ದೇಗುಲಗಳಲ್ಲಿ ಸಲಾಂ ಆರತಿ ಬದಲು ಆರತಿ ನಮಸ್ಕಾರ; ಟಿಪ್ಪು ಕಾಲದ ಪದ್ಧತಿ ಕೈಬಿಡಲು ನಿರ್ಧಾರ

ಧಾರ್ಮಿಕ ಪರಿಷತ್‌ ನಿರ್ಣಯ, ಶೀಘ್ರ ಸುತ್ತೋಲೆ

Team Udayavani, Dec 10, 2022, 7:15 AM IST

ದೇಗುಲಗಳಲ್ಲಿ ಸಲಾಂ ಆರತಿ ಬದಲು ಆರತಿ ನಮಸ್ಕಾರ; ಟಿಪ್ಪು ಕಾಲದ ಪದ್ಧತಿ ಕೈಬಿಡಲು ನಿರ್ಧಾರ

ಮಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇಗುಲ ಗಳಲ್ಲಿ ಟಿಪ್ಪು ಆಳ್ವಿಕೆ ಸಂದರ್ಭ ಜಾರಿಗೆ ತಂದಿದ್ದ “ದೀವಟಿಗೆ ಸಲಾಂ’ ಎಂಬ ಪದವನ್ನು ಕೈಬಿಡಲು ಇಲಾಖೆ ತೀರ್ಮಾನಿಸಿದೆ.

ಈ ಕುರಿತು ಈಗಾಗಲೇ ಧಾರ್ಮಿಕ ಪರಿಷತ್‌ ಅಂತಿಮ ನಿರ್ಣಯ ಕೈಗೊಂಡಿದ್ದು, “ಸಲಾಂ ಆರತಿ’ ಪದದ ಬದಲಾಗಿ “ಆರತಿ ನಮಸ್ಕಾರ’ ಹಾಗೂ “ಸಲಾಂ ಮಂಗಳಾ ರತಿ’ ಬದಲು “ಮಂಗಳಾರತಿ ನಮಸ್ಕಾರ’ ಎಂದು ಹೆಸರು ಬದಲಾಯಿಸಿ, ಸೇವೆಗಳನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ತೀರ್ಮಾನಿಸಿದೆ. ಈ ಬಗ್ಗೆ ಇಲಾಖೆಯಿಂದ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು.

ಸಲಾಂ ಪದವು ಸಂಸ್ಕೃತ ಭಾಷೆಯದ್ದಲ್ಲ, ಹಾಗಾಗಿ ಹಿಂದೂ ಧಾರ್ಮಿಕ ದತ್ತಿ ದೇವಾ ಲಯಗಳಲ್ಲಿ ಸಂಸ್ಕೃತ ಪದಗಳಿಂದ ಹೇಗೆ ದೇವರ ಸೇವೆಗಳನ್ನು ನಡೆಸಲಾಗುತ್ತದೆಯೋ ಅದೇ ರೀತಿ ಸಲಾಂ ಬದಲಿಗೆ ಬೇರೆ ಸಂಸ್ಕೃತ ಪದವನ್ನು ಬಳಸಬೇಕು ಎಂದು ಪರಿಷತ್‌ ಸದಸ್ಯರು ಹೇಳಿದ್ದರು.

ಈ ಬಗ್ಗೆ ಆಗಮ ಪಂಡಿತರೊಂದಿಗೆ ಕೂಡ ಚರ್ಚಿಸಲಾಗಿದ್ದು, ಯಾವುದೇ ಪೂಜಾ ವಿಧಿ ವಿಧಾನಗಳಲ್ಲಿ, ಸೇವಾ ಕಾರ್ಯಗಳಲ್ಲಿ ಬದಲಾವಣೆ ಯಾಗುವುದಿಲ್ಲ. ಎಲ್ಲ ಸೇವಾ ಕಾರ್ಯಗಳು ಹಿಂದಿನಿಂದ ನಡೆದು ಬಂದ ರೂಢಿ, ಸಂಪ್ರದಾಯ ಪದ್ಧತಿ ಯಂತೆಯೇ ನಡೆಯುತ್ತವೆ. “ಸಲಾಂ’ ಪದ ಮಾತ್ರ ಕಳಚಿಕೊಂಡು ನಮಸ್ಕಾರ ಎಂಬ ಸಂಸ್ಕೃತ ಪದವನ್ನು ಬಳಸಿಕೊಳ್ಳಲಾಗುತ್ತದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯಾದ್ಯಂತ ಈ ಆಚರಣೆ ಇದೆ.

“ಮುಜರಾಯಿ’ ಪದ ಬಳಕೆಯೂ ಬೇಡ
ಪರ್ಷಿಯನ್‌ ಪದವಾದ “ಮುಜರಾಯಿ’ ಬಳಕೆಯನ್ನು ಕೂಡ ಹಿಂದೆಯೇ ಕೈಬಿಡಲಾಗಿತ್ತು. ಆದರೂ ಈಗಲೂ ಅದು ರೂಢಿ ಯಲ್ಲಿದೆ. ಆದರೆ ಇನ್ನು ಮುಂದೆ ಆ ಪದ ಬಳಕೆ ಮಾಡಬಾರದು. “ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿ ಇಲಾಖೆ’ ಎಂದೇ ಕರೆಯಬೇಕು ಎಂಬ ಸುತ್ತೋಲೆಯನ್ನೂ ಕಳುಹಿಸಲು ತೀರ್ಮಾನಿಸಲಾಗಿದೆ.

” ದೀವಟಿಗೆ ಸಲಾಂ’ ಎನ್ನುವುದು ಟಿಪ್ಪು ಸುಲ್ತಾನ್‌ ಆಡಳಿತದ ಸಂದರ್ಭ ಇದ್ದ ಆಚರಣೆ. ಹೊಸ ತೀರ್ಮಾನ ದಂತೆ ಇನ್ನು ಮುಂದೆ ನಮ್ಮ ರಾಜ್ಯವನ್ನಾಳುವವರು ಹಾಗೂ ಜನತೆಗೆ ಒಳಿತಾಗಲಿ ಎಂಬ ಆಶಯದೊಂದಿಗೆ ಈ ಪ್ರಕ್ರಿಯೆ ಮುಂದುವರಿಯುತ್ತದೆ. ಪದ್ಧತಿಯ ಹೆಸರು ಮಾತ್ರ “ಆರತಿ ನಮಸ್ಕಾರ’ ಎಂದಿರುತ್ತದೆ. ಶೀಘ್ರವೇ ಇದರ ಸುತ್ತೋಲೆ ದೇವಾಲಯಗಳಿಗೆ ತಲಪಲಿದೆ.
– ಕಶೆಕೋಡಿ ಸೂರ್ಯನಾರಾಯಣ ಭಟ್‌,
ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯರು

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.