ವಿಳಿಂಜಂ ಪೊಲೀಸ್ ಠಾಣೆಗೆ 3 ಸಾವಿರ ಮಂದಿಯಿಂದ ಮುತ್ತಿಗೆ
ಕೇರಳದಲ್ಲಿ ತೀವ್ರಗೊಂಡ ಅದಾನಿ ಪೋರ್ಟ್ ವಿರುದ್ಧದ ಪ್ರತಿಭಟನೆ
Team Udayavani, Nov 29, 2022, 7:30 AM IST
ತಿರುವನಂತಪುರ: ಕೇರಳದಲ್ಲಿ ನಿರ್ಮಾಣ ಹಂತದಲ್ಲಿರುವ ಅದಾನಿ ಬಂದರು ವಿರುದ್ಧದ ಸ್ಥಳೀಯರ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ.
ಭಾನುವಾರ ಸಂಜೆ ಸುಮಾರು 3 ಸಾವಿರದಷ್ಟು ಮಂದಿ ವಿಳಿಂಜಂ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಠಾಣೆಯಲ್ಲಿ ದೊಡ್ಡಮಟ್ಟದಲ್ಲಿ ದಾಂದಲೆಯನ್ನೂ ನಡೆಸಲಾಗಿದ್ದು, ಘಟನೆಯಲ್ಲಿ 40 ಪೊಲೀಸ್ ಸಿಬ್ಬಂದಿ ಮತ್ತು ಹಲವು ಸ್ಥಳೀಯರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಮಹಿಳೆಯರು, ಮಕ್ಕಳು ಸೇರಿದಂತೆ 3 ಸಾವಿರ ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಾನೂನುಬಾಹಿರವಾಗಿ ಗುಂಪು ಸೇರಿರುವುದು, ಗಲಭೆ, ಕ್ರಿಮಿನಲ್ ಸಂಚು ಆರೋಪಗಳನ್ನು ಅವರ ವಿರುದ್ಧ ಹೊರಿಸಲಾಗಿದೆ.
ಆಗಿದ್ದೇನು?
ಅದಾನಿ ಪೋರ್ಟ್ ವಿರುದ್ಧದ ಪ್ರತಿಭಟನೆ ಹಿನ್ನೆಲೆಯಲ್ಲಿ ಶನಿವಾರ ನಾಲ್ವರನ್ನು ಬಂಧಿಸಲಾಗಿತ್ತು. ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಭಾನುವಾರ ಸಂಜೆ ಕಬ್ಬಿಣದ ರಾಡು, ಕೋಲುಗಳು, ಕಲ್ಲು, ಇಟ್ಟಿಗೆಗಳನ್ನು ಹೊತ್ತುಕೊಂಡು ಪೊಲೀಸ್ ಠಾಣೆಯನ್ನು ಸುತ್ತುವರಿಯಿತು. ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಠಾಣೆಗೆ ಬೆಂಕಿ ಹಚ್ಚುವುದಾಗಿಯೂ ಬೆದರಿಕೆ ಹಾಕಲಾಯಿತು. 5 ಪೊಲೀಸ್ ವಾಹನಗಳಿಗೆ ಹಾನಿ ಮಾಡಿ, ಠಾಣೆಯೊಳಗಿದ್ದ ಕಡತಗಳನ್ನೆಲ್ಲ ನಾಶಪಡಿಸಿತು ಎಂದು ಎಫ್ಐಆರ್ನಲ್ಲಿಉಲ್ಲೇಖಿಸಲಾಗಿದೆ.
ಇನ್ನು, ಪೊಲೀಸ್ ಠಾಣೆ ಮೇಲಿನ ದಾಳಿಯನ್ನು ಖಂಡಿಸಿರುವ ಕೇರಳ ಸರ್ಕಾರ “ಇದು ಸ್ವೀಕಾರಾರ್ಹವಲ್ಲ’ ಎಂದು ಹೇಳಿದೆ. ಇನ್ನು, ಲ್ಯಾಟಿನ್ ಕ್ಯಾಥೊಲಿಕ್ ಚರ್ಚ್, “ಈ ದಾಳಿಯ ಹಿಂದೆ ಬಾಹ್ಯ ಶಕ್ತಿಗಳ ಕೈವಾಡವಿದೆ. ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕು’ ಎಂದು ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ