ಓಲ್ಡ್ ಗೋವಾ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ಫೆಸ್ಟ್: ಲಕ್ಷಾಂತರ ಭಕ್ತರು ಭಾಗಿ

ಗೋವಾ ಸಿಎಂ ಸಾವಂತ್ ಸೇರಿ ವಿವಿಧ ರಾಜ್ಯಗಳ ಚರ್ಚ್ ಗಳ ಧರ್ಮಗುರುಗಳು ಭಾಗಿ

Team Udayavani, Dec 3, 2022, 8:13 PM IST

1-dadasd

ಪಣಜಿ: ಸಂತ ಫ್ರಾನ್ಸಿಸ್ ಜೇವಿಯರ್ ರವರು ಏಸುಕ್ರಿಸ್ತರ ಬಗ್ಗೆ ಬೋಧನೆ ಮಾಡುವ ಮೂಲಕ ಜನರಲ್ಲಿ ಸಾಮರಸ್ಯ ಸೃಷ್ಠಿಸಲು ಪ್ರಯತ್ನಿಸಿದರು. ಸಂತ ಫ್ರಾನ್ಸಿಸ್ ಜೇವಿಯರ್ ರವರು ಕೈಯ್ಯಲ್ಲಿ ಗಂಟೆ ಮತ್ತು ಶಿಲುಬೆಯನ್ನು ಹಿಡಿದು ಹೊರಬರುತ್ತಿದ್ದರು. ಜನರನ್ನು ಒಗ್ಗೂಡಿಸಿ ಅವರು ಏಸುವಿನ ಕಥೆಗಳನ್ನು ಹಳುತ್ತಿದ್ದರು ಮತ್ತು ಪ್ರಾರ್ಥಿಸಲು ಹೇಳುತ್ತಿದ್ದರು, ಅದು ಅದ್ವಿತೀಯ ಬೋಧನಾ ವಿಧಾನವಾಗಿತ್ತು ಎಂದು ಬಾಮ್ ಜೀಸಸ್ ಬಾಸಿಲಿಕಾ ರೆಕ್ಟರ್ ಫಾದರ್  ಪ್ಯಾಟ್ರಿಸಿಯೋ ಫರ್ನಾಂಡಿಸ್ ಆಶೀರ್ವಚನ ನೀಡಿದರು.

ಶನಿವಾರ ನಡೆದ ಜಗತ್ಪ್ರಸಿದ್ಧ ಓಲ್ಡ್ ಗೋವಾದ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ನ ಫೆಸ್ಟ್ ನಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪ್ರಾರ್ಥನಾ ಸಭೆಗಳಲ್ಲಿ ಪಾಲ್ಗೊಂಡರು. ಈ ಪ್ರಾರ್ಥನಾ ಸಭೆಯಲ್ಲಿ ಫಾದರ್  ಪ್ಯಾಟ್ರಿಸಿಯೋ ಫರ್ನಾಂಡಿಸ್ ಆಶೀರ್ವಚನ ನೀಡಿದರು.

ಸಂತ ಫ್ರಾನ್ಸಿಸ್ ಕ್ಸೇವಿಯರ್ ರವರು 1541 ರಲ್ಲಿ ಲಿಸ್ಬನ್ ನಿಂದ ಪ್ರಯಾಣ ಬೆಳೆಸಿದರು ಮತ್ತು ಮೇ 6, 1542 ರಂದು ಭಾರತವನ್ನು ತಲುಪಿದರು. ಅವರು ಗೋವಾಕ್ಕೆ ಬರಲು ಒಂದು ವರ್ಷ ಒಂದು ತಿಂಗಳು ನಾಲ್ಕು ದಿನ ತೆಗೆದುಕೊಂಡರು. ಗೋವಾಕ್ಕೆ ಬಂದ ನಂತರ ಪ್ರೀತಿ, ಸೌಹಾರ್ದತೆಯ ಸಂದೇಶ ಸಾರಲು ಪ್ರಯತ್ನಿಸಿದರು. ಗೋವಾದಿಂದ ವಸಾಯಿ, ತಿರುವನಂತಪುರ, ಮದ್ರಾಸ್, ಮೈಲಾಪುರ್, ಮಲಯ, ಮಲಕ್ಕಾ, ಇಂಡೋನೇಷಿಯಾ, ಫಿಲಿಪೈನ್ಸ್, ಜಾವಾ, ಬೊರ್ನಿಯೊ, ಜಪಾನ್ ದೇಶಗಳಿಗೂ ತೆರಳಿ ಧರ್ಮ ಪ್ರಚಾರ ಮಾಡಿದರು ಎಂದು ಫಾದರ್ ಪ್ಯಾಟ್ರಿಸಿಯೋ ನುಡಿದರು.

ಓಲ್ಡ್ ಗೋವಾ ಫೆಸ್ಟ್ ನ ಪ್ರಾರ್ಥನಾ ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ರಾಜ್ಯದ ಶಾಸಕರು ಮತ್ತು ಸಚಿವರು, ವಿವಿಧ ರಾಜ್ಯಗಳ ಚರ್ಚ್ ಗಳ ಧರ್ಮಗುರುಗಳು, ದೇಶವಿದೇಶಗಳಿಂದ ಆಗಮಿಸಿದ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು. ಶನಿವಾರ ಬೆಳಿಗ್ಗೆಯಿಂದ ವಿವಿಧ ಭಾಷೆಗಳಲ್ಲಿ ಪ್ರಾರ್ಥನಾ ಸಭೆ ಜರುಗಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.