ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ

ಹಿಂದೆ ನಟರಾಗಿ ಬೆಳೆಯಲು ಬಹಳಷ್ಟು ಪರಿಶ್ರಮ ಪಡಬೇಕಾಗಿತ್ತು.

Team Udayavani, Dec 2, 2022, 6:21 PM IST

ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ

ಚಾಮರಾಜನಗರ: ಬಿ.ವಿ.ಕಾರಂತರಿಂದ ಆರಂಭ ವಾದ ಮೈಸೂರಿನ ರಂಗಾಯಣದಲ್ಲಿ ಅಂದಿನಿಂದ ಇಂದಿನವರೆಗೆ ಅನೇಕ ನಿರ್ದೇಶಕರು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗುವ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಈಗಿನ ನಿರ್ದೇಶಕರ ಅವಧಿಯಲ್ಲಿ ಅಸಹನೀಯವಾದ ಭಯದ ವಾತಾ ವರಣ ಸೃಷ್ಟಿಯಾಗಿದೆ ಎಂದು ನಗರದ ಶಾಂತಲಾ ಕಲಾವಿದರು ರಂಗತಂಡದ ಅಧ್ಯಕ್ಷ ಎ ಡಿಸಿಲ್ವ ಹೇಳಿದರು.

ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜು ಕ್ಯಾಂಪಸ್‌ನಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ಜೆಎಸ್‌ಎಸ್‌ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾಟಕ ಕಲೆ ಎಂದಾಗ ಅಂತಹ ಪರಿಸರದಲ್ಲಿ ಮನಸ್ಸಿಗೆ ಸಂತಸ ಕೊಡುವ ವಾತಾವರಣ ಉಂಟಾಗಬೇಕು. ಆದರೆ ರಂಗಾಯಣದ ಇಂದಿನ ನಿರ್ದೇಶಕರ ಅವಧಿಯಲ್ಲಿ ಭಯದ ವಾತಾವರಣ ಉಂಟಾಗಿರುವುದು ದುರಂತ ಎಂದು ಅವರು ವಿಷಾದಿಸಿದರು.

ನಮ್ಮ ಶಾಂತಲಾ ಕಲಾವಿದರು ತಂಡ ಮುಂದಿನ ವರ್ಷ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ತಂಡ ಉದಯಿಸಲು ಒಂದು ರೀತಿ ಜೆಎಸ್‌ಎಸ್‌ ಕಾಲೇಜು ಕಾರಣ. ಈ ಕಾಲೇಜು ನಾವು ಯಾವುದೇ ನಾಟಕ ಮಾಡಲು ಅಡ್ಡಿಪಡಿಸಲಿಲ್ಲ. ಇಲ್ಲಿ ಶಾಸಕರು ಮತ್ತು ನಾವು ಸೇರಿ, ಕಂಬಳಿ ನಾಗಿದೇವ, ಅಳಿಯ ದೇವರು ಅಕ್ಕ- ಪಕ್ಕ ನಾಟಕ ಮಾಡಿದ್ದೇವೆ.ಹಿಂದಿನ ಪ್ರಾಂಶುಪಾಲರಾಗಿದ್ದ ಕೆ.ಎಂ. ರೇವಣಸಿದ್ದಯ್ಯ ಹಾಗೂ ಇತರರು ನಾಟಕಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು ಎಂದು ಸ್ಮರಿಸಿದರು.

ಜೆಎಸ್‌ಎಸ್‌ ಸಂಸ್ಥೆ ರಂಗೋತ್ಸವದ ಮೂಲಕ ನಾಟಕ ಕಲೆಗೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆ. ನಾಟಕ ಕಲೆ ವ್ಯಕ್ತಿಯಲ್ಲಿ ಸೃಜನ ಶೀಲತೆಯನ್ನು ಬೆಳೆಸುತ್ತದೆ. ಉಗ್ಗುವಿಕೆ ಹೊಂದಿದ್ದ ಗೆಳೆಯರೊಬ್ಬರು ನಾಟಕದಲ್ಲಿ ಅಭಿನಯಿಸುವ ಮೂಲಕ ಆ ಸಮಸ್ಯೆ ಹೋಗಲಾಡಿಸಿಕೊಂಡರು ಎಂದರು. ಕಿರುತೆರೆ ನಟ ಲೋಕೇಶ್‌ ಬಸವಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸರ್ಕಾರ ಮಾಡಬೇಕಾದ ಕೆಲಸವನ್ನು ಜೆಎಸ್‌ಎಸ್‌ ಸಂಸ್ಥೆ ಮಾಡುತ್ತಿದೆ. ರಂಗ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆಗೆ ಕಾರಣವಾಗಿದೆ. ಜೆಎಸ್‌ಎಸ್‌ ರಂಗಶಿಕ್ಷಣ ವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಲಬೇಕು ಎಂದರು.

ಹಿಂದೆ ನಟರಾಗಿ ಬೆಳೆಯಲು ಬಹಳಷ್ಟು ಪರಿಶ್ರಮ ಪಡಬೇಕಾಗಿತ್ತು. ಇಂದು ಮೊಬೈಲ್‌ ಆಪ್‌ ಗಳ ಮೂಲಕ ಆಡಿಷನ್‌ ನೀಡಲಾಗುತ್ತದೆ. ಇದರಿಂದ ನೈಜ ಪ್ರತಿಭೆ ಬೆಳೆಯಲು ಸಾಧ್ಯವಿಲ್ಲ. ನಟನೆ ಬಹಳಷ್ಟು ವರ್ಷಗಳ ಪರಿಶ್ರಮ, ಪ್ರತಿಭೆ ಬೇಡುತ್ತದೆ. ಹಾಗಾದಾಗ ಮಾತ್ರ ಉತ್ತಮ ಕಲಾವಿದನಾಗಲು ಸಾಧ್ಯ ಎಂದರು.

ಜೆಎಸ್‌ಎಸ್‌ ಮಹಾ ಪೀಠದ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್‌ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್‌. ಎಂ. ಸ್ವಾಮಿ, ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಪ್ರಿನ್ಸಿಪಾಲ್‌ ಸಿದ್ಧರಾಜು, ಸಂಗೀತ ನಿರ್ದೇಶಕ ಚಂದ್ರಶೇಖರಾಚಾರ್‌ ಹೆಗ್ಗೊಠಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದ ಬಳಿಕ ಮಂಜುನಾಥ್‌ ಕಾಚಕ್ಕಿ ನಿರ್ದೇಶನದ ಹಲಗಲಿಯ ಬೇಡರು ನಾಟಕವನ್ನು ಗುಂಡ್ಲುಪೇಟೆ ತಾ. ಬರಗಿ ಜೆಎಸ್‌ಎಸ್‌ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.