ಬೇಲ್‌ಗೆ ನೆರವಾಗದ್ದಕ್ಕೆ ವಕೀಲರ ಟಾರ್ಗೆಟ್‌; ಜೈಲಿನಲ್ಲಿದ್ದ ವೇಳೆ ಜಾಮೀನು ನೀಡಲು ಸಹಕರಿಸದ್ದಕ್ಕೆ ಪ್ರತೀಕಾರ


Team Udayavani, Dec 8, 2022, 3:22 PM IST

4

ಬೆಂಗಳೂರು: ವಕೀಲರನ್ನು ಟಾರ್ಗೆಟ್‌ ಮಾಡಿ ಸುಲಿಗೆ ಮಾಡುತ್ತಿದ್ದ ಹಾಗೂ 25ಕ್ಕೂ ಹೆಚ್ಚು ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಮಂಜೂರ್‌ ಅಲಿಯಾಸ್‌ ದೂನ್‌ನನ್ನು ಬಂಧಿಸಲಾಗಿದೆ.

ಇದೇ ವೇಳೆ ಕಾನೂನು ಸಂಘರ್ಷಕ್ಕೊಳಗಾದ ಆತನ ಪುತ್ರನನ್ನು ದೇವರ ಜೀವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಘರ್ಷಕ್ಕೊಳಗಾದ ಪುತ್ರನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 14 ಲಕ್ಷ ರೂ. ಮೌಲ್ಯದ ಕಾರು, ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳಾದ ಅಬ್ದುಲ್‌ ಸೇರಿ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕಳೆದ ಸೋಮವಾರ ತಡರಾತ್ರಿ 12 ಗಂಟೆ ಸುಮಾರಿಗೆ ದೂರುದಾರ ಶ್ರೀಆಷ್ಪಾಕ್‌ ಅಹಮದ್‌ ಎಂಬುವರು ಕುಟುಂಬ ಸಮೇತ ಕನಕನಗರದಿಂದ ವಾಪಸ್‌ ಜೋಸೇಫ್ ರೆಡ್ಡಿ ಲೇಔಟ್‌ನಲ್ಲಿರುವ ಮನೆಗೆ ಹೋಗುತ್ತಿದ್ದರು. ಆಗ ನಾಲ್ವರು ಆರೋಪಿಗಳು ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಾರು, ಮೊಬೈಲ್‌ ಕಳವು ಮಾಡಿದ್ದರು. ಈ ಸಂಬಂಧ ಶ್ರೀಆಷ್ಪಾಕ್‌ ದೂರು ನೀಡಿದ್ದರು. ತಡರಾತ್ರಿಯೇ ಠಾಣಾಧಿಕಾರಿ ಪ್ರಕಾಶ್‌ ನೇತೃತ್ವದ ತಂಡ ಆರೋಪಿಗಳ ಪತ್ತೆ ಕಾರ್ಯಕ್ಕೆ ಮುಂದಾದಾಗ, ಮಂಜೂರ್‌ ಮಾಹಿತಿ ಲಭ್ಯವಾಗಿ ಆತನ ಅಡಗಿರುವ ಸ್ಥಳದ ಮೇಲೆ ದಾಳಿ ನಡೆಸಿ ಕಾರು ಪತ್ತೆಯಾ ಗಿದೆ. ಬಳಿಕ ಅಪ್ಪ-ಮಗನನ್ನು ಬಂಧಿಸಲಾಗಿತ್ತು.

ವಕೀಲರೇ ಟಾರ್ಗೆಟ್‌: ಶಿವಾಜಿನಗರದ ರೌಡಿಶೀಟರ್‌ ಆಗಿರುವ ಮಂಜೂರ್‌ ವಿರುದ್ಧ 25ಕ್ಕೂ ಹೆಚ್ಚು ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. “ತಾನೂ ಜೈಲಿಗೆ ಹೋದಾಗ, ಬಿಡುಗಡೆ ಮಾಡಲು ವಕೀಲರು ನೆರವು ನೀಡುತ್ತಿರಲಿಲ್ಲ’. ಹೀಗಾಗಿ ವಕೀಲರನ್ನು ಗುರಿಯಾಗಿಸಿಕೊಂಡು ಅವರ ಕಾರು, ಇತರೆ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ಆದರಿಂದ ಆರೋಪಿ, ದೂರುದಾರರಾದ ಶ್ರೀಆಷ್ಪಾಕ್‌ ಸಹ ವಕೀಲರಾಗಿದ್ದರಿಂದ ಅವರನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದರು.

ರಾಜಕೀಯ ಮುಖಂಡರ ಹೆಸರು ಬಳಕೆ: 2018ರಲ್ಲಿ ಕೇಂದ್ರದ ಮಾಜಿ ಸಚಿವ ಜಾಫ‌ರ್‌ ಶರೀಫ್ ಅವರ ಮೊಮ್ಮಗ ರೆಹಮಾನ್‌ ಹೆಸರು ಹೇಳಿಕೊಂಡು ಆರೋಪಿ ಮಂಜೂರ್‌, ಮಾಜಿ ಕಾರ್ಪೋರೆಟರ್‌ ಮುಜಾಫ‌ರ್‌ಗೆ ಕರೆ ಮಾಡಿ, “ಮಂಜೂರ್‌ ನಮ್ಮ ತಾತ ಜಾಫ‌ರ್‌ ಷರೀಫ್ ಅವರಿಗೆ ಸಾಕಷ್ಟು ಕೆಲಸ ಮಾಡಿದ್ದಾನೆ. ಸದ್ಯ ಆತ ಜೈಲು ಸೇರಿದ್ದಾನೆ. ಆತನಿಗೆ ಸಹಾಯ ಮಾಡುವಂತೆ’ ಕೋರಿದ್ದ. ಅದರಿಂದ ಮಾಜಿ ಕಾರ್ಪೋರೆಟರ್‌ ಆರೋಪಿಗೆ 50 ಸಾವಿರ ರೂ. ನಗದು ಮತ್ತು ಚಿನ್ನದ ಸರ ನೀಡಿದ್ದರು. ಹೀಗೆ ರಾಜಕೀಯ ಮುಖಂಡರ ಸಂಬಂಧಿ ಎಂದು ಹೇಳಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ರೌಡಿಶೀಟರ್‌ ಮಂಜೂರ್‌ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವಾರು ಕೇಸ್‌ಗಳಿವೆ. ಕೆಲವರು ಈತನ ಭಯದಿಂದ ದೂರು ನೀಡಿಲ್ಲ. ಇದೀಗ ಆರೋಪಿ ಬಂಧಿಸಲಾಗಿದೆ. ವಂಚನೆ ಅಥವಾ ಸುಲಿಗೆಗೊಳಗಾದ ವ್ಯಕ್ತಿಗಳು ದೂರು ನೀಡಬಹುದು. ●ಭೀಮಾಶಂಕರ್‌ ಗುಳೇದ್‌, ಪೂರ್ವ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.