ಪೆಟ್ರೋಲಿಯಂ ಕೇಂದ್ರದಲ್ಲಿ ರಕ್ಷಣಾ ಅಣಕು ಪ್ರದರ್ಶನ


Team Udayavani, Dec 6, 2022, 2:31 PM IST

17

ಬೆಳಗಾವಿ: ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್‌.ಡಿ.ಆರ್‌.ಎಫ್‌ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾ ಮತ್ತು ಅಣಕು ಪ್ರದರ್ಶನ ಸೋಮವಾರ ದೇಸೂರಿನ ಬಿಪಿಸಿಎಲ್‌-ಐಓಸಿಎಲ್‌ ಪೆಟ್ರೋಲಿಯಂ ಶೇಖರಣಾ ಕೇಂದ್ರದಲ್ಲಿ ನಡೆಯಿತು.

ಪೆಟ್ರೋಲಿಯಂ ಸ್ಟೋರೇಜ್‌ಗಳಲ್ಲಿ, ಪೆಟ್ರೋಲಿಯಂ ವ್ಯಾಗನ್‌ ಟ್ಯಾಂಕರ್‌ ಸೋರಿಕೆ, ಬೆಂಕಿ ಅವಘಡ ಸಂಭವಿಸಿದಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತಾಗಿ, ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನ ಕೈಗೊಳ್ಳಲಾಯಿತು. ಬೆಳಗಾವಿ ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ್‌ ಹಾಗೂ ಜಿಲ್ಲಾ ಕಾರ್ಖಾನೆಗಳ ಉಪ ನಿರ್ದೇಶಕ ವೆಂಕಟೇಶ ರಾಠೊಡ ಅವರ ನಿರ್ದೇಶನದಂತೆ ಅಣಕು ಪ್ರದರ್ಶನ ಜರುಗಿತು.

ಅವಘಡ ಸಂಭವಿಸಿದ ಕುರಿತು ಮಾಹಿತಿ ಬಂದ ತಕ್ಷಣವೇ ಜಿಲ್ಲಾಡಳಿತದಿಂದ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ಸೂಚಿಸಿ, ಘಟನೆ ಸ್ಥಳಕ್ಕೆ ಭೇಟಿ ನೀಡಿ ಅವಘಡವನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.

ಸನ್ನಿವೇಶದಲ್ಲಿ ಶೇಖರಣೆಯಾದ ಪೆಟ್ರೋಲಿಯಂ ಕಳುಹಿಸುವ ಸಂದರ್ಭದಲ್ಲಿ ವ್ಯಾಗನ್‌ ಟ್ಯಾಂಕರ್‌ ಸೋರಿಕೆಯಾಗಿದ್ದು, ಅದರಿಂದ ಪೆಟ್ರೋಲಿಯಂ ಶೇಖರಣಾ ಕೇಂದ್ರದ ಒಳಗಡೆ ಬೆಂಕಿ ಸಂಭವಿಸಿತು. ಅವಘಡದಲ್ಲಿ ಗಾಯಗೊಂಡಿರುವ 25 ಕಾರ್ಮಿಕರನ್ನು ಆಂಬ್ಯುಲೆನ್ಸ್‌ ಮೂಲಕ ಸ್ಥಳಾಂತರಿಸಿ, ಮೆಡಿಕಲ್‌ ಪೋಸ್ಟ್‌ ಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವ ಸನ್ನಿವೇಶವನ್ನು ಅಣಕು ಪ್ರದರ್ಶನದಲ್ಲಿ ಕೈಗೊಳ್ಳಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಮಾಸ್ತಿಹೊಳಿ, ವಡಗಾಂವ ಸಿಪಿಐ ಶ್ರೀನಿವಾಸ ಹಾಂಡ, ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ನಿಂಗನಗೌಡ ಚನಬಸನಗೌಡರ, ಭಾರತ ಪೆಟ್ರೋಲಿಯಂ ಟೆರಟರಿ ಮ್ಯಾನೇಜರ್‌ ಸುರೇಶ ಅಲಾಟೆ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಶಶಿಧರ ನೀಲಗಾರ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್‌ ಕಿರಣ್‌ ನಾಯಕ್‌, ಎನ್‌.ಡಿ.ಆರ್‌. ಎಫ್‌ ಇನಸ್ಪೆಕ್ಟರ್‌ ಶಿವಕುಮಾರ, ಸಬ್‌ ಇನಸ್ಪೆಕ್ಟರ್‌ ಶಾಂತಿ ಲಾಲ್‌ ಜಟಿಯಾ, ಬಿಪಿಸಿಎಲ್‌ ರಕ್ಷಣಾ ಅಧಿಕಾರಿ ವಿಮಲ್‌ ಸಿ. ಪಿ, ಐಓಸಿಎಲ್‌ ಡಿಪೋ ಮ್ಯಾನೇಜರ್‌ ಪುನೀತ್‌ ಮುರುಡೇಶ್ವರ ಅಣಕು ಪ್ರದರ್ಶನದಲ್ಲಿ ಉಪಸ್ಥಿತರಿದ್ದರು.

ಈ ಅಣುಕು ಪ್ರದರ್ಶನದಲ್ಲಿ 10 ಅಗ್ನಿಶಾಕದಳದ ಸಿಬ್ಬಂದಿಗಳು, 25 ಗƒಹರಕ್ಷಕ ದಳ, 25 ಎನ್‌.ಡಿ.ಆರ್‌.ಎಫ್‌, 20 ವೈದ್ಯಕೀಯ ಸಿಬ್ಬಂದಿ, ಹೆಸ್ಕಾಂ ಸಿಬ್ಬಂದಿ, 20 ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.