ಅಂಜನಾದ್ರಿಯಲ್ಲಿ ಬ್ಯಾನರ್ ಗಳ ತೆರವು: ಗಂಭೀರವಾಗಿ ತೆಗೆದುಕೊಂಡ ಹಿಂಜಾವೇ

ಹನುಮಮಾಲೆ ವಿಸರ್ಜನೆ; ಎಸಿ ಅಧ್ಯಕ್ಷತೆಯಲ್ಲಿ ಸಭೆ

Team Udayavani, Dec 1, 2022, 2:58 PM IST

1-wwqwq

ಗಂಗಾವತಿ: ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆ ಸಂದರ್ಭದಲ್ಲಿ ಅನ್ಯಕೋಮಿನ‌ ಜನರು ವ್ಯಾಪಾರ ವಹಿವಾಟು ನಡೆಸದಂತೆ ಹಿಂದೂಜಾಗರಣಾ ವೇದಿಕೆಯ ಕಾರ್ಯಕರ್ತರು ಅಂಜನಾದ್ರಿಯ ಸುತ್ತ ಹಾಕಿದ್ದ ಬ್ಯಾನರ್ ಬಂಟಿಂಗ್ಸ್ ಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಪುನಃ ಬ್ಯಾನರ್ ಗಳನ್ನು ಜಿಲ್ಲಾಡಳಿತ ನಿಮಯಗಳಡಿಯಲ್ಲಿ ಅಳವಡಿಸಬೇಕು.ಇಲ್ಲದಿದ್ದರೆ ಹನುಮಮಾಲಾ ವಿಸರ್ಜನೆಯ‌ ಸಂದರ್ಭದಲ್ಲಿ ದೇಶದ‌ ವಿವಿಧೆಡೆಯಿಂದ ಆಗಮಿಸುವ ಹನುಮಭಕ್ತರಿಂದ ಪರಿಣಾಮ ಎದುರಿಸಬೇಕಾಗುತ್ತದೆ. ಕೂಡಲೇ ಅಂಜನಾದ್ರಿಯ ಕೆಳಗಿರುವ ಅನ್ಯ ಕೋಮಿನವರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂದು‌ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಮಾತನಾಡಿ, ನಿಯಮ‌11 ರಲ್ಲಿ ಅನ್ಯಕೋಮಿನವರಿಗೆ ವ್ಯಾಪಾರ ವಹಿವಾಟಿಗೆ‌ ಅವಕಾಶ‌ ನೀಡದಂತೆ‌ ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಒತ್ತಾಯಿಸಿದ್ದು, ಅಂಜನಾದ್ರಿಯಲ್ಲಿ ಮುಖ್ಯದ್ವಾರದ ವರೆಗೆ‌ ಮಾತ್ರ ದೇಗುಲದ ಜಾಗವಿದ್ದು ಈ ಜಾಗದಲ್ಲಿ ನಿಯಮಗಳಂತೆ ವ್ಯಾಪಾರ ಮಾಡಲು ಅವಕಾಶ ಕೊಡಲಾಗುತ್ತದೆ. ಈಗ ವ್ಯಾಪಾರಿಗಳು ವ್ಯಾಪಾರ ಮಾಡುವ ಜಾಗ ರಸ್ತೆ ಮತ್ತು ಕೆಲ ಮಾಲೀಕರ ಒಡೆತನದ ಭೂಮಿ ಇದೆ. ಇಲ್ಲಿ ವ್ಯಾಪಾರ ಮಾಡಲು ಯಾರಿಗೆ ಬೇಕಾದರೂ ‌ಭೂಮಿಯ ಮಾಲೀಕರು ಲೀಜ್ ಗೆ ಕೊಡಬಹುದು ಎಂದಿದ್ದಾರೆ.

ಸದ್ಯ ಇಲ್ಲಿರುವ ವ್ಯಾಪಾರಿಗಳನ್ನು ಡಿ.03,04 ಮತ್ತು 05 ರಂದು ವರೆಗೆ ಮೂರ್ತಿ ಎನ್ನುವ ರೈತನ ಗದ್ದೆಯಲ್ಲಿ ವ್ಯಾಪಾರ ಮಾಡಲು ಜಾಗ ನಿಗದಿ ಮಾಡಲಾಗಿದೆ. ಗದ್ದೆಯ‌‌ ಮಾಲೀಕ ಯಾರಿಗೆ ಬೇಕಾದರೂ ವ್ಯಾಪಾರ ಮಾಡಲು ಅವಕಾಶ ಕೊಡಬಹುದಾಗಿದೆ.ಸಂಚಾರದಟ್ಟಣೆ ಕಡಿಮೆ ಮಾಡಲು ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಲಾಗುತ್ತದೆ. ಆಕ್ಷೇಪಾರ್ಹವಾದ ಬ್ಯಾನರ್ ಬಂಟಿಂಗ್ಸ್ ಹಾಕಲು ಪುನಃ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಅನ್ಯರಿಗೆ ವ್ಯಾಪಾರ ಮಾಡಲು ಅವಕಾಶ ಬೇಡ
ಅಂಜನಾದ್ರಿ ಸೇರಿ ಜಿಲ್ಲೆಯ ಇತರೆ ದೇವಾಲಯ ಗಳಲ್ಲಿ ಅನ್ಯ ಕೋಮಿನವರಿಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಬಾರದು. ಅಂಜನಾದ್ರಿಯಲ್ಲಿ ಬ್ಯಾನರ್ ತೆರವು ಮಾಡಿದ್ದು ಸರಿಯಲ್ಲ. ಪುನಃ ಬ್ಯಾನರ್ ಹಾಕುವಂತೆ ಒತ್ತಾಯಿಸಲಾಗಿದೆ. ಹನುಮಮಾಲೆ ವಿಸರ್ಜನೆಯ ಎಲ್ಲಾ‌ಕಾರ್ಯಗಳಲ್ಲಿ ಹಿಂಜಾವೇ ಹಾಗೂ ಸಂಘದ ಕಾರ್ಯಕರ್ತರು ಸಹಕಾರ ನೀಡಲಿದ್ದಾರೆಂದು ಆರ್ ಆರ್ ಎಸ್ ಎಸ್ ಮುಖಂಡ ಅಯ್ಯನಗೌಡ ಹೇರೂರು ತಿಳಿಸಿದ್ದಾರೆ.

ಸಭೆಯಲ್ಲಿ ಎಸಿ ಬಸವಣೆಪ್ಪ ಕಲಶೆಟ್ಟಿ, ತಹಶೀಲ್ದಾರ್ ಯು.ನಾಗರಾಜ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ಮಂಜುನಾಥ, ವೆಂಕಟಸ್ವಾಮಿ, ಆರ್ ಐ ಮಂಜುನಾಥ ಸ್ವಾಮಿ ಸೇರಿ ಸಂಘಪರಿವಾರದ ಕಾರ್ಯಕರ್ತರು ಮುಖಂಡರು ಹಾಗು ಹನುಮಮಾಲಾಧಾರಿಗಳಿದ್ದರು.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.