9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ


Team Udayavani, Dec 7, 2022, 4:23 PM IST

9 ಸಾವಿರ ರಸ್ತೆಗಳಿಗೆ ಅಭಿವೃದ್ಧಿ ಭಾಗ್ಯ

ಬೆಂಗಳೂರು: ನಗರದಲ್ಲಿ ಪದೇ ಪದೆ ಸೃಷ್ಟಿಯಾಗುತ್ತಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ. ಈ ಎಲ್ಲದಕ್ಕೂ ಪರಿಹಾರ ನೀಡುವ ಸಲುವಾಗಿ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ 9 ಸಾವಿರಕ್ಕೂ ಹೆಚ್ಚಿನ ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ ರೂಪಿಸುತ್ತಿದೆ.

ಪ್ರಸಕ್ತ ಸಾಲಿನ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ ಬಿಬಿಎಂಪಿಗೆ 6 ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆಯನ್ನೂ ನೀಡಿದೆ. ಅದರಲ್ಲಿ 700ಕೋಟಿ ರೂ. ಮೊತ್ತದಲ್ಲಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮೀಸಲಿರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಅದರ ಜತೆಗೆ 135 ಕೋಟಿ ರೂ.ಗಳನ್ನು ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ ರಸ್ತೆಗಳಅಭಿವೃದ್ಧಿಗೆ ನಿಗದಿ ಮಾಡಲಾಗಿದೆ. ಹೀಗೆ ರಸ್ತೆಮೂಲಸೌಕರ್ಯ ಅಡಿಯಲ್ಲಿ ನಿಗದಿ ಮಾಡಿರುವ700 ಕೋಟಿ ರೂ. ಮೊತ್ತದ ಅನುದಾನದಲ್ಲಿ9,569 ರಸ್ತೆಗಳ ಅಭಿವೃದ್ಧಿಗೆ ಬಿಬಿಎಂಪಿ ಚರ್ಚೆ ನಡೆಸಿದೆ.

ಬಿಬಿಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗದಿಂದ ರೂಪಿಸಲಾಗುತ್ತಿರುವ ಯೋಜನೆಯಂತೆ ನಗರದ ರಸ್ತೆಗಳನ್ನು 2 ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಅದರ ಪ್ರಕಾರ ರಸ್ತೆ ಗುಂಡಿಗಳುಸೃಷ್ಟಿಯಾಗುವುದು, ಪದೇ ಪದೆ ರಸ್ತೆ ಅಗೆದು ಹಾಳು ಮಾಡುವುದನ್ನು ತಪ್ಪಿಸಲು ವೈಟ್‌ಟಾಪಿಂಗ್‌ ಮಾದರಿಯಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳೇ ಹೆಚ್ಚಾಗಿವೆ. ಅದರ ಜತೆಗೆವಾರ್ಡ್‌ ರಸ್ತೆಗಳು ಸೇರಿ ಕೆಲ ಮುಖ್ಯ, ಉಪಮುಖ್ಯ ರಸ್ತೆಗಳನ್ನು ಬಿಟುಮಿನ್‌ ಮಿಕ್ಸ ಬಳಸಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ.

2,177 ಕಿ.ಮೀ. ಉದ್ದದ ರಸ್ತೆಗಳು: ಸದ್ಯ ಬಿಬಿ ಎಂಪಿಯ ರಸ್ತೆ ಮೂಲಸೌಕರ್ಯ ವಿಭಾಗ ಸಿದ್ಧಪಡಿಸಿರುವ ಪಟ್ಟಿಯಂತೆ 371 ಕಿ.ಮೀ. ಉದ್ದದ 2,564 ರಸ್ತೆಗಳನ್ನು ವೈಟ್‌ಟಾಪಿಂಗ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದಂತೆ 1806.39 ಕಿ.ಮೀ. ಉದ್ದದ 7,005 ರಸ್ತೆಗಳನ್ನು ಮರುಡಾಂಬಾರೀಕರಣ ಮಾಡುವ ಮೂಲಕ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಒಟ್ಟಾರೆ 2,177.39 ಕಿ.ಮೀ. ಉದ್ದದ 9,569 ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಟ್ಟಿ ಮಾಡಿಕೊಳ್ಳಲಾಗಿದೆ.

ದಾಸರಹಳ್ಳಿಯ ರಸ್ತೆಗಳ ಪರಿಗಣನೆಯಿಲ್ಲ: ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವಲಯವಾರು ಪಟ್ಟಿಯಲ್ಲಿ ದಾಸರಹಳ್ಳಿ ವಲಯ ವ್ಯಾಪ್ತಿಯ ಯಾವುದೇ ರಸ್ತೆಯನ್ನು ಪರಿಗಣಿಸಿಲ್ಲ. ಆದರೆ, ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿ ದಾಸರಹಳ್ಳಿಯ 47.34 ಕಿ.ಮೀ. ಉದ್ದದ 11 ರಸ್ತೆಗಳನ್ನು ಮರುಡಾಂಬರೀಕರಣ ಮಾಡಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಉಳಿದಂತೆ ಪಶ್ಚಿಮವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು 359.75 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ರೀತಿ ರಸ್ತೆ ಮೂಲಸೌಕರ್ಯ ವಿಭಾಗದ ಅಡಿಯಲ್ಲಿಯೇ 8 ವಲಯಗಳ 477.19 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಅದರಲ್ಲಿ 1.15 ಕಿ.ಮೀ. ಉದ್ದದ ರಸ್ತೆ ಮಾತ್ರವೈಟ್‌ಟಾಪಿಂಗ್‌ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ.

ಟೆಂಡರ್‌ಶ್ಯೂರ್‌ಗೆ 135 ಕೋಟಿ ರೂ. :

ವೈಟ್‌ಟಾಪಿಂಗ್‌ ಮತ್ತು ಡಾಂಬಾರು ರಸ್ತೆಗಳ ಅಭಿವೃದ್ಧಿ ಜತೆಗೆ ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ರಸ್ತೆ ಅಭಿವೃದ್ಧಿಗೆ ಬಿಬಿಎಂಪಿ 135.70ಕೋಟಿ ರೂ. ವ್ಯಯಿಸುತ್ತಿದೆ. ಅದರಲ್ಲಿ 85ಕೋಟಿ ರೂ. ವೆಚ್ಚದಲ್ಲಿ 5 ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಅಡಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಉಳಿದ 50.70 ಕೋಟಿ ರೂ.ಗಳಲ್ಲಿಜಂಕ್ಷನ್‌ಗಳನ್ನು ಟೆಂಡರ್‌ಶ್ಯೂರ್‌ನಿಯಮಾವಳಿಯಂತೆ ಅಭಿವೃದ್ಧಿ ಮತ್ತು ಸುಂದರೀಕರಣ ಮಾಡಲು ನಿರ್ಧರಿಸಲಾಗಿದೆ.

 

-ಗಿರೀಶ್‌ ಗರಗ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.