ಕೋವಿಡ್ ಲಸಿಕೆ; ದುಷ್ಪರಿಣಾಮಗಳಿಗೆ ಸರ್ಕಾರ ಹೊಣೆ ಅಲ್ಲ: ಸುಪ್ರೀಂ ಕೋರ್ಟ್ಗೆ ಕೇಂದ್ರ
Team Udayavani, Nov 29, 2022, 9:30 PM IST
ನವದೆಹಲಿ: ಕೊರೊನಾ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆ ಮಾಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸಲ್ಲಿರುವ ಅಫಿಡೆವಿಟ್ನಲ್ಲಿ ಹೇಳಿದೆ.
ಒಂದು ವೇಳೆ ಲಸಿಕೆ ನೀಡಿದ ನಂತರ ವ್ಯಕ್ತಿ ಮೃತಪಟ್ಟರೆ, ಅಂತಹ ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಅರ್ಜಿದಾರರು ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಬಹುದಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಕೊರೊನಾ ಲಸಿಕೆ ನೀಡಿದ ನಂತರ ಇಬ್ಬರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಪೋಷಕರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡೆವಿಟ್ ಸಲ್ಲಿಸಿದೆ.