ವಿಶೇಷ ಸಾಮರ್ಥ್ಯದ ಮಕ್ಕಳು ಸಮಾಜಕ್ಕೆ ಹೊರೆಯಲ್ಲ: ಬಿಷಪ್‌

ಪಾಂಬೂರು ಮಾನಸ ಸಂಸ್ಥೆಯ ರಜತ ಮಹೋತ್ಸವ

Team Udayavani, Nov 26, 2022, 11:15 AM IST

4

ಶಿರ್ವ: ವಿಕಲಚೇತನ ಮಕ್ಕಳಿಗೆ ದೇವರು ವಿಶೇಷ ಪ್ರತಿಭೆ ನೀಡಿದ್ದು,ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ, ಸಹಕಾರ ನೀಡಿದರೆ ಮಕ್ಕಳು ಸಮಾಜದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ. ವಿಶೇಷ ಸಾಮರ್ಥಯದ ಮಕ್ಕಳು ಸಮಾಜಕ್ಕೆ ಹೊರೆಯಲ್ಲ,ಬದಲಾಗಿ ಸಮಾಜದ ಆಸ್ತಿ ಎಂದು ಉಡುಪಿಯ ಬಿಷಪ್‌ ರೆ|ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಹೇಳಿದರು.

ಅವರು ನ. 25 ರಂದು ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದ ರಜತ ಮಹೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಪ್ರೀತಿ ಇದ್ದಲ್ಲಿ ದೇವರಿದ್ದು, ಶಾಂತಿ ಸಂತೋಷವಿರುತ್ತದೆ ಹಾಗೂ ಪ್ರೀತಿಯ ನೆಲೆಯಲ್ಲಿ ಅನೇಕರು ಸೌಹಾರ್ದತೆ ಮತ್ತು ಐಕ್ಯತೆಯಿಂದ ದುಡಿಯಲು ಮುಂದಾಗುತ್ತಾರೆ. ಮಾನಸ ಸಂಸ್ಥೆಯು ಸಮಾಜದ ಆಸ್ತಿಯಾಗಿದ್ದು, ಸಂಸ್ಥೆಯ ಮೂಲಕ ಅತೀ ಕೆಳಸ್ತರದಲ್ಲಿರುವ ವಿಕಲಚೇತನ ಮಕ್ಕಳಿಗೆ ಸಮಾಜದಲ್ಲಿ ಬದುಕು ರೂಪಿಸಲು ಸಾಧ್ಯವಾಗಿದೆ ಎಂದರು.

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ಮಾನವೀಯ ಮೌಲ್ಯಗಳನ್ನು ವೃದ್ಧಿಸುವ,ವಿಕಲಚೇತನರಿಗೆ ಪುನಶ್ಚೇತನ ನೀಡುವ ಸಂಸ್ಥೆಯ ಮಹತ್ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ ವಿಶೇಷ ಮಕ್ಕಳು ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಸ್ಥೆಯು ಮಾನವತ್ವದ ಮಾಣಿಕ್ಯವನ್ನು ಸಮಾಜಕ್ಕೆ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕ ವಿಶ್ವಸ್ಥ ಮಂಡಳಿ, ಟ್ರಸ್ಟಿಗಳು, ಕೆಥೋಲಿಕ್‌ಸಭೆ ಉಡುಪಿ, ಮಂಗಳೂರ್‌ನ ಪ್ರತಿನಿಧಿಗಳು, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಪ್ರಾಂಶುಪಾಲರು, ಭಗಿನಿಯರು, ಶಿಕ್ಷಕವೃಂದ, ಹಾಸ್ಟೆಲ್‌ ವಾರ್ಡನ್‌ಗಳನ್ನು ಗೌರವಿಸಲಾಯಿತು.

ಜರ್ಮನಿಯ ಧರ್ಮಗುರು ರೆ|ಫಾ| ಜೆಫ್ರಿನ್‌ ಮೋನಿಸ್‌ಮಾನಸ ಸಂಸ್ಥೆ ನಡೆದು ಬಂದ ದಾರಿಯ ಸ್ಮರಣ ಸಂಚಿಕೆಯನ್ನು ಬಿಡುಗಡೆಗಿಳಿಸಿ ಮಾತನಾಡಿದರು.

ಸರ್ವೆಂಟ್‌ ಆಫ್‌ ಹೋಲಿ ಸ್ಪಿರಿಟ್‌ನ ಸಿ| ಐಡಾ ಲೋಬೋ, ಜರ್ಮನಿಯ ರುಡರ್ಬರ್ಗ್‌ಲಾರ್ಡ್‌ ಸಿಟಿಯ ಮಾಜಿ ಮೇಯರ್‌ ಹೋರ್ಸ್ಡ್ ಶ್ನೈಡರ್‌ ಮಾತನಾಡಿದರು.

ಮುಂಬಯಿ ಉದ್ಯಮಿ ಮರ್ಕ್ಯುರಿ ಫಿನುಮೆಟಿಕ್ಸ್‌ನ ನೋಯೆಲ್‌ ರಸ್ಕಿನ್ಹಾ, ಮುಂಬಯಿ ಆನ್‌ಶೋರ್‌ ಸಂಸ್ಥೆಯ ಪ್ರತಿನಿಧಿ ಹರೀಶ್‌ ಶೆಟ್ಟಿ, ಜರ್ಮನಿಯ ಮಾರ್ಗಿಟ್‌ ಶ್ನೈಡರ್‌,ಕೆಥೋಲಿಕ್‌ ಸಭೆ ಮಂಗಳೂರು ಪ್ರದೇಶ್‌ನ ಮಾಜಿ ಅಧ್ಯಕ್ಷ ಎಲ್‌.ಜೆ ಫೆರ್ನಾಂಡಿಸ್‌, ಪಾಂಬೂರು ಚರ್ಚ್‌ನ ಧರ್ಮಗುರು ರೆ|ಫಾ| ಹೆನ್ರಿ ಮಸ್ಕರೇನಸ್‌,ಮಾನಸ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ|ಎಡ್ವರ್ಡ್‌ ಲೋಬೋ,ಮಾಜಿ ಅಧ್ಯಕ್ಷೆ ರೆಮೇಡಿಯಾ ಡಿಸೋಜಾ, ಕೆಥೋಲಿಕ್‌ ಸಭೆ ಮಂಗಳೂರು ಪ್ರದೇಶ್‌ನ ಅಧ್ಯಕ್ಷ ಸ್ಟಾನಿ ಲೋಬೋ, ಕೆಥೋಲಿಕ್‌ ಸಭೆ ಉಡುಪಿ ಪ್ರದೇಶ್‌ನ ಅಧ್ಯಕ್ಷೆ ಮೇರಿ ಡಿಸೋಜಾ, ಮಾನಸ ಸಂಸ್ಥೆಯ ಕೋಶಾಧಿಕಾರಿ ವಲೇರಿಯನ್‌ ಫೆರ್ನಾಂಡಿಸ್‌, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವನಿತಾ ಶೆಟ್ಟಿಗಾರ್‌ ವೇದಿಕೆಯಲ್ಲಿದ್ದರು. ಮಾನಸ ಸಂಸ್ಥೆಯ ಅಧ್ಯಕ್ಷ ಹೆನ್ರಿ ಮೆನೇಜಸ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಸಿ| ಅನ್ಸಿಲ್ಲಾ ಫೆರ್ನಾಂಡಿಸ್‌ ವರದಿ ವಾಚಿಸಿದರು.

ಮಾನಸ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕೆಥೋಲಿಕ್‌ಸಭೆ ಉಡುಪಿ, ಮಂಗಳೂರ್‌ನ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕ ವೃಂದ, ಹೆತ್ತವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಜತ ಮಹೋತ್ಸವ ಸಮಿತಿಯ ಸಂಚಾಲಕ ಎಲ್ರಾಯ್‌ ಕಿರಣ್‌ ಕ್ರಾಸ್ತಾ ಸ್ವಾಗತಿಸಿದರು. ಶಿಕ್ಷಕಿಯರಾದ ರೀನಾ ಡಿಸೋಜಾ, ಪ್ರಭಾ ಮತ್ತು ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ಕಾರ್ಯದರ್ಶಿ ಜೋಸೆಫ್‌ ನೊರೊನ್ಹಾ ವಂದಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.