ಕೋಳಿ ಕೂಗಿನಿಂದ ನಿದ್ದೆ ಹಾಳಾಗ್ತಿದೆ…ನೆರೆಮನೆಯಾಕೆ ವಿರುದ್ಧ ದೂರು ನೀಡಿದ ವೈದ್ಯ!
ಈ ವಿಚಾರದಲ್ಲಿ ಎರಡೂ ಕಡೆಯವರನ್ನೂ ಕರೆಯಿಸಿ ಮಾತುಕತೆ ನಡೆಸಲು ಪ್ರಯತ್ನಿಸಲಾಗಿದೆ.
Team Udayavani, Nov 30, 2022, 3:11 PM IST
ಇಂದೋರ್:ಸಾಮಾನ್ಯವಾಗಿ ವಾಡಿಕೆಯಂತೆ ಕೋಳಿ ಕೂಗಿದರೆ ಬೆಳಗಾಗುವುದು ಎಂಬ ನಾಣ್ನುಡಿ ಇದೆ. ಇಂದಿಗೂ ಕೆಲವೆಡೆ ಕೋಳಿ ಕೂಗಿನಿಂದಲೇ ಜನರು ಬೆಳಗ್ಗೆ ಎದ್ದೇಳುವ ರೂಢಿ ಇದೆ. ಆದರೆ ಹುಂಜ ಕೂಗುವುದರಿಂದ ತನಗೆ ಕಿರಿಕಿರಿಯಾಗುತ್ತಿದೆ ಎಂದು ಆರೋಪಿಸಿ ವೈದ್ಯರೊಬ್ಬರು ನೆರೆಹೊರೆಯವರ ವಿರುದ್ಧ ದೂರು ನೀಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಇದನ್ನೂ ಓದಿ:ಟೀಂ ಇಂಡಿಯಾಗೆ ಕರುಣೆ ತೋರಿದ ವರುಣ: ಅಂತಿಮ ಪಂದ್ಯವೂ ರದ್ದು; ಕಿವೀಸ್ ಗೆ ಸರಣಿ
ನಗರದ ಪಲಾಸಿಯಾ ಪ್ರದೇಶದಲ್ಲಿ ವಾಸವಾಗಿರುವ ವೈದ್ಯರೊಬ್ಬರು, ನೆರೆಹೊರೆಯವರ ಕೋಳಿ ಕೂಗುವುದರಿಂದ ತಮಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದ್ದು, ಈ ವಿಚಾರದಲ್ಲಿ ಎರಡೂ ಕಡೆಯವರನ್ನೂ ಕರೆಯಿಸಿ ಮಾತುಕತೆ ನಡೆಸಲು ಪ್ರಯತ್ನಿಸಲಾಗಿದೆ. ಒಂದು ವೇಳೆ ಸಮಸ್ಯೆ ಬಗೆಹರಿಯದಿದ್ದರೆ, ನಂತರ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಲಾಸಿಯಾ ಪ್ರದೇಶದ ಗ್ರೇಟರ್ ಕೈಲಾಶ್ ಆಸ್ಪತ್ರೆಯ ಸಮೀಪ ವಾಸವಾಗಿರುವ ಡಾಕ್ಟರ್ ಅಲೋಕ್ ಮೋದಿ ಎಂಬವವರು ಈ ಬಗ್ಗೆ ಲಿಖಿತ ದೂರು ನೀಡಿರುವುದಾಗಿ ಪಲಾಸಿಯಾ ಪೊಲೀಸ್ ಠಾಣಾಧಿಕಾರಿ ಸಂಜಯ್ ಸಿಂಗ್ ಬೈನ್ಸ್ ತಿಳಿಸಿದ್ದಾರೆ.
ತನ್ನ ಮನೆಯ ಸಮೀಪ ಇರುವ ಮಹಿಳೆಯೊಬ್ಬರು ಕೋಳಿ ಮತ್ತು ನಾಯಿಗಳನ್ನು ಸಾಕಿದ್ದು, ಪ್ರತಿದಿನ ಮುಂಜಾನೆ 5ಗಂಟೆಗೆ ಕೂಗುವುದರಿಂದ ನಿದ್ದೆಗೆ ಅಡ್ಡಿಯುಂಟಾಗುತ್ತಿದೆ ಎಂದು ಅಲೋಕ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆಸ್ಪತ್ರೆಯಿಂದ ರಾತ್ರಿ ಮನೆಗೆ ಬರುವಾಗ ತಡವಾಗುತ್ತದೆ. ಹೀಗಾಗಿ ಮುಂಜಾನೆ ಕೋಳಿ ಕೂಗುವುದರಿಂದ ನಿದ್ದೆಗೆ ತೊಂದರೆಯಾಗುತ್ತದೆ ಎಂದು ದೂರಿದ್ದಾರೆ. ಪೊಲೀಸರು ಕೂಡಲೇ ಎರಡು ಕಡೆಯವರನ್ನು ಕರೆಯಿಸಿ ಸಮಸ್ಯೆಯನ್ನು ಬಗೆಹರಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ