ಲೇಡಿಗೋಶನ್‌ ಆಸ್ಪತ್ರೆ ಮತ್ತಷ್ಟು ಸುಸಜ್ಜಿತ ! ಸೇರ್ಪಡೆಗೊಳ್ಳಲಿದೆ ಹೈರಿಸ್ಕ್ ಪ್ರೆಗ್ನೆನ್ಸಿ ವಾರ್ಡ್‌


Team Udayavani, Nov 28, 2022, 8:05 AM IST

ಲೇಡಿಗೋಶನ್‌ ಆಸ್ಪತ್ರೆ ಮತ್ತಷ್ಟು ಸುಸಜ್ಜಿತ ! ಸೇರ್ಪಡೆಗೊಳ್ಳಲಿದೆ ಹೈರಿಸ್ಕ್ ಪ್ರೆಗ್ನೆನ್ಸಿ ವಾರ್ಡ್‌

ಮಂಗಳೂರು: ಕೆಲವು ವರ್ಷಗಳ ಹಿಂದಿನವರೆಗೂ ಮೂಲಸೌಕರ್ಯದಿಂದ ವಂಚಿತವಾಗಿದ್ದ ಮಂಗಳೂರಿನ ಲೇಡಿಗೋಶ‌ನ್‌ ಸರಕಾರಿ ಆಸ್ಪತ್ರೆ ಇಂದು ಖಾಸಗಿ ಆಸ್ಪತ್ರೆಗಳಿಗೆ ಸಮನಾಗಿ ಸುಸುಜ್ಜಿತವಾಗಿ ಅಭಿವೃದ್ಧಿಯಾಗಿದೆ. ಇದೀಗ ನೂತನವಾಗಿ ಹೈರಿಸ್ಕ್ ಪ್ರೆಗ್ನೆನ್ಸಿ ವಾರ್ಡ್‌ ಮತ್ತು ಎಂಸಿಎಚ್‌ (ಮೆಟರ್ನಿಟಿ ಆ್ಯಂಡ್‌ ಚೈಲ್ಡ್‌ ಹೆಲ್ತ್‌) ವಿಭಾಗಗಳು ಹೊಸದಾಗಿ ಸೇರ್ಪಡೆಗೊಳ್ಳಲು ಸಿದ್ಧವಾಗಿದೆ.

ಹಳೆ ಲೇಡಿಗೋಶನ್‌ ಕಟ್ಟಡ ಇರುವಾಗ ಐಸಿಯು ತೆರೆಯುವ ಯೋಜನೆ ಇರಲಿಲ್ಲ. ಕಟ್ಟಡ, ಜಾಗವೂ ಇರಲಿಲ್ಲ. ಆವಶ್ಯಕತೆ ಇದ್ದಲ್ಲಿ ವೆನ್ಲಾಕ್‌ ಅಥವಾ ಇತರ ಆಸ್ಪತ್ರೆಗಳಿಗೆ ಕಳುಹಿ ಸಲಾಗುತ್ತಿತ್ತು. ಹೊಸದಾಗಿ ಎಂಆರ್‌ಪಿಎಲ್‌ ಕಟ್ಟಡ ನಿರ್ಮಾಣವಾದ ಬಳಿಕ ವೆಂಟಿಲೇಟರ್‌ ಸಹಿತ 4 ಐಸಿಯು ಬೆಡ್‌ ಆರಂಭಿಸಲಾಗಿತ್ತು. ಇದೀಗ ಹೈರಿಸ್ಕ್ ವಾರ್ಡ್‌ ನಿರ್ಮಾಣವಾಗಿ ದ್ದರಿಂದ ಆಧುನಿಕ ಉಪಕರಣಗಳನ್ನು ಒಳಗೊಂಡ ಐಸಿಯು ವಾರ್ಡ್‌ ವಿಶಾಲವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್‌ ವಿಭಾಗದಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಿದೆ.

ವಾರ್ಡ್‌ನಲ್ಲಿ ಏನೇನಿದೆ ?
ಹೈರಿಸ್ಕ್ ಪ್ರಗ್ನೆನ್ಸಿ ವಾರ್ಡ್‌ನಲ್ಲಿ 4 ಐಸಿಯು ಬೆಡ್‌ಗಳು, 7 ಹೈ ಡಿಪೆಂಡೆನ್ಸಿ ಯುನಿಟ್‌, ಅದಕ್ಕೆ ಬೇಕಾಗಿರುವ ಹೈಡ್ರಾಲಿಕ್‌ ಕಾಟ್‌, 11 ಮಾನಿಟರ್‌, ತಾಯಿಯ ಗರ್ಭಕೋಶ ಮತ್ತು ಮಗುವಿನ ಸ್ಥಿತಿಗತಿಗಳನ್ನು ಪತ್ತೆ ಹಚ್ಚುವ ಕಂಪ್ಯೂಟರೈಸ್ಡ್ ಸಿಸ್ಟಮ್‌ 11, ಆಟೋಕ್ಲೇವ್‌ ಯಂತ್ರಗಳು, 15 ಕಂಪ್ಯೂಟರ್‌ಗಳನ್ನು ಸಿಸ್ಟಮ್‌ ಒಳಗೊಂಡಿದೆ. ರೋಟರಿ ಸಂಸ್ಥೆಯಿಂದ 48 ಲಕ್ಷ ರೂ. ವೆಚ್ಚದಲ್ಲಿ ಇವುಗಳನ್ನು ಒದಗಿಸಲಾಗಿದೆ.

ಎಂಸಿಎಚ್‌ ವಿಭಾಗ
ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಎಂಸಿಎಚ್‌ ವಿಭಾಗವನ್ನು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 60 ಬೆಡ್‌ಗಳ ಸಾಮರ್ಥ್ಯ ಹೊಂದಿದೆ. ನೆಲ, ಮೊದಲ ಮಹಡಿಯಲ್ಲಿ ವಾರ್ಡ್‌ಗಳು, ಓಪಿಡಿ, ಶಸ್ತ್ರಚಿಕಿತ್ಸಾ ಕೊಠಡಿ, ಕನ್ಸಲ್ಟೆನ್ಸಿ ವಿಭಾಗಗಳಿವೆ. ಸ್ಮಾರ್ಟ್‌ ಸಿಟಿಯಿಂದ ಎರಡನೇ ಮಹಡಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಅಧೀಕ್ಷಕರ ಕಚೇರಿ ಹಾಗೂ ಸಖೀ ಕೇಂದ್ರವನ್ನೂ ಕಟ್ಟಡದಲ್ಲಿ ತೆರೆಯಲಾಗಿದೆ.

ಡಯಾಲಿಸಿಸ್‌ ಘಟಕ ಆರಂಭಿಸುವ ಉದ್ದೇಶ
ಪ್ರಸೂತಿ ರೋಗ ಅಥವಾ ಕೆಲವು ಕ್ಲಿಷ್ಟಕರ ಪ್ರಕರಣಗಳು ಬಂದಾಗ ಕಿಡ್ನಿಗೆ ಹಾನಿಯಾಗುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ ಡಯಾಲಿಸಿಸ್‌ ಯೂನಿಟ್‌ ಆರಂಭಿಸಿ ಲೇಡಿಗೋಶನ್‌ನಲ್ಲೇ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಸಂಬಂದಿಸಿದ ಉಪಕರಣಗಳು ಇನ್ನಷ್ಟೇ ಬರಬೇಕಾಗಿವೆ. ಸದ್ಯ ಇಂತಹ ಪ್ರಕರಣಗಳನ್ನು ವೆನ್ಲಾಕ್‌ ಡಯಾಲಿಸಿಸ್‌ ಸೆಂಟರ್‌ಗೆ ಕಳು ಹಿ ಸ ಲಾಗುತ್ತಿದೆ. ವೆಂಟಿಲೇಟರ್‌ನಲ್ಲಿ ಇರುವ ರೋಗಿಗಳನ್ನು ಆ ರೀತಿ ಸ್ಥಳಾಂತ ರಿ ಸುವುದು ಕೂಡ ಸರಿಯಲ್ಲ ಎನ್ನುತ್ತಾರೆ ವೈದ್ಯಕೀಯ ಅಧೀಕ್ಷಕ ಡಾ| ದುರ್ಗಾ ಪ್ರಸಾದ್‌.

ಎಂಆರ್‌ಡಿ – ಗ್ರಂಥಾಲಯ
ಪ್ರಸ್ತುತ ವೈದ್ಯಕೀಯ ಅಧೀಕ್ಷಕರ ಕಚೇರಿ ಇರುವ ಕಟ್ಟಡವನ್ನು ಎಂಆರ್‌ಡಿ (ವೈದ್ಯಕೀಯ ದಾಖಲೆಗಳ ವಿಭಾಗ) ಮತ್ತು ವೈದ್ಯಕೀಯಕ್ಕೆ ಸಂಬಂಧಿಸಿದ ಪುಸ್ತಕಗಳ ಗ್ರಂಥಾಲಯವಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಇದರ ಜತೆಗೆ ಹೈರಿಸ್ಕ್ ವಾರ್ಡ್‌ನ ಮೇಲ್ಭಾಗದಲ್ಲಿ ರೋಗಿಗಳೊಂದಿಗೆ ಬರುವವರಿಗಾಗಿ ಕುಳಿತುಕೊಳ್ಳಲು ಕುರ್ಚಿ, ಕುಡಿಯುವ ನೀರು, ಶೌಚಾಲಯ, ಬಾತ್‌ರೂಮ್‌ ಮೊದಲಾದ ಸೌಲಭ್ಯಗಳನ್ನೊಳಗೊಂಡ ಕೊಠಡಿ ನಿರ್ಮಿಸಲಾಗಿದೆ.

ಲೇಡಿಗೋಶನ್‌ ಆಸ್ಪತ್ರೆ ಮತ್ತಷ್ಟು ಸುಸಜ್ಜಿತಗೊಂಡಿದ್ದು, ಹೆಚ್ಚಿನ ಸೌಕರ್ಯಗಳನ್ನು ಪಡೆದುಕೊಂಡಿದೆ. ಹೈರಿಸ್ಕ್ ವಾರ್ಡ್‌ ಮತ್ತು ಎಂಸಿಎಚ್‌ ವಿಭಾಗ ನಿರ್ಮಾಣ ಪೂರ್ಣಗೊಂಡಿದ್ದು, ಡಿಸೆಂಬರ್‌ ತಿಂಗಳಲ್ಲಿ ಉದ್ಘಾಟನೆಗೆ ಉದ್ದೇಶಿಸಲಾಗಿದೆ. ಸದ್ಯ ಪರಿಕರಗಳನ್ನು ಜೋಡಿಸುವ ಕೆಲಸ ನಡೆಯುತ್ತಿದೆ. ಸರಕಾರದ ವತಿಯಿಂದಲೂ ಸುಮಾರು 40 ಲಕ್ಷ ರೂ. ವೆಚ್ಚದ ಪರಿಕರ-ಪೀಠೊಪಕರಣಗಳು ಬಂದಿವೆ.
-ಡಾ| ದುರ್ಗಾ ಪ್ರಸಾದ್‌
ಲೇಡಿಗೋಶನ್‌ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.