ಫುಟ್‌ಬಾಲ್‌ ವಿಶ್ವಕಪ್‌ಗೆ ಭಾರತ ತಂಡ: ಡಾ| ಚೆಮ್ಮನೂರು

ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಮೂಡಿಸಲು ಶಾಲಾ-ಕಾಲೇಜುಗಳಿಗೆ ಭೇಟಿ

Team Udayavani, Dec 3, 2022, 6:55 AM IST

ಫುಟ್‌ಬಾಲ್‌ ವಿಶ್ವಕಪ್‌ಗೆ ಭಾರತ ತಂಡ: ಡಾ| ಚೆಮ್ಮನೂರು

ಮಂಗಳೂರು: ಮುಂದಿನ ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಭಾರತೀಯ ತಂಡ ಪಾಲ್ಗೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದ್ದು, ಇದಕ್ಕಾಗಿ ಉತ್ತಮ ಆಟಗಾರರ ತಂಡ ವೊಂದನ್ನು ಸಜ್ಜು ಗೊಳಿಸುವ ಉದ್ದೇಶ ಹೊಂದಿರುವುದಾಗಿ ಚೆಮ್ಮನ್ನೂರು ಸಮೂಹ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ| ಬೋಬಿ ಚೆಮ್ಮನೂರು (ಬೋಚೆ) ತಿಳಿಸಿದ್ದಾರೆ.

ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಖ್ಯಾತ ಫುಟ್‌ಬಾಲ್‌ ಆಟಗಾರ ಡೀಗೊ ಮರಡೋನ ಅವರ “ಹ್ಯಾಂಡ್‌ ಆಫ್‌ ಗಾಡ್‌’ ಚಿನ್ನದ ಮೂರ್ತಿಯೊಂದಿಗೆ ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ನಡೆಯುತ್ತಿರುವ ಕತಾರ್‌ ದೇಶಕ್ಕೆ ತೆರಳುತ್ತಿರುವ ಅವರು ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದರು.

“ಕೆಲವೇ ಲಕ್ಷ ಜನಸಂಖ್ಯೆ ಇರುವ ದೇಶಗಳು ಫುಟ್‌ಬಾಲ್‌ನಲ್ಲಿ ವಿಶ್ವದ ಉನ್ನತ ರ್‍ಯಾಂಕ್‌ನಲ್ಲಿವೆ. ಆದರೆ, 140 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ 11 ಮಂದಿ ಫುಟ್‌ಬಾಲ್‌ ಆಟಗಾರರನ್ನು ಆಯ್ಕೆ ಮಾಡಲು ಸಾಧ್ಯವಾಗದಿರುವುದು ಅತ್ಯಂತ ಖೇದಕರ. ಆದ್ದರಿಂದ ಆರ್ಜೆಂಟೀನಾ ಫುಟ್‌ಬಾಲ್‌ ಅಸೋಸಿಯೇಶನ್‌ ಮೂಲಕ ನಮ್ಮ ಉತ್ತಮ ಆಟಗಾರರಿಗೆ ತರಬೇತಿ ನೀಡುವ ಉದ್ದೇಶವನ್ನೂ ಹೊಂದಲಾಗಿದೆ. ತಂಡದ ರಚನೆ ಕೇಂದ್ರದ ಮಟ್ಟದಲ್ಲಿ ನಡೆಯಬೇಕಾಗಿರುವುದರಿಂದ ಬಳಿಕ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ವಿವಿಧ ಕ್ರೀಡಾಪಟುಗಳನ್ನು ಭೇಟಿ ಮಾಡಲಾಗಿದ್ದು, ಕೇರಳದಿಂದ ಪಿ.ಟಿ.ಉಷಾ ಅವರೂ ನಮ್ಮೊಂದಿಗೆ ಕೈಜೋಡಿಸಿದ್ದಾರೆ’ ಎಂದರು.

ಶಾಲಾ-ಕಾಲೇಜಿಗೆ ಭೇಟಿ
ಜನಜಾಗೃತಿ ಕಾರ್ಯಕ್ರಮ ಭಾಗವಾಗಿ ವಿವಿಧ ಶಾಲೆ-ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗುತ್ತದೆ. ಈಗಾಗಲೇ 70-80 ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಾಗಿದೆ. ಉಡುಪಿ, ಮಣಿಪಾಲ, ಭಟ್ಕಳ, ಕಾರವಾರ ಗೋವಾ ಮೂಲಕ ಮುಂಬಯಿಗೆ ತೆರಳಿ ಅಲ್ಲಿಂದ ಕತಾರ್‌ಗೆ ತೆರಳುವುದಾಗಿ ತಿಳಿಸಿದರು.

ತಪ್ಪಿತಸ್ಥ ಭಾವನೆಯಿಂದ ಮೂರ್ತಿ
ಡೀಗೋ ಮರಡೋನ ಅವರೂ ಮಾದಕ ವ್ಯಸನಿಯಾಗಿ ಬಳಿಕ ತ್ಯಜಿಸಿದ್ದರು. ಈ ಹಿಂದೆ ಅವರನ್ನು ಭೇಟಿಯಾಗಿದ್ದಾಗ ಸುಮಾರು 6 ಲಕ್ಷ ರೂ. ಮೊತ್ತದ ಚಿನ್ನದ ಫುಟ್‌ಬಾಲ್‌ ಉಡುಗೊರೆಯಾಗಿ ಕೊಡಲು ಹೋಗಿದ್ದೆ. ಆದರೆ ಅವರು ಅದನ್ನು ಸ್ವೀಕರಿಸಿರಲಿಲ್ಲ. ಬದಲಾಗಿ ನನ್ನದೊಂದು ಚಿನ್ನದ ಮೂರ್ತಿಯನ್ನು ನಿರ್ಮಿಸಿ ಕೊಡು ಎಂದು ಹೇಳಿದ್ದರು. ಅದನ್ನು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಅವರ ನಿಧನದ ಬಳಿಕ ತಪ್ಪಿತಸ್ಥ ಭಾವನೆ ಕಾಡಿತು. ಆದ್ದರಿಂದ 1 ಕೋಟಿ ರೂ. ವೆಚ್ಚದಲ್ಲಿ ಮೂರ್ತಿ ನಿರ್ಮಿಸಿ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾಟದ ಮೈದಾನಕ್ಕೆ ತೆಗೆದುಕೊಂಡು ಹೋಗುತ್ತಿದ್ದು, ಬಳಿಕ ಅಲ್ಲಿನ ಮ್ಯೂಸಿಯಂನಲ್ಲಿ ಇರಿಸಲಾಗುವುದು ಎಂದರು.

ರೀಲ್ಸ್ -ಸೆಲ್ಫಿ ಕಾಂಟೆಸ್ಟ್‌
ಮರಡೋನ ಮೂರ್ತಿಯೊಂದಿಗೆ ರೀಲ್ಸ್ -ಸೆಲ್ಫಿ ಕಾಂಟೆಸ್ಟ್‌ ಆಯೋಜಿಸಲಾಗಿದ್ದು, ಬೋಚೆ ಇನ್‌ಸ್ಟಾ ಪೇಜ್‌ಗೆ ಶೇರ್‌ ಅಥವಾ ಟ್ಯಾಗ್‌ ಮಾಡಲು ಅವಕಾಶವಿದೆ. ಇದರಲ್ಲಿ ಅದೃಷ್ಟಶಾಲಿಗಳಿಗೆ ಕತಾರ್‌ನಲ್ಲಿ ಫುಟ್‌ಬಾಲ್‌ ಪಂದ್ಯಾಟ ವೀಕ್ಷಿಸಲು ಉಚಿತವಾಗಿ ವ್ಯವಸ್ಥೆ ಮಾಡಲಾಗುವುದು ಎಂದರು.

ದ.ಕ. ಜಿಲ್ಲಾ ಫುಟ್‌ಬಾಲ್‌ ಅಸೋಸಿಯೇಶನ್‌ ಅಧ್ಯಕ್ಷ ಡಿ.ಎಂ. ಅಸ್ಲಾಂ, ಪ್ರಮುಖರಾದ ಜೋಜಿ ಎಂ.ಜೆ., ಸೆಲಿನಾ, ಲವಿಟಾ ಮಿನೇಜಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.