ಜನಾದೇಶವನ್ನು ಒಪ್ಪುತ್ತೇನೆ, ಶೀಘ್ರವೇ ರಾಜೀನಾಮೆ ನೀಡುತ್ತೇನೆ: ಹಿಮಾಚಲ ಸಿಎಂ ಠಾಕೂರ್
Team Udayavani, Dec 8, 2022, 4:13 PM IST
ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದ್ದು, ಅಧಿಕಾರ ಪಡೆಯುವತ್ತ ನಾಗಾಲೋಟ ಮುಂದುವರಿಸಿದೆ. ಇದೇ ವೇಳೆ ಕಳೆದೈದು ವರ್ಷ ಅಧಿಕಾರ ನಡೆಸಿದ್ದ ಬಿಜೆಪಿ ನಿರೀಕ್ಷಿತ ಸಾಧನೆ ಮಾಡದೆ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ.
ಅಧಿಕಾರ ಕಳೆದುಕೊಳ್ಳುವ ಬಗ್ಗೆ ಸ್ಪಷ್ಟ ಸೂಚನೆ ದೊರೆತ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
“ನಾನು ಜನರ ಆದೇಶವನ್ನು ಗೌರವಿಸುತ್ತೇನೆ. ಕಳೆದ 5 ವರ್ಷಗಳಿಂದ ಪ್ರಧಾನಿ ಮತ್ತು ಇತರ ಕೇಂದ್ರ ನಾಯಕತ್ವಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಜಕೀಯವನ್ನು ಲೆಕ್ಕಿಸದೆ ರಾಜ್ಯದ ಅಭಿವೃದ್ಧಿಗೆ ನಿಲ್ಲುತ್ತೇವೆ. ನಾವು ನಮ್ಮ ನ್ಯೂನತೆಗಳನ್ನು ವಿಶ್ಲೇಷಿಸುತ್ತೇವೆ ಮತ್ತು ಮುಂದಿನ ಅವಧಿಯಲ್ಲಿ ಸುಧಾರಿಸುತ್ತೇವೆ” ಎಂದು ಠಾಕೂರ್ ಹೇಳಿದರು.
ಇದನ್ನೂ ಓದಿ:ಹಿಮಾಚಲದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಅಭ್ಯರ್ಥಿ?
ಇಂದಿನ ಫಲಿತಾಂಶಗಳ ಘೋಷಣೆಯ ನಂತರ ಚಂಡೀಗಢದಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಎಲ್ಲಾ ಹೊಸದಾಗಿ ಚುನಾಯಿತ ಶಾಸಕರ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ