ರಾಜ್ಯಪಾಲ ಗೆಹ್ಲೋಟ್ ಅಂಜನಾದ್ರಿ ಭೇಟಿ; ಪೂಜೆ ನೆರವೇರಿಸುವ ಕುರಿತು ಅರ್ಚಕ-ಅಧಿಕಾರಿಗಳ ಮಧ್ಯೆ ವಾಗ್ವಾದ
Team Udayavani, Dec 9, 2022, 11:59 AM IST
ಗಂಗಾವತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ತಾಲೂಕಿನ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿಗೆ ಭೇಟಿ ನೀಡಿ ಶ್ರೀ ಆಂಜನೇಯಸ್ವಾಮಿ ದರ್ಶನ ಪಡೆದರು. ರಾಜ್ಯಪಾಲರು ಆಗಮಿಸುವ ಅರ್ಧ ಗಂಟೆಗೂ ಮುಂಚೆ ಪೂಜೆ ನೆರವೇರಿಸುವ ಕುರಿತು ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಮತ್ತು ಅಧಿಕಾರಿಗಳ ಮಧ್ಯೆ ಕೆಲಹೊತ್ತು ವಾಗ್ದಾದ ನಡೆದು ಬಾಬಾ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿ ಹೊರಗೆ ಕಳಿಸಿದ ಘಟನೆ ನಡೆಯಿತು.
ರಾಜ್ಯಪಾಲ ಗೆಹ್ಲೋಟ್ ಅವರು ಅಂಜನಾದ್ರಿಯ ಬೆಟ್ಟದ ಕೆಳಗಿನ ಬಲಭಾಗದಲ್ಲಿರುವ ಪಾದಗಟ್ಟೆ ಶ್ರೀ ಆಂಜನೇಯಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸುವ ವ್ಯವಸ್ಥೆ ಮಾಡಲಾಗಿತ್ತು. ದೇಗುಲದ ಕಮಿಟಿ ಕೆಳಗೆ ಪೂಜೆ ನೆರವೇರಿಸಲು ಅನ್ಯ ಪುರೋಹಿತರನ್ನು ನಿಯೋಜನೆ ಮಾಡಿದ್ದನ್ನು ವಿರೋಧಿಸಿ ತಾವು ಅಂಜನಾದ್ರಿಯ ಅರ್ಚಕರಾಗಿ ಎರಡು ದಶಕಗಳಿಂದ ಪೂಜೆ ಮಾಡುತ್ತಿದ್ದು, ಧಾರವಾಡ ಹೈಕೋರ್ಟ್ ಪೂಜೆ ಮಾಡಲು ಅವಕಾಶ ಕಲ್ಪಿಸುವ ಅವಕಾಶ ನೀಡಿದೆ. ಅಧಿಕಾರಿಗಳು ಹೈಕೋರ್ಟ್ ಆದೇಶ ಉಲ್ಲಂಘಿಸಿ ಅನ್ಯರನ್ನು ರಾಜ್ಯಪಾಲರು ಆಗಮಿಸುವ ಸಂದರ್ಭ ಪೂಜೆ ಮಾಡಲು ನಿಯೋಜನೆ ಮಾಡಲಾಗಿದೆ. ಈ ಕಾರಣ ಅರ್ಚಕ ತಾವೇ ಪೂಜೆ ಮಾಡುವುದಾಗಿ ಹಠ ಹಿಡಿದ ಸಂದರ್ಭದಲ್ಲಿ ಎಸಿ ಹಾಗೂ ದೇಗುಲ ಕಮಿಟಿ ಆಡಳಿತಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಹಾಗೂ ಸಿಪಿಐ ಮಂಜುನಾಥ ಮಧ್ಯೆ ಪ್ರವೇಶ ಮಾಡಿದಾಗ ಅರ್ಚಕ ಬಾಬಾ ಹಾಗೂ ಅಧಿಕಾರಿಗಳ ಮಧ್ಯೆ ವಾಗ್ದಾದ ನಡೆಯಿತು.
ಪೊಲೀಸರು ವಿದ್ಯಾದಾಸ ಬಾಬಾ ಅವರನ್ನು ಎತ್ತಿಕೊಂಡು ಹೋಗಿ ಬೇರೆ ಸ್ಥಳಕ್ಕೆ ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ