ಕೊನೆಗೂ ಸೆರೆಯಾದ ಮೂಡಿಗೆರೆಯ ಜನರ ನಿದ್ದೆಗೆಡಿಸಿದ್ದ ಭೈರ


Team Udayavani, Dec 11, 2022, 7:32 PM IST

1-adadadad

ಚಿಕ್ಕಮಗಳೂರು : ಮೂಡಿಗೆರೆ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಭೈರ ಕೊನೆಗೂ ಭಾನುವಾರ ಸೆರೆಯಾಗಿದ್ದಾನೆ.

ಮೂಡಿಗೆರೆ ತಾಲೂಕಿನ ಊರಬಗೆ ಸಮೀಪ ಭೈರ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಚರಣೆಗೆ ಇಳಿದ ಅರಣ್ಯ ಇಲಾಖೆ ಸಂಜೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತಿಂಗಳ ಹಿಂದೆ ಭೈರನಿಗಾಗಿ ಕಾರ್ಯಚರಣೆ ನಡೆಸಲಾಗಿತ್ತು, ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಕಾಡಿನತ್ತ ಮುಖ ಮಾಡಿದ್ದರಿಂದ ಕಾರ್ಯಾಚರಣೆ ವಿಫಲವಾಗಿ ಜನರು ಆತಂಕದಲ್ಲೇ ದಿನಕಳೆಯುವಂತೆ ಆಗಿತ್ತು. ಭೈರನ ಸೆರೆ ಕಾರ್ಯಾಚರಣೆ ಕಳೆದೊಂದು ವಾರದಿಂದ ಮತ್ತೆ ಆರಂಭಿಸಲಾಗಿತ್ತು.

ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು,ಈಗಾಗಲೇ ಎರಡು ಕಾಡಾನೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದ್ದು,ಮೂರನೇ ಪುಂಡಾನೆ ಭೈರ ಸೆರೆಯಾಗಿದೆ. ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಹರ್ಷ ಎಂಬ ಸಾಕಾನೆಗಳು ಕಾರ್ಯಾಚರಣೆಯ ಭಾಗವಾಗಿದ್ದವು.

ಲಾರಿಗೆ ಹತ್ತಿಸಲು ಹರಸಾಹಸ
ಎಷ್ಟೇ ಪ್ರಯತ್ನ ಪಟ್ಟರೂ ಮಾತು ಕೇಳದ ಭೈರನನ್ನ ತುಂತುರು ಮಳೆಯ ನಡುವೆ ಲಾರಿಗೆ ಹತ್ತಿಸಲು ಮಾವುತರು ಹರಸಾಹಸಪಟ್ಟರು. ಕೊನೆಗೂ ಕಾಡಾನೆಯನ್ನ ಲಾರಿಗೆ ಹತ್ತಿಸುವಲ್ಲಿ ಸಾಕಾನೆಗಳು ಯಶಸ್ವಿಯಾದವು.ಕಾರ್ಯಾಚರಣೆ ನೋಡಲು ಭಾರೀ ಜನಸ್ತೋಮ ಸೇರಿತ್ತು.

ಭೈರನನ್ನು ನಾಗರಹೊಳೆಗೆ ಅಧಿಕಾರಿಗಳು ಸ್ಥಳಾಂತರಿಸಲಾಗುತ್ತಿದೆ. ಹಲವು ವರ್ಷಗಳಿಂದ ಭಾರೀ ಉಪಟಳ ನೀಡುತ್ತಿದ್ದ ಭೈರ ಇಬ್ಬರ ಜೀವವನ್ನು ತೆಗೆದಿದ್ದ.

ಭೈರನನ್ನು ಹಿಡಿಯಲು ವೈದ್ಯರು, 100ಕ್ಕೂ ಅಧಿಕ ಅರಣ್ಯ ಸಿಬ್ಬಂದಿ, ಹಲವು ಆನೆಗಳನ್ನು ಕರೆಸಿಕೊಂಡು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಕಾರ್ಯಾಚರಣೆಗೆ ಬಂದಿದ್ದ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿದ್ದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿತ್ತು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.