ಕೆಸಿಆರ್ ಅಧಿಕಾರಕ್ಕೆ ಬಂದ್ರೆ, ಐಟಿ ದಾಳಿಯೇ ನಡೆಯಲ್ಲ!
Team Udayavani, Nov 28, 2022, 6:30 AM IST
ಹೈದರಾಬಾದ್: 2024ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದ್ದು, ತದನಂತರ ಆದಾಯ ತೆರಿಗೆ ಇಲಾಖೆ ದಾಳಿಗಳೇ ನಡೆಯುವುದಿಲ್ಲ. ಹೀಗೆಂದು ಹೇಳಿದ್ದು ತೆಲಂಗಾಣ ಕಾರ್ಮಿಕ ಸಚಿವ ಮಲ್ಲ ರೆಡ್ಡಿ.
ಸಿದ್ದಿಪೇಟ್ನಲ್ಲಿ ಭಾನುವಾರ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, “2024ರಲ್ಲಿ ಕೆಸಿಆರ್ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ. ಆಗ, ದೇಶಾದ್ಯಂತ ಆದಾಯ ತೆರಿಗೆ ಅಧಿಕಾರಿಗಳು ವಿಶ್ರಾಂತಿ ಪಡೆಯಬಹುದು. ಯಾವುದೇ ಐಟಿ ದಾಳಿಗಳು ನಡೆಯುವುದಿಲ್ಲ. ಎಲ್ಲರಿಗೂ ಅವರಿಗೆಷ್ಟು ಸಾಧ್ಯವೋ ಅಷ್ಟು ಆದಾಯ ಗಳಿಸಬಹುದು. ಕೆಸಿಆರ್ ಅವರು ಎಂಥ ಆಡಳಿತ ಜಾರಿಗೆ ತರುತ್ತಾರೆಂದರೆ, ಜನರು ಸ್ವಯಂಪ್ರೇರಿತರಾಗಿ ತೆರಿಗೆ ಪಾವತಿಸುತ್ತಾರೆ’ ಎಂದಿದ್ದಾರೆ. ಇತ್ತೀಚೆಗಷ್ಟೇ ಐಟಿ ಇಲಾಖೆಯು ಮಲ್ಲರೆಡ್ಡಿ ಅವರ ಮನೆ ಮೇಲೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು