ಹನುಮ ಮಾಲೆ ಸತ್ಕಾರ್ಯಗಳಿಗೆ ಪ್ರೇರಣೆ

ಸನ್ಮಾರ್ಗ ತೋರಿಸಿದ ಹನುಮಂತ ಪುರಾತನ ಕಾಲದಿಂದಲೂ ನಮ್ಮ ಆದರ್ ; ಪ್ರತಿ ಮನೆಯಲ್ಲಿ ದೇಶಪ್ರೇಮಿಗಳು ಜನಿಸಲಿ

Team Udayavani, Dec 4, 2022, 10:06 AM IST

4

ಚಿಕ್ಕೋಡಿ: ಈ ಹನುಮಮಾಲಾ ಕಾರ್ಯಕ್ರಮ ಯುವಕರಿಗೆ ಸತ್ಕಾರ್ಯ ಮಾಡಲು ಪ್ರೇರಣೆಯಾಗಲಿದೆ. ಸುಮಾರು 2500 ಜನ ಹನುಮ ಮಾಲಾಧಾರಿಗಳು ಸುಕ್ಷೇತ್ರ ಅಂಜನಾದ್ರಿಗೆ ಹೋಗಲಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಿಪ್ಪಾಣಿ ನಗರದ ಶ್ರೀ ವಿರುಪಾಕ್ಷಲಿಂಗ ಸಮಾಧಿ ಮಠದಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ವತಿಯಿಂದ ಆಯೋಜಿಸಿದ್ದ ಹನುಮಮಾಲಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೊಲ್ಲೆ ಗ್ರೂಪ್‌ನ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಸಾರಥ್ಯದಲ್ಲಿ ಇಂತಹ ಒಂದು ಒಳ್ಳೆಯ ಕಾರ್ಯಕ್ರಮ ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವುದು ನನಗೆ ನಿಜಕ್ಕೂ ಹೆಮ್ಮೆ ಇದೆ ಎಂದರು.

ಮುಖ್ಯ ವಕ್ತಾರರಾಗಿ ಭಾಗವಹಿಸಿದ್ದ ವಿಶ್ವಹಿಂದೂ ಪರಿಷತ್‌ ಮುಂಬಯಿ ಪ್ರಾಂತ ಪ್ರಮುಖ ಶಂಕರ ಗಾಯಕರ ಮಾತನಾಡಿ, ಯಾವುದು ನಾಶವಾಗುವುದಿಲ್ಲವೋ ಅದು ಸನಾತನ. ಇದುವೇ ಹಿಂದೂತ್ವ. ವಿಶ್ವದ ಯಾವುದೇ ಶಕ್ತಿ ಹಿಂದೂತ್ವವನ್ನು ಮುಗಿಸಲು ಸಾಧ್ಯವಿಲ್ಲ. ಬ್ರಿಟಿಷರು ನಮ್ಮ ದೇಶವನ್ನು ಇಬ್ಭಾಗಗೊಳಿಸಿಲ್ಲ. ದೇಶದ ಮೊದಲ ಪ್ರಧಾನಿ ದೇಶವನ್ನು ಇಬ್ಭಾಗಗೊಳಿಸಿದ್ದಾರೆ. ಇದು ಆತಂಕವಾದಕ್ಕೆ ಕಾರಣವಾಗಿದೆ. ನಾವು ಈ ಆತಂಕವಾದವನ್ನು ಹತ್ತಿಕ್ಕಬೇಕಾಗಿದೆ ಎಂದರು.

ದೇಶದ ರಕ್ಷಣೆಗಾಗಿ ಛತ್ರಪತಿ ಶಿವಾಜಿ ಮಹಾರಾಜ, ಭಗತಸಿಂಗ್‌, ರಾಣಿ ಲಕ್ಷ್ಮೀಬಾಯಿ, ತಾತ್ಯಾ ಟೋಪಿ ಇವರಂತಹ ಮಹಾನ್‌ ವ್ಯಕ್ತಿಗಳು ಪ್ರತಿಯೊಂದು ಮನೆಯಲ್ಲಿ ಜನ್ಮಕ್ಕೆ ಬರಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಕನೇರಿ ಸಿದ್ಧಗಿರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ರಾಷ್ಟ್ರ ನಿರ್ಮಾಣ ಕಾರ್ಯವನ್ನು ವಿಶ್ವಹಿಂದೂ ಪರಿಷತ್‌ ಮತ್ತು ಬಜರಂಗದಳ ಮಾಡುತ್ತಿದೆ. ಯುವಕರಿಗೆ ಸನ್ಮಾರ್ಗ ತೋರಿಸಿದ ಹನುಮಂತ ಪುರಾತನ ಕಾಲದಿಂದಲೂ ನಮ್ಮ ಆದರ್ಶ. ಗುರುಕುಲದಲ್ಲಿ ನಾವು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುತ್ತೇವೆ, ರಾಷ್ಟ್ರಕ್ಕಾಗಿ ಒಳ್ಳೆಯ ಪ್ರಜೆಯನ್ನಾಯಾಗಿಸುತ್ತೇವೆ. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು. ನಮ್ಮ ತಲೆಮಾರು ಸುರಕ್ಷಿತವಾಗಿರಬೇಕು. ಅದಕ್ಕಾಗಿ ಹನುಮ ಮಾಲಾ. ಮಾಲೆ ಧಾರಣೆ ಮಾಡಿದ ನಂತರ ನಮ್ಮ ಅಂತರ್‌ ಮನ ಶುದ್ಧ ಮಾಡುತ್ತದೆ. ಯುವಕರಲ್ಲಿ ಆದರ್ಶಗಳ ಪರಿಪಾಲನೆಗೆ ಪ್ರೇರೇಪಿಸುತ್ತದೆ. ನಿರ್ವ್ಯಸನಿಯಾಗಿ, ಬಲಶಾಲಿಯಾಗಿ ಬದುಕಿ. ನಮ್ಮ ದೇಶವನ್ನು ನಾವೇ ಸುರಕ್ಷಿತವಾಗಿಡಬೇಕು ಎಂದರು.

ಜೊಲ್ಲೆ ಗ್ರೂಪ್‌ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಸ್ವಾಗತಿಸಿದರು. ಬೆಳಿಗ್ಗೆ 6 ಗಂಟೆಗೆ ಹನುಮಮಾಲಾ ಧಾರಣೆ ಹಾಗೂ ಪವಮಾನ ಹೋಮ ಜರುಗಿತು.

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಶಿರೋಳದ ಶಂಕರಾರೂಢ ಸ್ವಾಮೀಜಿ, ವಿರುಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶೈಲೇಂದ್ರ ಪಾರೀಖ, ಸಂಜಯ ಅಡಕೆ, ಸುಚಿತ್ರಾ ಕುಲಕರ್ಣಿ, ಜ್ಯೋತಿಪ್ರಸಾದ ಜೊಲ್ಲೆ, ರಾಜು ಬದರಗಡೆ, ಹಾಲಸಿದ್ದನಾಥ ಕಾರ್ಖಾನೆಯ ಉಪಾಧ್ಯಕ್ಷ ಎಮ್‌. ಪಿ. ಪಾಟೀಲ, ಸಂಚಾಲಕ ವಿಶ್ವನಾಥ ಕಮತೆ, ಅವಿನಾಶ ಪಾಟೀಲ, ರಾಮಗೊಂಡಾ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಶಿವ ಕುಲಕರ್ಣಿ, ನಗರಸಭೆ ಅಧ್ಯಕ್ಷ ಜಯಂತ ಭಾಟಲೆ, ಸ್ಥಾಯಿ ಸಮಿತಿ ಚೇರ್ಮನ್‌ ರಾಜೇಂದ್ರ ಗುಂಡೆಶಾ ಉಪಸ್ಥಿತರಿದ್ದರು.

ವಿಜಯ ರಾವುತ ವಂದಿಸಿದರು. ರಮೇಶ ಪಾಟೀಲ ನಿರೂಪಿಸಿದರು.ಏಕತೆಯಲ್ಲಿ ಬಲವಿದೆ. ಹಾಗಾಗಿ ಎಲ್ಲ ಹಿಂದೂಗಳು ಒಗ್ಗೂಡಬೇಕು. ಜೊಲ್ಲೆ ದಂಪತಿ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಂಕಟ ಕಾಲದಲ್ಲಿ ಸಮಾಜಕ್ಕೆ ನೆರವಾಗುತ್ತಿದ್ದಾರೆ. ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.