ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ
Team Udayavani, Dec 2, 2022, 11:37 PM IST
ಮಂಗಳೂರು: ವಾಹನ ತಪಾಸಣ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಗುರುವಾರ ರಾತ್ರಿ ಪಂಪ್ವೆಲ್ ಚೆಕ್ಪಾಯಿಂಟ್ನಲ್ಲಿ ನಡೆದಿದೆ.
ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸುಗುಮಾರನ್ ಅವರು ಸಿಬಂದಿ ಎಎಚ್ಸಿ ಮಹೇಶ್, ಎಎಸ್ಐ ಸಂತೋಷ್ ಪಡೀಲ್, ಸಿಎಚ್ಸಿ ರಾಜೇಶ್ ಮತ್ತು ಸಿಪಿಸಿ ಸುರೇಶ್ ಮತ್ತು ವೀರೇಶ್ ಅವರೊಂದಿಗೆ ವಾಹನ ತಪಾಸಣೆ ಕರ್ತವ್ಯದಲ್ಲಿದ್ದರು.
ರಾತ್ರಿ ಸುಮಾರು 9.45ರ ವೇಳೆಗೆ ಕಂಕನಾಡಿ ಹಳೇ ರಸ್ತೆ ಕಡೆಯಿಂದ ಪಂಪ್ವೆಲ್ಗೆ ವೇಗವಾಗಿ ಆಟೋ ರಿಕ್ಷಾ ಬರುತ್ತಿರುವುದನ್ನು ಗಮನಿಸಿದ ಪೊಲೀಸ್ ಸಿಬಂದಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಚಾಲಕ ದುಡುಕುತನ ಹಾಗೂ ನಿರ್ಲಕ್ಷತನದಿಂದ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಯದ್ವಾತದ್ವಾ ಚಲಾಯಿಸಿ ಆಟೋವನ್ನು ಒಮ್ಮೆಲೇ ಪೊಲೀಸರತ್ತ ನುಗ್ಗಿಸಿಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಇಲಾಖಾ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿಪಡಿಸುವ ರೀತಿಯಲ್ಲಿ ಚಲಾಯಿಸಿ ಬಿ.ಸಿ. ರೋಡ್ ಕಡೆಗೆ ಪರಾರಿಯಾಗಿದ್ದಾನೆ. ಈ ಕುರಿತಂತೆ ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ