸಲಾಗುತ್ತದೆ. ಈ ವರ್ಷ 27 ಕಾಲೇಜುಗಳ 2700 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಮೌಲ್ಯಮಾಪನ ಮಾಡಿದ ನಂತರ, ಪ್ರತಿ ಕ್ಯಾಂಪಸ್‌ನಿಂದ ಒಂದು ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಅವರು ಪ್ರಕರಣ ಅಧ್ಯಯನ ನಡೆಸಿ, ವಿವರವಾದ ಪ್ರಾತ್ಯಕ್ಷಿಕೆಗಳನ್ನು ಪ್ರಾದೇಶಿಕ ಸುತ್ತಿನಲ್ಲಿ ಪ್ರಸ್ತುತಪಡಿಸುತ್ತಾರೆ. ಈ ವರ್ಷ ಒಟ್ಟು ಒಂಬತ್ತು ತಂಡಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿತ್ತು ಮತ್ತು ರಾಷ್ಟ್ರೀಯ ಸುತ್ತಿನಲ್ಲಿ ಅಗ್ರ 3 ಸ್ಥಾನಗಳಿಗೆ ಸ್ಫರ್ಧಿಸಲು ಸ್ಯಾಮ್‌ಸಂಗ್‌ ಲೀಡರ್‌ಗಳು ಮಾರ್ಗದರ್ಶನ ನೀಡಿದ್ದರು.

ಇದನ್ನೂ ಓದಿ : ಲಾವಾದಿಂದ ಅಗ್ಗದ ದರದ ಹೊಸ ಫೋನ್‍ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.