ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ....ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ
Team Udayavani, Dec 1, 2022, 7:00 PM IST
ಮೈಸೂರು :ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ.ಇದರಿಂದ ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ.ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ದ.ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಲು ಅನುಮತಿ ಕೊಡುತ್ತಾರೆ ಎಂದು ಮಾಜಿ ಪ್ರಧಾನಿ ಅಸಮಾಧಾನ ಹೊರ ಹಾಕಿದರು.
ಮೇಕೆದಾಟು ಯೋಜನೆಗೆ ಮೋದಿ ಅನುಮತಿ ನೀಡಲಿಲ್ಲ. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ. ಸೇಲಂ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆ ಮಾಡಲಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಅಂತಾನೇ ಅಲ್ಲಿನ ನೀರಾವರಿ ಯೋಜನೆಗೆ ಮೋದಿ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದೆ.ಆ ಪತ್ರಕ್ಕೆ ಇಲ್ಲಿಯ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್ಶಿಪ್ ಕಾರ್ಯಕ್ರಮ
Sandalwood: ‘ಇದು ನಮ್ ಶಾಲೆ’ಯ ಹಾಡುಗಳು ಬಂತು
Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ