ಹಿಂದುತ್ವಕ್ಕೆ ರಾಜ್ಯ ಸರಕಾರ ಬದ್ಧ: ಸುನಿಲ್ ಕುಮಾರ್
Team Udayavani, Dec 7, 2022, 11:16 PM IST
ಚಿಕ್ಕಮಗಳೂರು: ರಾಜ್ಯ ಸರಕಾರ ಹಿಂದುತ್ವಕ್ಕೆ ಬದ್ಧವಾಗಿದ್ದು, ಹಿಂದೂಗಳ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತಿದೆ ಎಂದು ಕನ್ನಡ ಸಂಸ್ಕೃತಿ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದತ್ತಾತ್ರೇಯರ ಪಾದುಕೆಗಳ ಪೂಜೆಗೆ ಹಿಂದೂ ಅರ್ಚಕರ ನೇಮಕ ಮಾಡಬೇಕು. ವರ್ಷಪೂರ್ತಿ ಪೂಜೆ ನಡೆಯಬೇಕು. ತ್ರಿಕಾಲ ಪೂಜೆ ನಡೆಯಬೇಕು ಎನ್ನುವುದು ಹಿಂದೂ ಸಂಘಟನೆ ಸೇರಿದಂತೆ ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಬಿಜೆಪಿ ಸರಕಾರ ಹಿಂದೂ ಅರ್ಚಕರ ನೇಮಕಾತಿ ಮಾಡುವ ಮೂಲಕ ಲಕ್ಷಾಂತರ ಹಿಂದೂಗಳ ಮನಸ್ಸಿನ ಭಾವನೆ ಈಡೇರಿಸುವ ಪ್ರಯತ್ನ ಮಾಡಿದೆ. ಹಿಂದೂ ಭಾವನೆಗಳ ಬೇಡಿಕೆ ಈಡೇರಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಹಂತ ಹಂತವಾಗಿ ಪೂರ್ಣಾವಧಿ ಅರ್ಚಕರ ನೇಮಕವಾಗಲಿದೆ. ಯಾರೋ ವಿರೋಧ ಮಾಡುತ್ತಾರೆಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಮುಜರಾಯಿ ದೇವಸ್ಥಾನದಲ್ಲಿ ನಂದಾ ದೀಪ ಬೆಳಗಬೇಕು ಎಂದು ಹೇಳಿದರು.
ಗುಜರಾತ್ ಚುನಾವಣೆ ಫಲಿತಾಂಶದ ಅನಂತರ ರಾಜ್ಯದಲ್ಲಿ ಹೊಸ ಬದಲಾವಣೆ ಆರಂಭವಾಗಲಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ಗೆಲುವು ಸಾಧಿಸುತ್ತೇವೆ. ಅದೇ ಗೆಲುವು ಕರ್ನಾಟಕದಲ್ಲೂ ಮುಂದುವರೆಯುತ್ತದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಗೆ ಟೀಕೆಗಳು ಬಿಟ್ಟರೆ ಒಳ್ಳೆಯ ಸಂಗತಿಗಳು ನೆನಪಿಗೆ ಬರುವುದಿಲ್ಲ. ಕೆಟ್ಟ ಸಂಗತಿಗನ್ನೇ ಅವರು ಉಲ್ಲೇಖ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್