ಏಕದಿನ ಸರಣಿ; ಟಾಸ್ ಗೆದ್ದ ಬಾಂಗ್ಲಾ; ಟೀಂ ಇಂಡಿಯಾದ ಹಲವು ಅಚ್ಚರಿಯ ಬದಲಾವಣೆ
Team Udayavani, Dec 4, 2022, 11:12 AM IST
ಢಾಕಾ: ಟಿ20 ವಿಶ್ವಕಪ್, ನ್ಯೂಜಿಲ್ಯಾಂಡ್ ಸರಣಿಯ ಬಳಿಕ ಇದೀಗ ಟೀಂ ಇಂಡಿಯಾ ಉಪಖಂಡಕ್ಕೆ ಮರಳಿದೆ. ಇಂದಿನಿಂದ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಢಾಕಾದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ.
ಟೀಂ ಇಂಡಿಯಾ ನಿರೀಕ್ಷೆಗೂ ಮೀರಿ ಬದಲಾವಣೆ ಮಾಡಲಾಗಿದೆ. ತಂಡದಲ್ಲಿ ನಾಲ್ವರು ಆಲ್ ರೌಂಡರ್ ಗಳು (ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್) ಆಡುತ್ತಿದ್ದಾರೆ. ವೇಗಿ ಕುಲ್ದೀಪ್ ಸೆನ್ ಪದಾರ್ಪಣೆ ಮಾಡುತ್ತಿದ್ದಾರೆ. ರಿಷಬ್ ಪಂತ್, ಇಶಾನ್ ಕಿಶನ್ ಬದಲಿಗೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಜವಾಬ್ದಾರಿ ಹೊತ್ತಿದ್ದಾರೆ. ಅಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಇದನ್ನೂ ಓದಿ:ವಿಭಜನೆಯ ನಂತರ ಸನಾತನ ಧರ್ಮದ ಅನುಯಾಯಿಗಳು ಮಾತ್ರ ಉಳಿಯಬೇಕಿತ್ತು: ಗಿರಿರಾಜ್ ಸಿಂಗ್
ಇಂದು ಆಯ್ಕೆಗೆ ಅಕ್ಷರ್ ಪಟೇಲ್ ಲಭ್ಯವಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದೆ. ರಿಷಬ್ ಪಂತ್ ತಂಡದಿಂದ ಬಿಡುಗಡೆಯಾಗಿದ್ದು, ಟೆಸ್ಟ್ಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೆನ್.
ಬಾಂಗ್ಲಾದೇಶ: ಲಿಟ್ಟನ್ ದಾಸ್ (ನಾ), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿ.ಕೀ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಎಬಾಡತ್ ಹೊಸೈನ್