ಉಡುಪಿ: ವೃದ್ಧೆಯ ಕುತ್ತಿಗೆಯಿಂದ ಚಿನ್ನಾಭರಣ ಕಳವುಗೈದು ಪರಾರಿಯಾದ ಹೋಂ ನರ್ಸ್‌


Team Udayavani, Nov 25, 2022, 10:02 PM IST

ಉಡುಪಿ: ವೃದ್ಧೆಯ ಕುತ್ತಿಗೆಯಿಂದ ಚಿನ್ನಾಭರಣ ಕಳವುಗೈದು ಪರಾರಿಯಾದ ಹೋಂ ನರ್ಸ್‌

ಉಡುಪಿ: ಆತ್ರಾಡಿ, ಮದಗದಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾಗಿದ್ದ ಹೋಂ ನರ್ಸ್‌ಳನ್ನು ಪೊಲೀಸರು ಬಂಧಿಸಿದ್ದಾರೆ.

ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿಯ ಜಾಬ್‌ ಲಿಂಕ್ಸ್‌ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿಯನ್ನು ಹೋಂ ನರ್ಸ್‌ ಆಗಿ ನೇಮಿಸಿದ್ದರು.

ಅ. 20ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡುತ್ತಿದ್ದರು. ನ. 21ರಂದು ಸಂಜೆ ಸರಸ್ವತಿ ಅವರ ಸರವನ್ನು ಕಳವು ಮಾಡಿ ಯಾರಿಗೂ ಹೇಳದೆ ಮನೆಯಿಂದ ಪರಾರಿಯಾಗಿದ್ದಳು. ನ. 24ರಂದು ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ ಪುತ್ರ ವಸಂತ ಶೆಟ್ಟಿ ಅವರು ದೂರು ದಾಖಲಿಸಿದ್ದು, ತನಿಖೆ ನಡೆಸಿದ ಪೊಲೀಸರು ಅದೇ ದಿನ ಉಡುಪಿಯಲ್ಲಿ ರೇಖಾ ಹೆಬ್ಬಳ್ಳಿಯನ್ನು ಬಂಧಿಸಿದ್ದು, ಕಳವು ಮಾಡಿದ ಸರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಎಸ್‌ಪಿ ಅಕ್ಷಯ ಎಂ., ಎಎಸ್‌ಪಿ ಸಿದ್ದಲಿಂಗಪ್ಪ, ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಸುಧಾಕರ್‌ ನಾಯ್ಕ, ಬ್ರಹ್ಮಾವರ ಪೊಲೀಸ್‌ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್‌ ಠಾಣೆ ಪಿಎಸ್‌ಐ ಅನಿಲ್‌ ಬಿ.ಎಂ., ಸಿಬಂದಿ ಎಎಸ್‌ಐ ಜಯಂತ, ಸುಂದರ್‌, ಎಚ್‌.ಸಿ. ದಯಾನಂದ ಪ್ರಭು, ರಘು, ರಾಘವೇಂದ್ರ, ಕಾಮತ್‌, ಪಿ.ಸಿ. ಆದರ್ಶ್‌, ಭೀಮಪ್ಪ, ನಿತಿನ್‌, ನಬಿ, ಕಾರ್ತಿಕ್‌, ರಾಜೇಶ್ವರಿ, ಸುರೇಖಾ, ಜ್ಯೋತಿ ನಾಗರತ್ನಾ, ಸುಮಲತಾ, ಜಯಲಕ್ಷ್ಮೀ ಅವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪೂರ್ವಾಪರ ಮಾಹಿತಿ ಪಡೆದುಕೊಳ್ಳಿ
ಹೋಂ ನರ್ಸಿಂಗ್‌ ಏಜೆನ್ಸಿಗಳು ಕೆಲಸಕ್ಕೆ ನೇಮಿಸುವರ ಬಗ್ಗೆ ಪೂರ್ವಾಪರ ಮಾಹಿತಿಯನ್ನು ಪಡೆದುಕೊಳ್ಳಬೇಕು. ಆದರೆ ಏಜೆನ್ಸಿಯವರು ನಿರ್ಲಕ್ಷ್ಯತನದಿಂದ ಸಿಬಂದಿ ನೇಮಿಸಿಕೊಳ್ಳುವುದರಿಂದ ಈ ರೀತಿಯ ಕೃತ್ಯಗಳು ನಡೆಯುತ್ತವೆ ಎಂದು ಪೊಲೀಸ್‌ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ. ಏಜೆನ್ಸಿ ನೇಮಿಸಿದ ಸಿಬಂದಿ ಇಂತಹ ಕೃತ್ಯಗಳನ್ನು ನಡೆಸುವುದರಿಂದ ಏಜೆನ್ಸಿಯವರ ಹೆಸರು ಕೂಡ ಹಾಳಾಗುತ್ತದೆ. ಹೀಗಾಗಿ ಈ ಕುರಿತು ನಿಗಾ ವಹಿಸಬೇಕು ಎಂದು ಪೊಲೀಸ್‌ ಇಲಾಖೆ ಸೂಚಿಸಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.