ಕಲುಷಿತ ನೀರು ಸೇವಿಸಿ ಬಚನಾಳ ಗ್ರಾಮದಲ್ಲಿ ವಾಂತಿ ಬೇಧಿ: ಇಪ್ಪತ್ತಕ್ಕೂ ಹೆಚ್ಚು ಜನ ಅಸ್ವಸ್ಥ


Team Udayavani, Nov 29, 2022, 6:45 PM IST

ಕಲುಷಿತ ನೀರು ಸೇವಿಸಿ ಬಚನಾಳ ಗ್ರಾಮದಲ್ಲಿ ವಾಂತಿ ಬೇಧಿ: ಇಪ್ಪತ್ತಕ್ಕೂ ಹೆಚ್ಚು ಜನ ಅಸ್ವಸ್ಥ

ದೋಟಿಹಾಳ: ಕಳೆದ ನಾಲ್ಕೈದು ದಿನಗಳಿಂದ ಕಲುಷಿತ ನೀರು ಸೇವಿಸಿ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ.

ಮೇಣೆದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಬಚನಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಸದ್ಯ ಈ ಗ್ರಾಮದ ಸುಮಾರು 20ಕ್ಕೂ ಹೆಚ್ಚು ರೋಗಿಗಳು ತಾವರೇಗರಾ ಮತ್ತು ಗಂಗಾವತಿ ಆಸ್ಪತ್ರೆಗಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.

ಈ ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿದ್ದು, 2ಸಾವಿರ ಜನ ವಾಸಿಸುತಿದ್ದಾರೆ. ಗ್ರಾಮದ ಪಕ್ಕದ ಹಳ್ಳದ ದಡದಲ್ಲಿ ಕೊರೆಯಲಾಗಿರುವ ಕೊಳವೆಬಾವಿಯ ನೀರು ಸೇವನೆಯಿಂದ ಈ ವಾಂತಿ ಭೇದಿಗೆ ಕಾರಣವಾಗಿರಬಹುದು ಎಂದು ಗ್ರಾಮಸ್ಥರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಈ ಗ್ರಾಮದಲ್ಲಿ ವಾಂತಿಭೇದಿಯ ವಿಷಯ ತಿಳಿದ ತಾಲೂಕು ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಸೇರಿದಂತೆ ಶಾಸಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಸ್ವಸ್ಥತೆಗೆ ಒಳಗಾದವರ ಆರೋಗ್ಯ ವಿಚಾರಿಸಿದ್ದಾರೆ ಹಾಗೂ ಗ್ರಾಮಸ್ಥರು ಸೇವಿಸುವ ನೀರನ್ನು ಆರೋಗ್ಯ ಇಲಾಖೆಯವರು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಶೇ.75ರಷ್ಟು ಪ್ಲೋರೈಡ್ ಯುಕ್ತ ನೀರು ಇರುವದು ಕಂಡುಬಂದಿದೆ. ಹೀಗಾಗಿ ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರು ಅವರು ಈ ನೀರು ಕುಡಿಯಲು ನೀರು ಯೋಗ್ಯವಿಲ್ಲ ಸ್ಪಷ್ಟಪಡಿಸಿದ್ದಾರೆ.

ಗ್ರಾಮದಲ್ಲಿ ಇಂತಹ ಸ್ಥಿತಿಯಲ್ಲಿ ಆರೋಗ್ಯ ಇಲಾಖೆಯವರು ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಶಾಸಕರು ಇಂದು ಗ್ರಾಮಕ್ಕೆ ಭೇಟಿ ನೀಡಿದ ವೇಳೆ ನಾಳೆ ಗ್ರಾಮದಲ್ಲಿ ಒಂದು ತಾತ್ಕಾಲಿಕ ಚಿಕಿತ್ಸೆ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

ಹೀಗಾಗಿ ಗ್ರಾಮದ ಒಂದು ಸಮುದಾಯ ಭವನವನ್ನು ಸ್ವಚ್ಛತೆ ಮಾಡಲಾಗಿದೆ ಮತ್ತು ಸದ್ಯ ಗ್ರಾಮ ಪಂಚಾಯಿತಿಯರು ಕೊಳವೆಬಾವಿಯ ನೀರನ್ನು ಸ್ಥಗಿತ ಮಾಡಿ ಗ್ರಾಮಕ್ಕೆ ಜಲಜೀವನ ಮಿಷನ್ ಯೋಜನೆ ನದಿ ನೀರನ್ನು ಪೂರೈಸಲಾಗುತ್ತಿದೆ ಎಂದು ಪಿಡಿಒ ಹನುಮಂತರಾಯ ತಿಳಿಸಿದರು.

ಈ ಗ್ರಾಮದಲ್ಲಿ ಪ್ರತಿದಿನ 3-4 ವಾಂತಿ ಭೇದಿ ಪ್ರಕರಣಗಳು ಪತ್ತೆಯಾಗುತಿದ್ದು, ಹಿರೇಮನ್ನಾಪೂರ, ತಾವರಗೇರಾ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ ಅಲ್ಲಿ ರೋಗಿಗಳಿಗೆ ವೈದ್ಯರು ಸರಿಯಾದ ರೀತಿ ಸ್ಪಂದನೆ ನೀಡದ ಕಾರಣ ಗ್ರಾಮಸ್ಥರು ಗಂಗಾವತಿ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದ್ದೆ. ಆಸ್ಪತ್ರೆಗೆ ದಾಖಲಾದ ಒಬ್ಬೊಬ್ಬರು 20-30 ಸಾವಿರ ರೂಪಾಯಿ ಹಣ ಖರ್ಚುಗುತ್ತಿದ್ದು. ಬಡವರಿಗೆ ತುಂಬಾ ತೊಂದರೆಯಾಗುತ್ತಿದೆ.ಈ ಕುರಿತು ಡಿಹೆಚ್‌ಓ ಅವರ ಗಮನಕ್ಕೆ ತರಲಾಗಿದೆ ಎಂದು ಗ್ರಾಪಂ ಅಧ್ಯಕ್ಷ, ಸದಸ್ಯರುಗಳು ಹಾಗೂ ಗ್ರಾಮಸ್ಥರು ತಿಳಿಸಿದರು.

ಈ ವೇಳೆ ಗ್ರಾಮ ಪಂಚಾಯಿತಿ ಪಿಡಿಒ ಹನುಮಂತರಾಯ, ಗ್ರಾಪಂ ಅಧ್ಯಕ್ಷ ದಾವಲಭಾಷ ಸಾಬ್, ಗ್ರಾಪಂ ಸದಸ್ಯರು, ಮಾಜಿ ಅಧ್ಯಕ್ಷ ಶೇಖರಪ್ಪ ಸೂಳಿಕೇರಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಚನಾಳ ಗ್ರಾಮದಲ್ಲಿ ವಾಂತಿಭೇದಿ ಪ್ರಕರಣ ಗ್ರಾಮಸ್ಥರಿಂದ ತಿಳಿದು ಬಂದ ಕಾರಣ ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಗ್ರಾಮದ ಜನರು ಭಯಪಡುವ ಅಗತ್ಯ ಇಲ್ಲ. ಆರೋಗ್ಯ ಇಲಾಲೆ ಅಧಿಕಾರಿಗಳಿಗೆ ಗ್ರಾಮಸ್ಥರಿಗೆ ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದ್ದೇನೆ.- ಅಮರೇಗೌಡ ಪಾಟೀಲ್ ಬಯ್ಯಾಪೂರ,ಶಾಸಕರು ಕುಷ್ಟಗಿ.

ಬಚನಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ 1-2 ವಾಂತಿಭೇದಿ ಪ್ರಕರಣಗಳು ಕಂಡು ಬಂದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಯ ನೀರು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಶೇ.75ರಷ್ಟು ಪ್ಲೋರೈಡ್ ಯುಕ್ತ ನೀರು ಇರುವದು ಕಂಡು ಬಂದ್ದಿದೆ. ಅದನ್ನು ಸ್ಥಗಿತ ಮಾಡಿ ಬೇರೆ ನೀರು ಸರಬರಾಜು ಮಾಡಲು ಗ್ರಾಪಂನವರಿಗೆ ತಿಳಿಸಿಲಾಗಿದೆ ಹಾಗೂ ಆರೋಗ್ಯ ಸಿಬ್ಬಂದಿಗಳು ಅಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. –ಡಾ|| ಆನಂದ ಗೋಟುರು,ತಾಲೂಕು ವೈದ್ಯಾಧಿಕಾರಿ ಕುಷ್ಟಗಿ.

 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.