ಡಿ.ಕೆ.ಶಿವಕುಮಾರ್ ಕೂಡ ಹೆಣಗಾಡುತ್ತಿದ್ದಾರೆ : ಡಾ.ಜಿ.ಪರಮೇಶ್ವರ್ ಹೇಳಿಕೆ
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತತ 8ವರ್ಷಗಳ ಕಾಲ ನಿಭಾಯಿಸಿದ್ದೆ
Team Udayavani, Dec 9, 2022, 10:11 PM IST
ಕೊರಟಗೆರೆ: ”ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತತವಾಗಿ 8ವರ್ಷಗಳ ಕಾಲ ಕುಳಿತು ನಿಭಾಯಿಸಿದ್ದೇನೆ.ಅದು ಅಷ್ಟು ಸುಲಭವಾದ ಮಾತಲ್ಲ. ಕಾಂಗ್ರೆಸ್ ಪಕ್ಷ ಅಷ್ಟು ಜವಾಬ್ದಾರಿಯನ್ನು ನನ್ನ ಮೇಲೆ ನಂಬಿಕೆ ಇಟ್ಟು ನೀಡಿತ್ತು.ಇಡೀ ರಾಜ್ಯದಲ್ಲಿ ಪಕ್ಷದ ಆಗು ಹೋಗುಗಳನ್ನು ನಿಭಾಯಿಸಲು ಡಿ.ಕೆ.ಶಿವಕುಮಾರ್ ಕೂಡ ಹೆಣಗಾಡುತ್ತಿದ್ದಾರೆ” ಎಂದು ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ರಂಗನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಗಳ ಶಂಕುಸ್ಥಾಪನೆ ಮಾಡಿ ಮಾತನಾಡಿ,” 2018 ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನನ್ನು ಮತ್ತೆ ಆಯ್ಕೆ ಮಾಡಿದಾಗ ರಾಜ್ಯದ ಉಪಮುಖ್ಯಮಂತ್ರಿಯಾದೆ, ಕ್ಷೇತ್ರಕ್ಕೆ ಸಾಕಷ್ಟು ಅಭಿವೃದಿ ಕೆಲಸಗಳನ್ನು ಮಾಡಿದೆ, ನಮ್ಮ ಸಮ್ಮಿಶ್ರ ಸರ್ಕಾರ ಪತನವಾದರೂ ಸಹ ಕ್ಷೇತ್ರದ ಅಭಿವೃದಿಯನ್ನು ನಿಲ್ಲಿಸದೇ ಸಾಕಷ್ಟು ಶ್ರಮವಹಿಸಿದ್ದೇನೆ” ಎಂದರು.
”ಹಲವಾರು ಗ್ರಾಮಗಳಲ್ಲಿ ಅಭಿವೃದ್ದಿ ಕೆಲಸಗಳು ಆಗಬೇಕಿವೆ, ನನ್ನ ಅಭಿವೃದ್ದಿ ಕೆಲಸಗಳನ್ನು ಕ್ಷೇತ್ರದ ಜನರ ಮನೆ ಬಾಗಿಲಿಗೆ ತಲುಪಿಸುತ್ತೇನೆ. ನಾನು ಮಧುಗಿರಿಯಲ್ಲಿ 20 ವರ್ಷ, ಕೊರಟಗೆರೆ ಕ್ಷೇತ್ರದಲ್ಲಿ15 ವರ್ಷ ರಾಜಕೀಯ ಮಾಡಿ ಜನರ ಒಡನಾಟ ಹೊಂದಿದ್ದೇನೆ. ಆದರೆ ಇತ್ತೀಚೆಗೆ ರಾಜಕೀಯಕ್ಕೆ ಕೆಲವರು ಜನರ ಬಳಿ ನೃತ್ಯಗಳನ್ನು ಮಾಡಲು ಬರುತ್ತಿದ್ದಾರೆ. ಜನರು ಅದನ್ನು ತೀರ್ಮಾನಿಸುತ್ತಾರೆ. ಕ್ಷೇತ್ರದ ಜನರ ಋಣ ತೀರಿಸುವ ಕೆಲಸವನ್ನು ಮಾಡುತ್ತಿದ್ದೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!