ಮುಸ್ಲಿಂ ಮಹಿಳೆಯರಿಗೆ ಚುನಾವಣೆ ಟಿಕೆಟ್: ಶಾಹಿ ಇಮಾಮ್ ಆಕ್ರೋಶ ;ವಿಡಿಯೋ
ಹಿಜಾಬ್ ಅನ್ನು ಸುರಕ್ಷಿತವಾಗಿಡಲು ಸಾಧ್ಯವಾಗುವುದಿಲ್ಲ... ಅವರು ಧರ್ಮವನ್ನು ದುರ್ಬಲಗೊಳಿಸುತ್ತಿದ್ದಾರೆ....
Team Udayavani, Dec 4, 2022, 5:48 PM IST
ಅಹಮದಾಬಾದ್ : ಮುಸ್ಲಿಂ ಮಹಿಳೆಯರಿಗೆ ಚುನಾವಣೆ ಟಿಕೆಟ್ ನೀಡುವವರು ಇಸ್ಲಾಂ ಧರ್ಮದ ವಿರುದ್ಧ ಇರುವವರು. ಅವರು ಧರ್ಮವನ್ನು ದುರ್ಬಲಗೊಳಿಸುತ್ತಿದ್ದಾರೆ. ಪುರುಷರು ಉಳಿದಿಲ್ಲವೇ? ಎಂದು ಅಹಮದಾಬಾದ್ನ ಜಾಮಾ ಮಸೀದಿಯ ಶಾಹಿ ಇಮಾಮ್ ಶಬ್ಬೀರ್ ಅಹಮದ್ ಸಿದ್ದಿಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಎನ್ಐ ಜೊತೆ ಮಾತನಾಡಿದ ಶಾಹಿ ಇಮಾಮ್ ಶಬ್ಬೀರ್ ಅಹ್ಮದ್ ಸಿದ್ದಿಕಿ, “ನಾವು ಮಹಿಳೆಯರನ್ನು ಶಾಸಕರನ್ನಾಗಿ ಮಾಡಿದರೆ, ನಾವು ಹಿಜಾಬ್ ಅನ್ನು ರಕ್ಷಿಸಲು ಸಾಧ್ಯವಿಲ್ಲ” ಮಹಿಳೆಯರಿಗೆ ಟಿಕೆಟ್ ನೀಡಿದವರು ಇಸ್ಲಾಂ ವಿರುದ್ಧ ಬಂಡಾಯವೆದ್ದವರು” ಎಂದರು.
”ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಹಿಜಾಬ್ ವಿಚಾರ ಬಂದಿದ್ದು, ಈ ವಿಚಾರದಲ್ಲಿ ಭಾರೀ ಗದ್ದಲ ಎದ್ದಿತ್ತು. ನಿಮ್ಮ ಮಹಿಳೆಯರನ್ನು ಶಾಸಕಿ, ಕೌನ್ಸಿಲರ್ಗಳನ್ನಾಗಿ ಮಾಡಿದರೆ ಏನಾಗಬಹುದು, ಹಿಜಾಬ್ ಅನ್ನು ಸುರಕ್ಷಿತವಾಗಿಡಲು ನಮಗೆ ಸಾಧ್ಯವಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.
”ನಾವು ಈ ವಿಷಯವನ್ನು ಸರ್ಕಾರದ ಮುಂದೆ ಪ್ರಸ್ತಾಪಿಸಲು ಸಾಧ್ಯವಾಗುವುದಿಲ್ಲ, ಏಕೆಂದರೆ ನಮಗೆ ಮಾತ್ರ ಅದರ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ನಿಮ್ಮ ಮಹಿಳೆಯರು ಶಾಸಕರಾಗಿ ಬರುತ್ತಿದ್ದಾರೆ ಎಂದು ಎಲ್ಲರೂ ಹೇಳುತ್ತಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು, ಮಹಿಳೆಯರು ಮನೆ ಮನೆಗೆ ಹೋಗಬೇಕಾಗುತ್ತದೆ, ಆದರೆ ಇಸ್ಲಾಂನಲ್ಲಿ ಮಹಿಳೆಯ ಧ್ವನಿಯೂ ಮಹಿಳೆಯಾಗಿದೆ. ಅದಕ್ಕಾಗಿಯೇ ನಾನು ಅದನ್ನು ಬಲವಾಗಿ ವಿರೋಧಿಸುತ್ತೇನೆ” ಎಂದಿದ್ದಾರೆ.
ಡಿಸೆಂಬರ್ 5 ರಂದು(ಸೋಮವಾರ) ಗುಜರಾತ್ನಲ್ಲಿ ಕೊನೆಯ ಹಂತದ ಮತದಾನ ನಡೆಯಲಿರುವ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ.
#WATCH | Those who give election tickets to Muslim women are against Islam, weakening the religion. Are there no men left?: Shabbir Ahmed Siddiqui, Shahi Imam of Jama Masjid in Ahmedabad#Gujarat pic.twitter.com/5RpYLG7gqW
— ANI (@ANI) December 4, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ