ಇಂದು ಷಷ್ಠಿ: ಕುಡುಪುವಿನಲ್ಲಿ ಬ್ರಹ್ಮರಥೋತ್ಸವ


Team Udayavani, Nov 29, 2022, 9:42 AM IST

4

ಮಹಾನಗರ: ಮಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ವಿವಿಧ ದೇವಾಲಯದಲ್ಲಿ ಪಂಚಮಿ ಉತ್ಸವ ಸೋಮವಾರ ನಡೆಯಿತು. ನ. 29ರಂದು ಷಷ್ಠಿ ಮಹೋತ್ಸವ, ರಥೋತ್ಸವ ನಡೆಯಲಿದೆ.

ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಮಾಣೂರು ಶ್ರೀ ಅನಂತಪದ್ಮನಾಭ ದೇವಸ್ಥಾನ, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕಂಕನಾಡಿ ಬಜಾಲ್‌ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಿಲ್ಪಾಡಿ ಕುಮಾರಮಂಗಿಲ ಶ್ರೀ ಸುಬ್ರಹ್ಮಣ್ಯ ದೇವಾಲಯ, ಮೂಡುಬಿದಿರೆ ಕಡಂದಲೆ ಶ್ರೀ ಸುಬ್ರಹಣ್ಯ ಸ್ವಾಮಿ ದೇಗುಲ, ಮುಂಡೋಳಿ ಶ್ರೀ ನಾಗಬ್ರಹ್ಮ ರಕ್ತೇಶ್ವರೀ ಕ್ಷೇತ್ರ ಸಹಿತ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಚಂಪಾಷಷ್ಠಿ ನಡೆಯಲಿದೆ.

ಕುಡುಪು: ಪಂಚಮಿ ಮಹೋತ್ಸವ

ಕುಡುಪು ಶ್ರೀ ಅನಂತಪದ್ಮನಾಭ ದೇಗುಲದಲ್ಲಿ ಸೋಮವಾರ ಪಂಚಮಿ ಅಂಗವಾಗಿ ಬೆಳಗ್ಗೆ ಅಂಗಪ್ರದಕ್ಷಿಣೆ, ಮಹಾಪೂಜೆ, ಅಶ್ವವಾಹನದೊಂದಿಗೆ ರಾತ್ರಿ ಕಟ್ಟೆಪೂಜೆಗಳು, ತೆಪ್ಪೋತ್ಸವ, ಎರಡನೇ ಬಲಿ, ಚಂದ್ರಮಂಡಲೋತ್ಸವ, ಪಾಲಕಿ ಉತ್ಸವ ನಡೆಯಿತು.

ಕ್ಷೇತ್ರದ ತಂತ್ರಿಗಳಾದ ನರಸಿಂಹ ತಂತ್ರಿ, ಕೃಷ್ಣರಾಜ ತಂತ್ರಿ, ಅರವಿಂದ್‌ ತಂತ್ರಿ, ಪವಿತ್ರಪಾಣಿ ಬಾಲಕೃಷ್ಣ ಭಟ್‌, ಮೊಕ್ತೇಸರರಾದ ಭಾಸ್ಕರ್‌ ಕೆ. ಮನೋಹರ್‌ ಭಟ್‌, ವಾಸುದೇವ ರಾವ್‌, ಉದಯ ಕುಮಾರ್‌ ಕುಡುಪು, ಸುಜನ್‌ದಾಸ್‌, ರಾಘವೇಂದ್ರ ಭಟ್‌, ಸೋಮಶೇಖರ ಭಟ್‌, ಉದಯ ಕುಮಾರ್‌ ಭಟ್‌, ಅಧಿಕಾರಿಗಳಾದ ಪ್ರವೀಣ್‌, ಅರವಿಂದ ಸುತ್ತುಗುಂಡಿ ಉಪಸ್ಥಿತರಿದ್ದರು.

ಇಂದು ಷಷ್ಠಿ ಉತ್ಸವ

ಕುಡುಪು ದೇವಸ್ಥಾನದಲ್ಲಿ ನ. 29ರಂದು ಪ್ರಾತಃಕಾಲ 4ರಿಂದ ರಥಕಲಶ, ಅಂಗಪ್ರದಕ್ಷಿಣೆ, ಬೆಳಗ್ಗೆ 8ರಿಂದ ಪಂಚಾಮೃತ ಅಭಿಷೇಕ, ನವ ಕಲಶಾಭಿಷೇಕ,  ಕಲ್ಪೋಕ್ತ ಪೂಜೆ, ಸಹಸ್ರನಾಮಾರ್ಚನೆ, ವಿಶೇಷ ನೈವೇದ್ಯ ಸಮರ್ಪಣೆ, ಬೆಳಗ್ಗೆ 11ಕ್ಕೆ ಷಷ್ಠಿಯ ಮಹಾಪೂಜೆ, 11.30ರಿಂದ ಮಹಾ ಅನ್ನಸಂತರ್ಪಣೆ, ಮಧ್ಯಾಹ್ನ 12.30ಕ್ಕೆ ರಥಾರೋಹಣ, ಮಧ್ಯಾಹ್ನ 1ಕ್ಕೆ ವೈಭವದ ಷಷ್ಠಿಯ ಬ್ರಹ್ಮರಥೋತ್ಸವ ನೆರವೇರಲಿದೆ. ರಾತ್ರಿ 8.30ರಿಂದ ಮಹಾಪೂಜೆ ನಡೆಯಲಿದೆ.

ನ. 30ರಂದು ಬೆಳಗ್ಗೆ 7ಕ್ಕೆ ಅತೀ ವಿಶಿಷ್ಟವಾದ ಜೋಡು ದೇವರ ಬಲಿ ಉತ್ಸವ, ಚಂದ್ರ ಮಂಡಲ ಉತ್ಸವ, ಪಾಲಕಿ ಉತ್ಸವದೊಂದಿಗೆ ಪ್ರಸಾದ ವಿತರಣೆ ನಡೆಯಲಿದೆ.

ಕಾಸರಗೋಡಿನಲ್ಲಿ ಷಷ್ಠಿ ಸಂಭ್ರಮ

ಕಾಸರಗೋಡು: ಜಿಲ್ಲೆಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ನ. 29ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಷಷ್ಠಿ ಮಹೋತ್ಸವ ನಡೆ ಯಲಿ ದೆ. ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ನೆಲ್ಲಿಕುಂಜೆಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಅಡ್ಕತ್ತಬೈಲ್‌ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೇಳ ಕುಮಾರ ಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನ, ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನ, ವರ್ಕಾಡಿ ಶ್ರೀ ಕಾವೀಃ ಸುಬ್ರಹ್ಮಣ್ಯ ದೇಗುಲ, ಕೂಡ್ಲು ಬಾದಾರದ ವೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲ ಮೊದಲಾದೆಡೆಗಳಲ್ಲಿ ವಿವಿಧ ಅಭಿಷೇಕಗಳು, ಮಹಾಪೂಜೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ಷಷ್ಠಿ ಮಹೋತ್ಸವ ಜರಗಲಿದೆ.

ಟಾಪ್ ನ್ಯೂಸ್

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Hemant

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.