ಅಮರಾವತಿ ಸ್ಟೇಷನ್ನಲ್ಲಿ ಗುರುರಾಜ್
Team Udayavani, Nov 27, 2022, 3:00 PM IST
ನಟ ಜಗ್ಗೇಶ್ ಪುತ್ರ ಗುರುರಾಜ್ ನಾಯಕರಾಗಿ ನಟಿಸುತ್ತಿರುವ “ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.
ಮೊದಲ ದೃಶ್ಯಕ್ಕೆ ನಟ ಜಗ್ಗೇಶ್ ಅವರು ಕ್ಲಾಪ್ ಮಾಡಿ ಚಿತ್ರರಂಗಕ್ಕೆ ಶುಭ ಕೋರಿದರು. ಅರಸೀಕೆರೆಯ ಪುನೀತ್ ಈ ಚಿತ್ರದ ನಿರ್ದೇಶಕರು. ಅಂಜನರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರೇಖಾಶ್ರೀ ಚಿತ್ರದ ನಾಯಕಿ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಚಿತ್ರವಾಗಿದ್ದು, ಪೊಲೀಸ್ ಸ್ಟೇಷನ್ ಸುತ್ತಮುತ್ತ ನಡೆಯುವ ಘಟನೆಗಳು ಚಿತ್ರದ ಪ್ರಮುಖ ಆಂಶಗಳಾಗಿವೆ.
ನಾಯಕ ಗುರುರಾಜ್ ಮಾತನಾಡುತ್ತಾ, “ಪುನೀತ್ ಕಳೆದ 3 ವರ್ಷಗಳಿಂದ ಈ ಕಥೆ ರೆಡಿ ಮಾಡಿಕೊಂಡಿದ್ದಾರೆ. ಒಂದು ಇಂಟರೆಸ್ಟಿಂಗ್ ಕಥೆ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದಾರೆ. ಈ ಕಥೆ ಕೇಳಿದ ತಕ್ಷಣ ಮಾಡಬೇಕು ಎನಿಸಿತು’ ಎಂದು ಹೇಳಿದರು.
ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಜನೆ ಚಿತ್ರ ತಂಡಕ್ಕಿದೆ. ನಟಿ ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ಉಳಿದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ