ಏಳು ಸುತ್ತಿನ ಕೋಟೆಯಲ್ಲಿ ಶ್ರದ್ಧಾ ಭಕ್ತಿಯ ಉಯ್ಯಾಲೆ ಉತ್ಸವ

ಸಂಜೆವರೆಗೆ ನಡೆದ ದೇವಿಯ ಉಯ್ಯಾಲೆ ಉತ್ಸವವನ್ನು ಕಣ್ತುಂಬಿಕೊಂಡರು.

Team Udayavani, Dec 8, 2022, 5:59 PM IST

ಏಳು ಸುತ್ತಿನ ಕೋಟೆಯಲ್ಲಿ ಶ್ರದ್ಧಾ ಭಕ್ತಿಯ ಉಯ್ಯಾಲೆ ಉತ್ಸವ

ಚಿತ್ರದುರ್ಗ: ನಗರದ ಐತಿಹಾಸಿಕ ಏಳು ಸುತ್ತಿನ ಕೋಟೆಯಲ್ಲಿ ನೆಲೆಗೊಂಡಿರುವ ಶ್ರೀ ಏಕನಾಥೇಶ್ವರಿ ದೇವಿಗೆ ಬಂಗಾರದ ಮುಖ ಪದ್ಮ ಲೋಕಾರ್ಪಣೆ ಹಿನ್ನೆಲೆಯಲ್ಲಿ ಬುಧವಾರ ಗಣಹೋಮ ಹಾಗೂ ಉಯ್ಯಾಲೆ ಉತ್ಸವ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.

ಕೋಟೆಯೊಳಗಿನ ಮೇಲುದುರ್ಗದ ಶ್ರೀ ಏಕನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ರಾಜ ವಂಶಸ್ಥರ ಸಂಪ್ರದಾಯದಂತೆ ದಶಕಗಳ ನಂತರ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರಿಗೆ ಉಯ್ಯಾಲೆ ಉತ್ಸವ ವೈಭವೋಪೇತವಾಗಿ ಜರುಗಿತು.

ವಿವಿಧ ಸೌಗಂಧಭರಿತ ಪುಷ್ಪಗಳಿಂದ ಮನಮೋಹಕವಾಗಿ ಅಲಂಕಾರ ಮಾಡಲಾಗಿದ್ದ ದೇವಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ಹಾಗೂ ಉಧೋ ಉಧೋ ಎಂಬ ಭಕ್ತ ಉದ್ಘಾರಗಳೊಂದಿಗೆ ಉಯ್ನಾಲೆ ಕಂಬದ ಬಳಿ ಕರೆತರಲಾಯಿತು. ಅಲಂಕೃತ ಉಯ್ನಾಲೆಯಲ್ಲಿ ಪ್ರತಿಷ್ಠಾಪಿಸಲಾಯಿತು. ಈ ವೇಳೆ ನಾದಸ್ವರದ ನಿನಾದ, ಕಹಳೆಯ ನಾದದೊಂದಿಗೆ ಕರಡಿ ಚಮ್ಮಾಳ, ಉರುಮೆ ಸೇರಿದಂತೆ ನಾನಾ ಜಾನಪದ ಕಲಾ ಪ್ರಕಾರಗಳು ಮೇಲೈಸಿದವು.

ತ್ರಿಪುರ ಸುಂದರಿ ಶ್ರೀ ತಿಪ್ಪಿನಘಟ್ಟಮ್ಮ ದೇವಿಯ ಉತ್ಸವ ಮೂರ್ತಿಯನ್ನು ಮೇಲುದುರ್ಗಕ್ಕೆ ಕರೆತಂದು ಸುಂದರವಾಗಿ ಅಲಂಕರಿಸಲಾಗಿತ್ತು. ಇದಕ್ಕೂ ಮುನ್ನ ದೇವಸ್ಥಾನದ ಆವರಣದಲ್ಲಿ ದೇವಿಗೆ ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ಅರುಣ ಭಟ್ಟರು ಮತ್ತು ಸಂಗಡಿಗರಿಂದ ಗಣಹೋಮ, ಚಂಡಿಕಾ ಹೋಮ ಮತ್ತು ಅಭಿಷೇಕ ನೆರವೇರಿತು.

ಬಂಗಾರದ ಹೊಸ ಮುಖ ಪದ್ಮಕ್ಕೆ ಬಂಗಾರ ನೀಡಿದ ದಾನಿಗಳಿಗೆ ಗೌರವ ಸಮರ್ಪಿಸಲಾಯಿತು. ಹೋಮ ಹಾಗೂ ಉಯ್ನಾಲೆ ಉತ್ಸವದ ಅಂಗವಾಗಿ ಗರ್ಭಗುಡಿಯ ಮೂರ್ತಿಗೂ ಮನಮೋಹಕವಾಗಿ ಸಿಂಗರಿಸಲಾಗಿತ್ತು. ಕೋಟೆಯೊಳಗಿನ ಗಣಪತಿ ಮೂರ್ತಿಗೂ ಸಕಲಾಭರಣ ಹಾಗೂ ಪುಷ್ಪಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.

ಬುರುಜನಹಟ್ಟಿ, ಜೋಗಿಮಟ್ಟಿ ರಸ್ತೆ, ಕಾಮನಬಾವಿ ಬಡಾವಣೆ ಸೇರಿದಂತೆ ನಗರದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಮೇಲುದುರ್ಗಕ್ಕೆ ಭೇಟಿ ನೀಡಿ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ದೇವಿಯ ಉಯ್ಯಾಲೆ ಉತ್ಸವವನ್ನು ಕಣ್ತುಂಬಿಕೊಂಡರು. ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಮಂಗಳವಾರ ಬ್ರಾಹ್ಮಿ ಮುಹೂರ್ತದಲ್ಲಿ ಚಿತ್ರದುರ್ಗದ ಆಡುಮಲ್ಲೇಶ್ವರದ ಹಿಮವತ್‌ ಕೇದಾರದಲ್ಲಿ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇವಿಯ ಹಾಗೂ ಶ್ರೀ ಏಕನಾಥೇಶ್ವರಿ ಅಮ್ಮನವರ ಹೊಸ ಮುಖ ಪದ್ಮದ ಮೆರವಣಿಗೆಯೊಂದಿಗೆ ಗಂಗಾಪೂಜೆ ನೆರವೇರಿಸಲಾಯಿತು. ಡಿ. 8ರಂದು ಬೆಳಗ್ಗೆ 9ರಿಂದ ಶ್ರೀ ಏಕನಾಥೇಶ್ವರಿ ಪಾದಗುಡಿಯಿಂದ ಐತಿಹಾಸಿಕ ಚಿತ್ರದುರ್ಗ ನಗರದ ರಾಜಬೀದಿ ಹಾಗೂ ಪ್ರಮುಖ ಬೀದಿಗಳಲ್ಲಿ ಶ್ರೀ ಏಕನಾಥೇಶ್ವರಿ ಅಮ್ಮನವರ ಜತೆಯಲ್ಲಿ ನವದುರ್ಗೆಯರು ಸೇರಿದಂತೆ ನಗರದ ಮತ್ತಿತರ ಪ್ರಮುಖ ದೇವತೆಯರ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.