ಶೇ.60ರಷ್ಟು ಮತದಾನ: ಗುಜರಾತ್‌ನಲ್ಲಿ ಮೊದಲ ಹಂತ ಮುಕ್ತಾಯ


Team Udayavani, Dec 2, 2022, 6:50 AM IST

ಶೇ.60ರಷ್ಟು ಮತದಾನ: ಗುಜರಾತ್‌ನಲ್ಲಿ ಮೊದಲ ಹಂತ ಮುಕ್ತಾಯ

ಗಾಂಧಿನಗರ/ಅಹಮದಾಬಾದ್‌: ಬಹು ನಿರೀಕ್ಷಿತ ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತ ಗುರುವಾರ ಮುಕ್ತಾಯವಾಗಿದೆ. ಸೌರಾಷ್ಟ್ರ, ಕಛ್ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳಲ್ಲಿನ 89 ಕ್ಷೇತ್ರಗಳಿಗೆ ಮತದಾನ ಹೆಚ್ಚು ಕಡಿಮೆ ಶಾಂತಿಯುತವಾಗಿ ಕೊನೆಗೊಂಡಿದೆ.

ಚುನಾವಣಾ ಆಯೋಗ ನೀಡಿದ ಪ್ರಾಥಮಿಕ ಹಂತದ ಮಾಹಿತಿ ಪ್ರಕಾರ ಶೇ.60.20ರಷ್ಟು ಹಕ್ಕು ಚಲಾವಣೆ ಆಗಿದೆ. ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಡಿ.5ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಡಿ.8ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಕೆಲವೊಂದು ಸ್ಥಳಗಳಲ್ಲಿ ಇವಿಎಂಗಳು ಕೆಟ್ಟು ಹೋದ ಕಾರಣ ಮತದಾನ ವಿಳಂಬವಾಗಿ ಶುರುವಾದ ಘಟನೆಗಳು ನಡೆದಿವೆ. ಅವುಗಳ ಬದಲಾಗಿ ಬೇರೆ ಇವಿಎಂಗಳನ್ನು ಒದಗಿಸಿದ ಬಳಿಕ ಹಕ್ಕು ಚಲಾವಣೆ ಸುಗಮವಾಗಿ ನಡೆಯಿತು.

ಮತದಾನ ನಡೆದ ಜಿಲ್ಲೆಗಳ ಪೈಕಿ ನೋಡುವುದಿದ್ದರೆ ಭಾರಿ ಪ್ರಮಾಣದಲ್ಲಿ ಹಕ್ಕು ಚಲಾವಣೆಯಾಗಿದೆ. ತಪಿ ಜಿಲ್ಲೆಯಲ್ಲಿ ಸಂಜೆ 5 ಗಂಟೆಯ ವರೆಗಿನ ಮಾಹಿತಿ ಪ್ರಕಾರ ಶೇ.72.32 ಹಕ್ಕು ಚಲಾವಣೆಯಾಗಿದೆ. ಉಳಿದಂತೆ ಇತರ ಜಿಲ್ಲೆಗಳಲ್ಲಿಯೂ ಶೇ.60ಕ್ಕಿಂತ ಹೆಚ್ಚು ಮತದಾನವಾಗಿದೆ.

ಜಂಜೋಧ್‌ಪುರ ತಾಲೂಕಿನಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಲಿಲ್ಲ ಎಂಬ ಕಾರಣಕ್ಕಾಗಿ ಮತದಾರರು ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಅವರ ಮನವೊಲಿಕೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರಲಾಯಿತು. ಜುನಾಗಡದಲ್ಲಿ ಮತಗಟ್ಟೆ ಕೇಂದ್ರಕ್ಕೆ ಕಾಂಗ್ರೆಸ್‌ ಮುಖಂಡರ ಪ್ರವೇಶವನ್ನು ಪೊಲೀಸರು ತಡೆದರು ಎಂಬ ಕಾರಣಕ್ಕೆ ಘರ್ಷಣೆ ನಡೆದಿದೆ.

ವೆಬ್‌ಕಾಸ್ಟಿಂಗ್‌ಗೆ ಆದೇಶ:

ಮತದಾನದ ವೇಳೆ ಪಾರದರ್ಶತೆ ಕಾಪಾಡುವ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗ (ಇಸಿಐ) 13,065 ಮತಗಟ್ಟೆಗಳಲ್ಲಿನ ಹಕ್ಕು ಚಲಾವಣೆಯ ಪ್ರಕ್ರಿಯೆಯನ್ನು ನೇರ ವೆಬ್‌ಕಾಸ್ಟಿಂಗ್‌ಗೆ ಆದೇಶ ನೀಡಿತ್ತು. ಬೆಳಗ್ಗೆ 6.30ರಿಂದ ಮತದಾನ ಮುಕ್ತಾಯದ ವರೆಗೆ ಈ ಪ್ರಕ್ರಿಯೆ ನಡೆದಿತ್ತು ಎಂದು ಗುಜರಾತ್‌ನ ಮುಖ್ಯ ಚುನಾವಣಾ ಅಧಿಕಾರಿ ಪಿ.ಭಾರತಿ ಹೇಳಿದ್ದಾರೆ.

ಅತ್ಯುತ್ಸಾಹ:

ಮೊದಲ ಹಂತದ ಮತದಾನ ನಡೆದ 89 ಕ್ಷೇತ್ರಗಳಲ್ಲಿನ ಮತದಾರರು ಅತ್ಯುತ್ಸಾಹದಿಂದ ಹಕ್ಕು ಚಲಾವಣೆಯಲ್ಲಿ ಭಾಗವಹಿಸಿದ್ದರು. ಚುನಾವಣಾ ಆಯೋಗ 104 ವರ್ಷದ ರಾಮ್‌ಜಿ ಭಾಯ್‌ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದ ಫೋಟೋ ಟ್ವೀಟ್‌ ಮಾಡಿದೆ.

ಗಮನ ಸಳೆದ ಅಭ್ಯರ್ಥಿಯ ಮೀಸೆ:

ಸಬರ್‌ಕಾಂತ ಜಿಲ್ಲೆಯ ಹಿಮಾಂತ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಮಗನ್‌ಭಾಯ್‌ ಸೋಲಂಕಿ ಅವರು ಹೊಂದಿರುವ ಭಾರೀ ಮೀಸೆ ಮತದಾರರ ಆಕರ್ಷಣೆಯಾಗಿತ್ತು. ಸೇನೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿರುವ ಅವರು 5 ಅಡಿ ದಪ್ಪದ ಮೀಸೆ ಹೊಂದಿದ್ದಾರೆ. ಅದನ್ನು ಅವರು ಅಚ್ಚುಕಟ್ಟಾಗಿ ಆರೈಕೆ ಮಾಡಿದ್ದಾರೆ. ನನ್ನ ಹಾಗೆ ದಪ್ಪ ಮೀಸೆ ಯಾರು ಬಿಡುತ್ತಾರೆಯೋ ಅವರಿಗೆ ಸರ್ಕಾರ ನಿರ್ವಹಣಾ ವೆಚ್ಚ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 ಜಿಲ್ಲೆ        /    ಮತ ಪ್ರಮಾಣ (ಶೇ.)

ತಪಿ           /     72.32

ನವಾಸಿ        /       65.91

ದಂಗ್‌         /       64.84

ವಲ್ಸಾಡ್‌    /        62.46

ಗಿರ್‌ ಸೋಮನಾಥ್‌ / 60.46

ಭಾವನಗರ          /  51.34

 

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.