ಪಿಯು ಪರೀಕ್ಷೆ: ಹೊಸ ಮಂಡಳಿ ಸಿದ್ಧತೆ


Team Udayavani, Dec 13, 2022, 6:45 AM IST

ಪಿಯು ಪರೀಕ್ಷೆ: ಹೊಸ ಮಂಡಳಿ ಸಿದ್ಧತೆ

ದಾವಣಗೆರೆ: ಇದೇ ಮೊದಲ ಬಾರಿಗೆ ನೂತನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೂಲಕ ಪದವಿ ಪೂರ್ವ ಶಿಕ್ಷಣ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರಕಾರ, ಇದಕ್ಕಾಗಿ ಸಿದ್ಧತೆ ನಡೆಸುತ್ತಿದೆ.

ಪ್ರಸಕ್ತ ಸಾಲಿನ (2022-23)ನೇ ಸಾಲಿನ ಪದವಿ ಪೂರ್ವ ಪರೀಕ್ಷೆ ಗಳನ್ನು ನೂತನ ಮಂಡಳಿ ಮೂಲಕ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಪರೀಕ್ಷಾ ಕಾರ್ಯ ನಿರ್ವಹಣೆಯಲ್ಲಿ ಅನುಭವ ಇರುವ ಅಧಿಕಾರಿ ಹಾಗೂ ಸಿಬಂದಿಯನ್ನು ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಪದವಿ ಪೂರ್ವ ಪರೀಕ್ಷಾ ಕಾರ್ಯ ಪೂರ್ಣ ಗೊಳ್ಳುವವರೆಗೆ ನಿಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಗೊಳಿಸಿರುವ ಸರಕಾರ, ಇತ್ತೀಚೆಗಷ್ಟೇ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಮರು ನಾಮಕರಣ ಮಾಡಿತ್ತು.

ಬಹು ಆಯ್ಕೆ ಪ್ರಶ್ನೆಗಳು
ಹೊಸ ಪರೀಕ್ಷಾ ಮಂಡಳಿ ನಡೆಸುವ ಪದವಿ ಪೂರ್ವ ಶಿಕ್ಷಣ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಈ ಬಾರಿ 20 ಅಂಕಗಳ ಬಹು ಆಯ್ಕೆ ಪ್ರಶ್ನೆಗಳಿವೆ. ಒಂದು ಪ್ರಶ್ನೆಗೆ ನಾಲ್ಕು ಆಯ್ಕೆ ಇರಲಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಆಯ್ಕೆ ಪ್ರಶ್ನೆಗಳಿಗೆ ಉತ್ತರಿಸಿ 20 ಅಂಕ ಗಳಿಸಲು ಸಹಕಾರಿಯಾಗಲಿದೆ. ಇದು ಫ‌ಲಿತಾಂಶವನ್ನೂ ಹೆಚ್ಚಿಸಲಿದೆ ಎಂಬುದು ಇಲಾಖೆಯ ನಿರೀಕ್ಷೆ.

ವಿಲೀನಕ್ಕೆ ಪರ-ವಿರೋಧ
ಎಸೆಸೆಲ್ಸಿ ಮಂಡಳಿ ಹಾಗೂ ಪಿಯು ಇಲಾಖೆ ವಿಲೀನ ಪ್ರಕ್ರಿಯೆಗೆ ಪ.ಪೂ. ಇಲಾಖೆಯಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿದೆ.ವಿಲೀನದಿಂದ ಮಂಡಳಿ ವ್ಯಾಪ್ತಿಯ 9, 10ನೇ ತರಗತಿಗಳಿಗೆ ಹಿರಿಯ ಉಪನ್ಯಾಸಕರು ಪಾಠ ಮಾಡಲು ಹೋಗಬೇಕಾಗಬಹುದು. ಇದು ಹಿಂಭಡ್ತಿ ಎನ್ನಿಸಬಹುದು. ಜತೆಗೆ, ಬಹು ಆಯ್ಕೆ ಪ್ರಶ್ನೆಯಿಂದ ತೇರ್ಗಡೆ ಆಗುವವರ ಸಂಖ್ಯೆ ಹೆಚ್ಚಬಹುದು. ಆದರೆ ಶಿಕ್ಷಣದ ಗುಣಮಟ್ಟ ಕುಸಿಯುವ ಸಾಧ್ಯತೆ ಇದೆ ಎಂಬುದು ವಿಲೀನವನ್ನು ವಿರೋಧಿಸುವವರ ವಾದ. ಮಂಡಳಿ ವಿಲೀನದಿಂದ ಪ.ಪೂ. ವಿಭಾಗಕ್ಕೂ ಪ್ರತ್ಯೇಕ ಆಡಳಿತ, ಶಿಕ್ಷಣಕ್ಕೆ ನಿರ್ವಹಣ ವಿಭಾಗ ದೊರೆತು ಸಿಬಂದಿ ಸಂಖ್ಯೆ ಹೆಚ್ಚಾಗಲಿದೆ. ಪ್ರೌಢಶಾಲಾ ಶಿಕ್ಷಕರ ಜತೆಗೆ ಪಿಯು ಅಧಿಕಾರಿ, ಸಿಬಂದಿಗೂ ಮುಂಭಡ್ತಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಪಿಯು ಮೂಲ ಸೌಲಭ್ಯ ಹೆಚ್ಚಾಗಲಿದೆ. 9-10ನೇ ತರಗತಿಗಳಿಗೂ ಉಪನ್ಯಾಸಕರು ಬೋಧಿಸುವುದರಿಂದ ವಿದ್ಯಾರ್ಥಿಗಳ ಪದವಿ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂಬುದು ವಿಲೀನವನ್ನು ಬೆಂಬಲಿಸುವವರ ವಾದ.

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.