ಜ.2ರಿಂದ ತಿರುಮಲ ವೈಕುಂಠ ದ್ವಾರ ದರ್ಶನ


Team Udayavani, Dec 4, 2022, 8:30 PM IST

ಜ.2ರಿಂದ ತಿರುಮಲ ವೈಕುಂಠ ದ್ವಾರ ದರ್ಶನ

ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ವೈಕುಂಠ ದ್ವಾರ ದರ್ಶನವು ಹೆಚ್ಚಿನ ಭಕ್ತರಿಗೆ ದೊರೆಯಬೇಕೆಂಬ ಕಾರಣದಿಂದ 2023ರ ಜ.2ರಿಂದ 11ರವರೆಗಿನ ಎಲ್ಲಾ ವಿಶೇಷ ದರ್ಶನಗಳು ಮತ್ತು ಆರ್ಜಿತ ಸೇವೆಗಳನ್ನು ಟಿಟಿಡಿ ರದ್ದುಪಡಿಸಿದೆ.

“ವಿಶೇಷವಾಗಿ ಜ.2ರಂದು ವೈಕುಂಠ ಏಕಾದಶಿ ಮತ್ತು ಜ.3ರಂದು ವೈಕುಂಠ ದ್ವಾದಶಿ ಇದೆ. ಅಲ್ಲದೇ ಕಳೆದ ಎರಡು ವರ್ಷಗಳಿಂದ 10 ದಿನಗಳ ಕಾಲ ವೈಕುಂಠ ದ್ವಾರವು ತೆರೆಯಲಾಗುತ್ತಿದೆ. ಹಾಗಾಗಿ ಜ.2ರಿಂದ 11ರವೆರೆಗೆ ವೈಕುಂಠ ದ್ವಾರ ದರ್ಶನ ಲಭ್ಯವಾಗಲಿದೆ,’ ಎಂದು ಟಿಟಿಡಿ ಇಒ ಎ.ವಿ.ಧರ್ಮಾರೆಡ್ಡಿ ತಿಳಿಸಿದರು.

“ಮುಂಜಾನೆಯ ನಿತ್ಯ ಆಚರಣೆಗಳ ನಂತರ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಗಲಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸುಮಾರು 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. 300 ರೂ. ಟಿಕೆಟ್‌, ಶ್ರೀವಾಣಿ ಮತ್ತು ಎಸ್‌ಎಸ್‌ಡಿ ಟೋಕನ್‌ ಹೊಂದಿರುವ ಭಕ್ತರಿಗೆ ಜಯ-ವಿಜಯ ದ್ವಾರದ ಮೂಲಕ “ಮಹಾ ಲಘು ದರ್ಶನ’ಕ್ಕೆ ಅವಕಾಶ ಕಲ್ಪಿಸಲಾಗುವುದು,’ ಎಂದು ಮಾಹಿತಿ ನೀಡಿದರು.

“ಈ 10 ದಿನಗಳು ಪ್ರತಿದಿನ 25,000 ಭಕ್ತರಿಗೆ ಆನ್‌ಲೈನ್‌ ಮೂಲಕ 300 ರೂ. ಟಿಕೆಟ್‌ ವಿತರಿಸಲಾಗುವುದು. ಅಲ್ಲದೇ ತಿರುಪತಿಯ 9 ಸ್ಥಳಗಳಲ್ಲಿ ಹಾಗೂ ತಿರುಮಲದ ಒಂದು ಕಡೆ ಪ್ರತಿನಿತ್ಯ 50,000 ಸರ್ವ ದರ್ಶನ ಟಿಕೆಟ್‌ಗಳನ್ನು ವಿತರಿಸಲಾಗುವುದು. ಇದಕ್ಕೆ ಆಧಾರ್‌ ಕಡ್ಡಾಯವಾಗಿದೆ. ಜತೆಗೆ ಪ್ರತಿದಿನ 2,000 ಶ್ರೀವಾಣಿ ಟಿಕೆಟ್‌ಗಳನ್ನು ವಿತರಿಸಲಾಗುವುದು,’ ಎಂದು ವಿವರಿಸಿದರು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.