ದ.ಕ.: ಮತದಾರರ ಪಟ್ಟಿಯಿಂದ  21,537 ಮೃತರ ಹೆಸರು ರದ್ದು


Team Udayavani, Dec 9, 2022, 8:20 AM IST

ದ.ಕ.: ಮತದಾರರ ಪಟ್ಟಿಯಿಂದ  21,537 ಮೃತರ ಹೆಸರು ರದ್ದು

ಮಂಗಳೂರು: ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕಾರ್ಯ ನಡೆದಿರಲಿಲ್ಲ, ಅದನ್ನು ಈ ಬಾರಿ ನಡೆಸಲಾಗುತ್ತಿದೆ. ಈಗಾಗಲೇ 21,537 ಮಂದಿ ಮೃತರ ಹೆಸರನ್ನು ತೆರವು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

2022ರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯ ಅನಂತರ 29,410 ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದ್ದರೆ, ಆ ಅವಧಿಯಲ್ಲಿ 73,783 ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರಲ್ಲಿ 21,537 ಹೆಸರುಗಳನ್ನು ಮರಣ ಹೊಂದಿದ ಕಾರಣಕ್ಕೆ, 30580 ಮಂದಿಯ ಹೆಸರನ್ನು ಅವರು ಬೇರೆಡೆಗೆ ಸ್ಥಳಾಂತರಗೊಂಡಿರುವ ಕಾರಣಕ್ಕೆ ಮತ್ತು 21,666 ಹೆಸರುಗಳನ್ನು ಅವರ ಹೆಸರು ಅಥವಾ ಫೋಟೋ ಒಂದೇ ರೀತಿ ಇದ್ದ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದರು.

ಮರಣ ಪ್ರಮಾಣ ಪತ್ರ ದಾಖಲೆಗಳನ್ನು ನೀಡದ ಕಾರಣ ಮತದಾರರ ಪಟ್ಟಿಯಲ್ಲಿ ಉಳಿದಿದ್ದ ಹೆಸರುಗಳನ್ನು ತೆಗೆದು ಹಾಕುವಂತೆ ರಾಜಕೀಯ ಪಕ್ಷಗಳ ಮೂಲಕವೂ ಒತ್ತಾಯ ಬಂದಿತ್ತು. ಅದರಂತೆ ನಗರ ಮಟ್ಟದಲ್ಲಿ ಹಾಗೂ ಗ್ರಾಮಾಂತರದಲ್ಲಿ ಮೃತಪಟ್ಟವರ ಕುಟುಂಬದವರು ಪ್ರಮಾಣ ಪತ್ರ ನೀಡದಿದ್ದರೆ, ಅಧಿಕಾರಿಗಳೇ ಡೌನ್‌ಲೋಡ್‌ ಮಾಡಿಕೊಂಡು ಅದನ್ನು ಅಟ್ಯಾಚ್‌ ಮಾಡಿಕೊಂಡು ಹೆಸರು ರದ್ದುಪಡಿಸಲಾಗುವುದು ಎಂದು ವಿವರಿಸಿದರು.

63,829 ಆಕ್ಷೇಪಣೆ ಸಲ್ಲಿಕೆ:

ಮತದಾರರ ಪಟ್ಟಿ ಪರಿಷ್ಕರಣೆಯಂತೆ 2022ರ ನವೆಂಬರ್‌ 9ರಿಂದ ಡಿಸೆಂಬರ್‌ 7ರ ವರೆಗೆ 63,829 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇದರಲ್ಲಿ ಈಗಾಗಲೇ 16,065 ಅರ್ಜಿಗಳ ಕ್ಷೇತ್ರ ಪರಿಶೀಲನೆಗೆ ವಹಿಸಲಾಗಿದ್ದು, 1,449 ಅರ್ಜಿಗಳು ತಿರಸ್ಕೃತಗೊಂಡಿವೆ. 8,173 ಅರ್ಜಿಗಳು ಸ್ವೀಕೃತಗೊಂಡಿವೆ ಎಂದು ಡಿಸಿ ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಈ ಹಿಂದೆ ಪ್ರಕಟಿಸಲಾದ ಕರಡು ಮತದಾರರ ಪಟ್ಟಿ ಅನುಸಾರ 18ರಿಂದ 20 ವರ್ಷ ವಯಸ್ಸಿನ 9,925 ಹೊಸ ಮತದಾರರಿದ್ದು, ಪರಿಷ್ಕರಣೆಯ ಸಂದರ್ಭ 21,000 ಮಂದಿಯಿಂದ ಅರ್ಜಿ ಬಂದಿದೆ. ಅದನ್ನು ಪರಿಶೀಲನೆ ಮಾಡಲಾಗುತ್ತಿದೆ. ಎರಡೆರಡು ಕ್ಷೇತ್ರಗಳಲ್ಲಿ ಮತದಾರರ ಚೀಟಿಯನ್ನು ಹೊಂದಿದ 27 ಪ್ರಕರಣಗಳನ್ನು ಗುರುತಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಮತದಾರರ ಹೆಸರು ಡಿಲೀಟ್‌ ಆಗಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಈಗಾಗಲೇ ರಾಜಕೀಯ ಪಕ್ಷಗಳಿಂದ ಕರಡು ಮತದಾರರ ಪಟ್ಟಿ ಪರಿಶೀಲಿಸಿ ಅರ್ಹ ಮತದಾರರು ಇರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಚುನಾವಣೆ ದಿನದಂದು ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.